ರೈಲು ವಿಧ್ವಂಸಕ್ಕೆ ನಿರಂತರ ಯತ್ನ : ಹಳಿಯಲ್ಲಿತ್ತು 35 ಕೆಜಿ ಕಾಂಕ್ರೀಟ್ ತುಂಡು!
Team Udayavani, Aug 24, 2022, 12:43 PM IST
ಕಾಸರಗೋಡು : ಜಿಲ್ಲೆಯಲ್ಲಿ ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇರಿಸಿ ವಿಧ್ವಂಸಕ ಕೃತ್ಯ ಎಸಗುವ ಯತ್ನ ನಿರಂತರ ಮುಂದುವರಿದಿದೆ.
ಕಾಸರಗೋಡು ರೈಲು ನಿಲ್ದಾಣ ಸಮೀಪ ತಳಂಗರೆ ಪರಿಸರದಲ್ಲಿ ದುಷ್ಕರ್ಮಿಗಳು ಮಂಗಳವಾರ ಹಳಿಯಲ್ಲಿ ಕಲ್ಲುಗಳನ್ನಿರಿಸಿ ಬುಡಮೇಲು ಕೃತ್ಯಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರವಿವಾರವೂ 3 ಕಡೆ ಯತ್ನ
ಜಿಲ್ಲೆಯ ತೃಕ್ಕನ್ನಾಡು, ಕುಂಬಳೆ, ಹೊಸದುರ್ಗದಲ್ಲಿ ರೈಲು ಹಳಿಯಲ್ಲಿ ಬೃಹತ್ ಗಾತ್ರದ ಕಲ್ಲುಗಳನ್ನು ಮತ್ತು ಕಬ್ಬಿಣದ ಸರಳುಗಳನ್ನಿರಿಸಿದ ಘಟನೆ ರವಿವಾರ (ಆ. 21) ನಡೆದಿದೆ.
ಕೋಟಿಕುಳಂ-ಬೇಕಲ ಮಧ್ಯೆ ತೃಕ್ಕನ್ನಾಡು ದೇಗುಲದ ಹಿಂದುಗಡೆಯಿರುವ ರೈಲು ಹಳಿಯಲ್ಲಿ ಕಬ್ಬಿಣದ ಸರಳುಗಳು ಒಳಗೊಂಡ ಬೃಹತ್ ಗಾತ್ರದ ಕಾಂಕ್ರೀಟ್ ತುಂಡುಗಳನ್ನಿರಿಸಿ ಆ ಮೂಲಕ ರೈಲುಗಳನ್ನು ಬೀಳಿಸುವ ಸಂಚು ನಡೆಸಲಾಗಿದೆ. ರೈಲ್ವೇ ಗಾರ್ಡ್ ಹಳಿಯಲ್ಲಿ ಕಾಂಕ್ರೀಟ್ ತುಂಡುಗಳನ್ನು ಇರಿಸಿರುವುದನ್ನು ಕಂಡು ಸಕಾಲದಲ್ಲಿ ಅದನ್ನು ಎತ್ತಿ ಬದಿಗೆ ಎಸೆದು ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದರು. ಸುಮಾರು 35 ಕಿಲೋ ತೂಕದ ಕಾಂಕ್ರೀಟ್ ತುಂಡನ್ನು ಹಳಿ ಮೇಲೆ ಇರಿಸಲಾಗಿತ್ತು. ಈ ಬಗ್ಗೆ ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂಬಳೆ ರೈಲು ನಿಲ್ದಾಣದ ಸುಮಾರು 400 ಮೀಟರ್ ಉತ್ತರ ಭಾಗದಲ್ಲಿ ಹಳಿಗಳ ಮೇಲೆ ಕಲ್ಲುಗಳನ್ನು ಇರಿಸಿ ಕೃತ್ಯಕ್ಕೆ ಯತ್ನಿಸಲಾಗಿದೆ. ಹಳಿಯ ಮೇಲೆ ಕಲ್ಲುಗಳನ್ನು ಇರಿಸಿರುವುದು ಸ್ಥಳೀಯರ ಗಮನಕ್ಕೆ ಬಂದು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಬಗ್ಗೆ ರೈಲ್ವೇ ಸೆಕ್ಷನ್ ಆಫೀಸರ್ ರಂಜಿತ್ ಕುಮಾರ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸದುರ್ಗದಲ್ಲಿ ರೈಲಿಗೆ ಕಲ್ಲು ಎಸೆಯಲಾಗಿದೆ. ಈ ಬಗ್ಗೆ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ಈ ಮೂರು ಘಟನೆಗಳನ್ನು ರೈಲ್ವೇ ಭದ್ರತಾ ಪಡೆ (ಆರ್ಪಿಎಫ್), ರೈಲ್ವೇ ಪೊಲೀಸರು ಮತ್ತು ಲೋಕಲ್ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ