Kasaragod ರೈಲುಗಳಿಗೆ ಕಲ್ಲು ತೂರಾಟ: ಕಠಿನ ಕ್ರಮಕ್ಕೆ ಡಿಜಿಪಿ ನಿರ್ದೇಶ


Team Udayavani, Aug 22, 2023, 11:15 PM IST

Kasaragod ರೈಲುಗಳಿಗೆ ಕಲ್ಲು ತೂರಾಟ: ಕಠಿನ ಕ್ರಮಕ್ಕೆ ಡಿಜಿಪಿ ನಿರ್ದೇಶ

ಕಾಸರಗೋಡು: ರಾಜ್ಯದಲ್ಲಿ ರೈಲುಗಳಿಗೆ ವ್ಯಾಪಕವಾಗಿ ಕಲ್ಲು ತೂರಾಟ ನಡೆಸುವುದನ್ನು ಗಂಭೀರವಾಗಿ ಪರಿಗಣಿಸಿ ತಡೆಗಟ್ಟಲು ಕಠಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಡಾ| ಶೇಖ್‌ ದರ್ವೇಶ್‌ ಸಾಹಿಬ್‌ ರಾಜ್ಯದ ಜಿಲ್ಲೆಗಳ ವರಿಷ್ಠ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

ಈ ನಿರ್ದೇಶವನ್ನು ಎಲ್ಲ ಜಿಲ್ಲಾ ಪೊಲೀಸ್‌ ಕಚೇರಿಗಳಿಗೆ ಈಗಾಗಲೇ ಕಳುಹಿಸಿಕೊಡಲಾಗಿದ್ದು, ಜಿಲ್ಲಾ ವರಿಷ್ಠ ಪೊಲೀಸ್‌ ಅಧಿಕಾರಿಗಳೇ ತನಿಖೆ ನಡೆಸಬೇಕೆಂದು ತಿಳಿಸಲಾಗಿದೆ.

ರೈಲುಗಳಿಗೆ ಕಲ್ಲು ತೂರಾಟ ನಡೆದ ಸ್ಥಳದ ಸಮೀಪದ ಮನೆಗಳಲ್ಲಿ ಸಿಸಿ ಕೆಮರಾಗಳಿದ್ದಲ್ಲಿ ಸಮಗ್ರವಾದ ರೀತಿಯಲ್ಲಿ ಪರಿಶೀಲಿಸಬೇಕು. ಅಲ್ಲದೆ ರೈಲು ಹಳಿಗಳ ಸಮೀಪದ ರಸ್ತೆಗಳ ಸಿಸಿ ಕೆಮರಾಗಳನ್ನು ಪರಿಶೀಲಿಸಬೇಕು. ಅದರಲ್ಲಿ ದುಷ್ಕರ್ಮಿಗಳ ಮಾಹಿತಿ ಲಭಿಸಿದಲ್ಲಿ ಅದರ ಜಾಡು ಹಿಡಿದು ಅವರನ್ನು ಬಂಧಿಸಿ ಕಠಿನ ಕ್ರಮ ತೆಗೆದುಕೊಳ್ಳಬೇಕು. ರೈಲು ಹಳಿಗಳನ್ನು ಪೊಲೀಸರು ಪದೇಪದೆ ತಪಾಸಣೆಗೊಳಪಡಿಸಬೇಕು.

ಹಳಿಗಳ ಮತ್ತು ರೈಲು ನಿಲ್ದಾಣಗಳು ಹಾಗೂ ಪರಿಸರ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಏರ್ಪಡಿಸಬೇಕು. ರಾತ್ರಿ ಹೆಚ್ಚಿನ ನಿಗಾ ವಹಿಸಬೇಕು. ಇದಕ್ಕೆ ರೈಲ್ವೇ ಭದ್ರತಾ ಪಡೆ ಮತ್ತು ರೈಲ್ವೇ ಪೊಲೀಸರ ಸಹಾಯವನ್ನು ಬಳಸಿಕೊಳ್ಳಬೇಕೆಂದು ಡಿಜಿಪಿ ತಿಳಿಸಿದ್ದಾರೆ.

ರೈಲುಗಳಿಗೆ ಕಲ್ಲು ತೂರಾಟ ತಡೆಗಟ್ಟಲು ಸಾರ್ವಜನಿಕರ ನೆರವನ್ನು ಪಡೆಯಬೇಕು. ಕಲ್ಲು ತೂರಾಟ ನಡೆಯುತ್ತಿರುವ ಪ್ರದೇಶದ ಜನರನ್ನು ಒಳಗೊಂಡ ವಿಶೇಷ ಸಮಿತಿ ರಚಿಸಬೇಕು. ಆ ಮೂಲಕ ತನಿಖೆಗಾಗಿ ಜನರ ಸಹಭಾಗಿತ್ವ ಖಚಿತಪಡಿಸಬೇಕೆಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.