Kasaragod: ರೈಲು ಹಳಿಯಲ್ಲಿ ಕಲ್ಲು: ಎಸ್ಪಿಯಿಂದ ತನಿಖೆ
Team Udayavani, Aug 18, 2023, 10:50 PM IST
ಕಾಸರಗೋಡು: ಕಾಸರಗೋಡಿನಿಂದ 3 ಕಿ.ಮೀ. ದೂರದ ಕಳನಾಡು ರೈಲು ಸುರಂಗದ ಸಮೀಪದ ರೈಲು ಹಳಿಯಲ್ಲಿ ಕಲ್ಲು ಹಾಗು ಕ್ಲೋಸೆಟ್ಗಳ ತುಂಡುಗಳನ್ನು ಇರಿಸಿದ ಪ್ರಕರಣದ ಕುರಿತು ಇಂಟೆಲಿಜೆನ್ಸ್ ರೇಂಜ್ ಎಸ್.ಪಿ. ಸಾಬು ಶುಕ್ರವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.
ಈ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದರು. ಅಲ್ಲದೆ ತನಿಖಾ ತಂಡಕ್ಕೆ ಹಲವು ನಿರ್ದೇಶ ನೀಡಿದರು.
ಪೋರೆನ್ಸಿಕ್ ತಜ್ಞರು ಹಾಗೂ ಶ್ವಾನ ದಳವೂ ಸ್ಥಳಕ್ಕೆ ತೆರಳಿ ತನಿಖೆ ನಡೆಸಿ ಕೆಲವೊಂದು ಪುರಾವೆಗಳನ್ನು ಸಂಗ್ರಹಿಸಿದೆ.
ಈ ಘಟನೆಗೆ ಸಂಬಂಧಿಸಿ ರೈಲ್ವೇ ಕಾನೂನಿನ 150 ಎ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೇಕಲ ಡಿವೈಎಸ್ಪಿ ಸಿ.ಕೆ.ಸುನಿಲ್ ಕುಮಾರ್ ನೇತೃತ್ವದ ವಿಶೇಷ ಪೊಲೀಸ್ ತಂಡವನ್ನು ತನಿಖೆಗಾಗಿ ನೇಮಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವೈಭವ್ ಸಕ್ಸೇನಾ ಅವರ ಮೇಲ್ನೋಟದಲ್ಲಿ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ