ಬತ್ತಿದ ಜಲಾಶಯ: ಹಿಂದೇಟು ಹಾಕುತ್ತಿರುವ ಪ್ರವಾಸಿಗರು

ನೀರು ವಿತರಣೆ ನಿಲುಗಡೆ ಆತಂಕ

Team Udayavani, May 22, 2019, 6:20 AM IST

battida-jalashaya

ಕಾಸರಗೋಡು: ಬೇಸಗೆಯ ಬೇಗೆಯಿಂದಾಗಿ ಕಾಸರಗೋಡು ಜಿಲ್ಲೆಯ ಜಲಮೂಲಗಳು ಸಂಪೂರ್ಣವಾಗಿ ಬತ್ತಿಹೋಗಿದ್ದು, ಇದು ಪ್ರವಾಸಿಗರ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಜಿಲ್ಲೆಯ ಪ್ರವಾಸೋದ್ಯಮ ವಲಯಕ್ಕೆ ನೀರಿನ ಸಮಸ್ಯೆ ಆವರಿಸಿದೆ. ಅದರಲ್ಲೂ ಹಿನ್ನೀರು ಸಹಿತ ಇನ್ನಿತರ ಜಲಾಶಯವಿರುವ ಪ್ರೇಕ್ಷಣೀಯ ಸ್ಥಳಗಳಲ್ಲಿ ನೀರಿಲ್ಲದೆ ಪ್ರವಾಸಿಗರು ಅತ್ತ ಕಡೆ ಸುಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ.

ಬೇಕಲ ಕೋಟೆಯ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರ ಹಾಗೂ ಸಮೀಪದ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಸಂಗ್ರಹಿಸುತ್ತಿದ್ದ ಹೊಳೆಯು ಇದೀಗ ಬತ್ತಿ ಬರಡಾಗಿದೆ. ಪೊಯಿನಾಚಿ ಬಳಿಯ ಕರಿಚ್ಚೇರಿ ಹೊಳೆಯ ಕಾಯಕುನ್ನು ಪ್ರದೇಶದಲ್ಲಿ ನೀರು ಪೂರ್ತಿಯಾಗಿ ಬತ್ತಿ ಒಣಗುತ್ತಿದೆ.

ಧಾರಾಕಾರ ಮಳೆ ಸುರಿದು ಇಲ್ಲಿನ ಹೊಳೆಯಲ್ಲಿ ನೀರು ತುಂಬದಿದ್ದರೆ ಕುಡಿಯುವ ನೀರು ಪೂರೈಕೆ ಮೊಟಕುಗೊಳ್ಳಲಿದೆ.

ಪಂಪಿಂಗ್‌ ಸ್ಟೇಷನ್‌ ಬಳಿ ಹೊಯ್ಗೆ ಮಾತ್ರ
ಕರಿಚ್ಚೇರಿ ಹೊಳೆಯ ಕಾಯಕುನ್ನು ಬಂಗಾಡ್‌ನ‌ಲ್ಲಿ ಕುಡಿಯುವ ನೀರಿನ ಪಂಪಿಂಗ್‌ ಸ್ಟೇಷನ್‌ ಸ್ಥಾಪಿಸಲಾಗಿದೆ. ಇದಕ್ಕಾಗಿ ನಿರ್ಮಿಸಿದ ಅಣೆಕಟ್ಟಿನಿಂದ ಅಲ್ಪದೂರದಲ್ಲಿ ಹೊಳೆಯ ಮಧ್ಯ ಭಾಗದಲ್ಲಿ ನೀರು ಸಂಗ್ರಹದ ಬಾವಿ ಹಾಗೂ ಪಂಪ್‌ ಹೌಸ್‌ ನಿರ್ಮಿಸಲಾಗಿದೆ. ಈ ಸ್ಥಳದಲ್ಲಿ ಹೊಳೆ ಪೂರ್ಣವಾಗಿ ಬತ್ತಿದ್ದು, ಪಂಪಿಂಗ್‌ ಸ್ಟೇಷನ್‌ ಸನಿಹದಲ್ಲಿ ಇದೀಗ ಹೊಯ್ಗೆ ಮಾತ್ರವೇ ಕಾಣಿಸುತ್ತಿದೆ.

ಕುಡಿಯುವ ನೀರು ಯೋಜನೆ ಜಾರಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಕರಿಚ್ಚೇರಿ ಹೊಳೆ ಇಷ್ಟೊಂದು ಬತ್ತಿರುತ್ತದೆ ಎಂದು ಈ ಪ್ರದೇಶದ ಜನರು ಹೇಳುತ್ತಾರೆ.

ಇದೇ ಸ್ಥಿತಿ ಮುಂದುವರಿದರೆ ನೀರು ವಿತರಣೆ ಪೂರ್ಣವಾಗಿ ನಿಲ್ಲಬಹುದು ಎಂದು ಆತಂಕಪಡಲಾಗಿದೆ.

ಹಾಗಾದಲ್ಲಿ ಪಳ್ಳಿಕೆರೆ, ಚೆಮ್ನಾಡು, ಉದುಮ ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಬಾಧಿಸಲಿದೆ. ಪೆರಿಯ ನವೋದಯ ವಿದ್ಯಾಲಯಕ್ಕೆ ನೀರು ತಲುಪಿಸುವ ಇಡೀ ವ್ಯವಸ್ಥೆಯು ಕಾಯಕುನ್ನು ಕುಡಿಯುವ ನೀರು ಯೋಜನೆಯದ್ದಾಗಿದೆ.

ಬೇಕಲಕೋಟೆ ಮಾತ್ರವಲ್ಲದೆ ಜಿಲ್ಲೆಯ ಇನ್ನಿತರ ಕೋಟೆ ಕೊತ್ತಲಗಳು, ಪ್ರವಾಸಿ ತಾಣಗಳು, ಆಕರ್ಷಣೀಯ ಪ್ರದೇಶಗಳು, ಸಮುದ್ರ ಕಿನಾರೆ ಭಾಗಗಳು ಅಲ್ಲದೆ ಪಾರ್ಕ್‌ಗಳು ನೀರಿನ ಕೊರತೆಯಿಂದ ಸಮಸ್ಯೆ ಎದುರಿಸುತ್ತಿವೆ. ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರನ್ನು ಅತೀ ಹೆಚ್ಚು ಕೈಬೀಸಿ ಕರೆಯುವ ಬೇಕಲಕೋಟೆ ಪರಿಸರದಲ್ಲಿ ಜಲಕ್ಷಾಮ ಎದುರಾಗಿದೆ. ಇದರಿಂದಾಗಿ ಪ್ರವಾಸಿಗರಿಗೆ ಅಗತ್ಯದ ನೀರು ಲಭಿಸದೆ ಅಲ್ಲಿಗೆ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.

ರಾಣಿಪುರಂನಲ್ಲೂ ನೀರಿನ ಸಮಸ್ಯೆ
ಜಿಲ್ಲೆಯ ರಾಣಿಪುರಂ ಸಹಿತ ಇನ್ನಿತರ ಪ್ರವಾಸಿ ಕೇಂದ್ರಗಳಲ್ಲೂ ನೀರಿನ ಸಮಸ್ಯೆ ಕಂಡುಬರುತ್ತಿದೆ. ಮಲೆನಾಡು ಭಾಗದ ಪ್ರವಾಸಿ ತಾಣಗಳಲ್ಲಿ ಕೂಡ ನೀರಿನ ಪೂರೈಕೆ ಕಡಿಮೆಯಾಗಿದೆ. ಪ್ರವಾಸಿ ಕೇಂದ್ರಗಳಲ್ಲಿರುವ ಜಲಮೂಲಗಳು ಅಥವಾ ಜಲಾಶಯಗಳು ಬತ್ತಿ ಬರಡಾಗಿದ್ದು, ಇದರಿಂದಾಗಿ ಹೊರಗಿನಿಂದ ವಾಹನಗಳಲ್ಲಿ ನೀರು ಪೂರೈಕೆಯಾಗುತ್ತಿದೆ. ಇದು ಅಗತ್ಯಕ್ಕೆ ತಕ್ಕಂತೆ ನಡೆಯುತ್ತಿಲ್ಲ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.

ಬೇಸಗೆ ಮಳೆ ಬೀಳದಿದ್ದಲ್ಲಿ ತೀವ್ರ ಸಂಕಷ್ಟ
ಕಾಸರಗೋಡು ಜಿಲ್ಲೆಯಲ್ಲಿ ಈ ಬಾರಿ ಬೇಸಗೆ ಮಳೆಯ ಭಾರೀ ಕೊರತೆಯಿದೆ. ಸರಿಯಾದ ಬೇಸಗೆ ಮಳೆ ಬೀಳದಿರುವುದರಿಂದ ಭೂಮಿ ಸಂಪೂರ್ಣ ವಾಗಿ ಒಣಗಿದ್ದು, ಜಲಾಶಯಗಳಲ್ಲಿ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಇನ್ನು ಜೂನ್‌ ಮೊದಲ ವಾರದಲ್ಲಿ ಮಳೆಗಾಲವೇ ಆರಂಭವಾಗುವುದಾದರೆ ಮುಂದಿನ 15 ದಿನಗಳಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು ಇನ್ನಷ್ಟು ಸಮಸ್ಯೆಯ ಸುಳಿಯಲ್ಲಿ ಸಿಲುಕಲಿವೆ. ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಈ ಬಾರಿ ಬೇಸಗೆ ಮಳೆ ತೀರಾ ಕಡಿಮೆಯಾಗಿದ್ದು, ಇದು ಪ್ರವಾಸೋದ್ಯಮ ರಂಗದ ಹಿನ್ನಡೆಗೂ ಕಾರಣವಾಗಿದೆ. ಕುಡಿಯುವ ನೀರಿನ ಭಾರೀ ತೊಂದರೆ ಅನುಭವಿಸುತ್ತಿರುವ ಜಿಲ್ಲೆ ಯಲ್ಲಿ ನೀರಿನಿಂದಾವೃತ ಪ್ರವಾಸಿ ಕೇಂದ್ರವನ್ನು ಉಳಿಸಿ ಬೆಳೆಸಲು ಸಾಧ್ಯವೇ ಎಂಬ ಪ್ರಶ್ನೆಯೂ ಮೂಡಿದೆ.

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.