“ಬಾಡುವುದು ಚಿಗುರುವುದು ಕೃಷಿಯ ಸಹಜ ಕ್ರಿಯೆ’
ಕೃಷಿ ದರ್ಶನ, ಸಂವಾದ, ಸಸಿ ವಿತರಣೆ
Team Udayavani, Jul 2, 2019, 5:55 AM IST
ಏತಡ್ಕ: ಅತಿವೃಷ್ಟಿ, ಅನಾವೃಷ್ಟಿ ಪ್ರಕೃತಿ ಸಹಜ. ಬಾಡುವುದು, ಚಿಗುರುವುದು ಕೃಷಿಯ ಅಂತಃಸತ್ವ. ಎದೆಗುಂದದೆ ಮುನ್ನಡೆಯುವವನೇ ನಿಜವಾದ ಕೃಷಿಕ ಎಂಬುದಾಗಿ ಪ್ರಗತಿಪರ ಕೃಷಿಕ ಸತ್ಯನಾರಾಯಣ ಡಿ.ಕೆ. ಹೇಳಿದರು.
ಏತಡ್ಕದ ಕುಂಬಾxಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ ಡಾ| ವೇಣುಗೋಪಾಲ್ ಕಳೆಯತ್ತೋಡಿ ಅವರ ಗ್ರೀನ್ ವ್ಯೂ ಮನೆಯಲ್ಲಿ ಏರ್ಪಡಿಸಲಾದ ಕೃಷಿ ದರ್ಶನ, ಸಂವಾದ ಮತ್ತು ಸಸಿ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಕೃಷಿ ಭೂಮಿಯಲ್ಲಿ ಮರಗಳನ್ನು ಬೆಳೆಸುವುದರಿಂದ ಪರಿಸರ ಸಂರಕ್ಷಣೆಯ ಜತೆಗೆ ಹೇಗೆ ಆರ್ಥಿಕವಾಗಿ ಲಾಭ ಗಳಿಸಬಹುದು ಎಂಬುದನ್ನು ಅವರು ಸೋದಾಹರಣವಾಗಿ ವಿವರಿಸಿದರು.
ಅರಣ್ಯ ನಾಶವನ್ನು ತಡೆಗಟ್ಟಲು ಪರಿಣಾಮಕಾರಿ ಕಾನೂನಿನ ಅನುಷ್ಠಾನದ ಅಗತ್ಯವಿದೆ ಎಂದರು.
ವಾರ್ಡ್ ಸದಸ್ಯ ಎಸ್. ಮೊಹಮ್ಮದ್ ಅವರು ಅಬ್ದುಲ್ ರಹಮಾನ್ ಹಾಜಿ ಅವರಿಗೆ ಸಸಿ ಹಸ್ತಾಂತರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ ಇಂದಿನ ದಿನಗಳಲ್ಲಿ ಜಲ ಮರುಪೂರಣ ಮತ್ತು ಮರ ಬೆಳೆಸುವಿಕೆಯ ಅಗತ್ಯವನ್ನು ಒತ್ತಿ ಹೇಳಿದರು. ವಾರ್ಡ್ ಸದಸ್ಯೆ ಎಲಿಝಬೆತ್ ಕ್ರಾಸ್ತ ಶುಭಾಶಂಸನೆಗೈದರು.
ಅಧ್ಯಕ್ಷತೆ ವಹಿಸಿದ ಗ್ರಂಥಾಲಯದ ಅಧ್ಯಕ್ಷ ಕೆ.ನರಸಿಂಹ ಭಟ್ ಮಾತನಾಡಿ ಜನರ ಸಹಭಾಗಿತ್ವ ಇದ್ದರೆ ಯಾವುದೇ ಕಾರ್ಯಕ್ರಮ ಯಶಸ್ವಿಯಾಗುವುದು ಎಂದು ಹೇಳಿ ಮುಖ್ಯ ಅತಿಥಿಗಳ ಮಾತನ್ನು ಪುಷ್ಟೀಕರಿಸಿದರು. ಮುಖ್ಯ ಅತಿಥಿಗಳೊಡನೆ ಸಂವಾದ ನಡೆಯಿತು. ಸಭಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು.
ವೈಷ್ಣವಿ, ಅತ್ರೇಯಿ, ದೀಪ್ತಿ ಪ್ರಾರ್ಥನೆ ಹಾಡಿದರು. ಡಾ| ವೇಣು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ವೈ.ಕೆ.ಗಣಪತಿ ಭಟ್ ವಂದಿಸಿದರು.
ಕಾರ್ಯಕ್ರಮದ ನೆನಪಿಗಾಗಿ ಗಿಡ ನೆಡಲಾಯಿತು. ಭಾಗವಹಿಸಿದವರಿಗೆ ಅರಣ್ಯ ಇಲಾಖೆಯಿಂದ ದೊರೆತ 200 ಸಸಿಗಳನ್ನು ವಿತರಿಸಲಾಯಿತು.
ಸಭಾ ಕಾರ್ಯಕ್ರಮಕ್ಕೆ ಮೊದಲು ಆತಿಥೇಯರ ಕೃಷಿ ಕ್ಷೇತ್ರವನ್ನು ವೀಕ್ಷಿಸಲಾಯಿತು. ಅವರ ಉತ್ತಮ ಕೃಷಿಯ ಬಗ್ಗೆ ನೋಡುಗರು ಮೆಚ್ಚುಗೆ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!