ಕಿರು ವಿಮಾನ ನಿಲ್ದಾಣ: ಸ್ಥಳ ಸಮೀಕ್ಷೆ ಪೂರ್ಣ


Team Udayavani, Oct 2, 2018, 6:00 AM IST

01ksde.jpg

ಕಾಸರಗೋಡು: ಜಿಲ್ಲೆಯ ಪೆರಿಯ ಕನಿಕುಂಡಿನಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಿಸಲು ಅಗತ್ಯವಿರುವ  ಸ್ಥಳದ ಸಮೀಕ್ಷೆ ಪೂರ್ತೀಕರಿಸಲಾಗಿದೆ. ಕಿರು ವಿಮಾನ ನಿಲ್ದಾಣ ಸ್ಥಾಪಿಸಲು 80 ಎಕರೆ ಸ್ಥಳ ಅಗತ್ಯವಿದೆ. ಈ ಪೈಕಿ 28.50 ಎಕರೆ ಸರಕಾರಿ ಭೂಮಿ ಇದೆ. ಬಾಕಿ 51.50 ಎಕ್ರೆ ಸ್ಥಳದ ಅಗತ್ಯವಿದೆ. ಅದನ್ನು ಪರಿಸರದ ಖಾಸಗಿ ವ್ಯಕ್ತಿಗಳಿಂದ ಖರೀದಿಸಲಾಗುವುದು.

20 ಮನೆಯವರು ಜಮೀನು 
ಬಿಟ್ಟುಕೊಡಲು ಸಿದ್ಧ

ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನನ್ನು ಬಿಟ್ಟುಕೊಡಲು ಪರಿಸರದ 20 ಮನೆಯವರು ಒಪ್ಪಿಗೆ ನೀಡಿದ್ದಾರೆಂದು ಕಂದಾಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾವು ಬಿಟ್ಟುಕೊಡುವ ಸ್ಥಳಕ್ಕೆ ತಮಗೆ ಸೂಕ್ತ ನಷ್ಟ ಪರಿಹಾರ ನೀಡಬೇಕೆಂದು ಬೇಡಿಕೆಯನ್ನು ಈ ಕುಟುಂಬದವರು ಮುಂದಿರಿಸಿದ್ದಾರೆ. ಅವರ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯದ ಭೂ ವಶಪಡಿಸುವ ಕ್ರಮಕ್ಕೆ ಶೀಘ್ರ ಚಾಲನೆ ನೀಡಲಾಗುವುದೆಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಕಿರು ವಿಮಾನ ನಿಲ್ದಾಣ ಕಾರ್ಯಾರಂಭಗೊಂಡಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ. ಕಣ್ಣೂರಿನಲ್ಲಿ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣ ಈಗಾಗಲೇ ಕಾರ್ಯಾರಂಭಗೊಳ್ಳಲಿದೆ. ಅಲ್ಲಿಂದ ಮತ್ತು ಮಂಗಳೂರು ಹಾಗೂ ಮತ್ತಿತರ ವಿಮಾನ ನಿಲ್ದಾಣಗಳಿಂದ ಪೆರಿಯ ಕಿರು ವಿಮಾನ ನಿಲ್ದಾಣಗಳಿಗೆ ಕಿರು ವಿಮಾನಗಳಲ್ಲಿ ಪ್ರವಾಸಿಗರನ್ನು ಜಿಲ್ಲೆಗೆ ತರಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಮಾತ್ರವಲ್ಲ ಇದರಿಂದ ಬೇಕಲ ಪ್ರವಾಸೋದ್ಯಮ ಯೋಜನೆ ಮಾತ್ರವಲ್ಲ, ಜಿಲ್ಲೆಯ ಇತರ ಎಲ್ಲಾ ಪ್ರವಾಸಿ ಕೇಂದ್ರಗಳಿಗೆ ದೇಶಿ ಮತ್ತು ವಿದೇಶಿ ಪ್ರವಾಸಿಗಳು ಹರಿದು ಬರುವ ಸಾಧ್ಯತೆಯಲ್ಲಿ ಹೆಚ್ಚಳವಾಗಲಿದೆ. ಈ ಮೂಲಕ ಅದು ಜಿಲ್ಲೆಗೆ ಅಂತಾರಾಷ್ಟ್ರೀಯ  ಭೂಪಟದಲ್ಲಿ ಪ್ರಮುಖ ಸ್ಥಾನ ನೀಡಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಸ್ಥಳದ ಮೂರು ಕಿಲೋ ಮೀಟರ್‌ ದೂರದಲ್ಲಿ ಬೇಕಲ ಕೋಟೆ ಇದೆ. ಅಲ್ಲಿಂದ ಕೆಲವೇ ಕಿ.ಮೀ. ದೂರದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ, ಕ್ಯಾಶ್‌ ಕೌಂಟರ್‌ ಅಲ್ಲದೆ ನೂತನವಾಗಿ ನಿರ್ಮಿಸುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಆನಂದಾಶ್ರಮ ಅಲ್ಲಿಂದ ಕೆಲವೇ ಮೀಟರ್‌ ದೂರದಲ್ಲಿದೆ. ಮಾತ್ರವಲ್ಲ ಚಂದ್ರಗಿರಿ ಕೋಟೆ, ಕಾಸರಗೋಡು ಕೋಟೆ, ಆರಿಕ್ಕಾಡಿ ಕೋಟೆ, ಪೊವ್ವಲ್‌ (ಪೊಳಲಿ) ಕೋಟೆ, ಪೊಸಡಿಗುಂಪೆ ಮತ್ತಿತರ ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರ ಪ್ರವಾಹ ಮತ್ತು ಅವುಗಳ ಅಭಿವೃದ್ಧಿಗೂ ಈ ಕಿರು ವಿಮಾನ ನಿಲ್ದಾಣ ಸಹಾಯಕವಾಗಲಿದೆ.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.