ಸಂಬಾರ ಬೆಳೆಗಳ ತರಬೇತಿ ಕಾರ್ಯಾಗಾರ
Team Udayavani, Jun 28, 2019, 5:50 AM IST
ವಿದ್ಯಾನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು ತಾಲೂಕಿನ ಚಂದ್ರಗಿರಿ ವಲಯದ ಕುಂಡಂಗುಳಿ ಕಾರ್ಯಕ್ಷೇತ್ರದಲ್ಲಿ ಸಂಬಾರ ಬೆಳೆಗಳ ತರಬೇತಿ ಕಾರ್ಯಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಜನ ಜಾಗೃತಿ ವೇದಿಕೆ ಕಾಸರಗೋಡು ತಾಲೂಕಿನ ಸದಸ್ಯರು ಹಾಗೂ ಪ್ರಗತಿಪರ ಕೃಷಿಕರಾಗಿರುವ ರಾಮಯ್ಯ ರೈ ಕಲ್ಲಡ್ಕರವರು ಸಾಮಾನ್ಯ ಕೃಷಿ ಪದ್ಧತಿಯಲ್ಲಿ ಉಪ ಬೆಳೆಯಾಗಿ ಕಾಳುಮೆಣಸು ಕೃಷಿಯನ್ನು ಮಾಡಿ ಉತ್ತಮ ಆದಾಯ ಗಳಿಸಬಹುದು ಜನಸಾಮಾನ್ಯರು ಕೃಷಿಯ ಮಹತ್ವವನ್ನು ಅರಿತು ಕೃಷಿ ಉದ್ಯಮವಾಗಿ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಸಂಬಾರ ಬೆಳೆ ಕೃಷಿಯ ಪಾಲನೆ -ಪೋಷಣೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಸಚಿನ್ ಕುಮಾರ್ ಹಾಗೂ ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಕುಮಾರಿ ವಂದಿಸಿದರು. ಕೃಷಿ ಮೇಲ್ವಿಚಾರಕರು ಕಾರ್ಯಕ್ರಮ ನಿರೂಪಿಸಿದರು.