ಸೂಡಾನ್ ಸಂಘರ್ಷ: ವೀರಾಜಪೇಟೆ ತಾಲೂಕಿನ ಕುಟುಂಬ ಸುರಕ್ಷಿತ
Team Udayavani, May 1, 2023, 7:12 AM IST
ಮಡಿಕೇರಿ: ಸೇನೆ ಹಾಗೂ ಅರೆ ಸೇನಾಪಡೆಗಳ ನಡುವಿನ ಸಂಘಷìದಿಂದ ಬಳಲಿರುವ ಸೂಡಾನ್ ದೇಶದಲ್ಲಿ ಸಿಲುಕಿದ್ದ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಒಂದು ಕುಟುಂಬವನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.
ವೀರಾಜಪೇಟೆಯ ಮೊಹಿದ್ದೀನ್ ಅವರ ಕುಟುಂಬ ಸೂಡಾನಿನ ತೀವ್ರ ಸಂಘರ್ಷದ ಪ್ರದೇಶವಾದ ಖಾರ್ತೋಮ್ನಲ್ಲಿ ಸಿಲುಕಿತ್ತು. ಜಿಲ್ಲಾ ವಿಪತ್ತು ನಿರ್ವಹಣ ಕೇಂದ್ರಕ್ಕೆ ಈ ಬಗ್ಗೆ ಮಾಹಿತಿ ಬಂದ ಕೂಡಲೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್ ಅವರು ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತ ಆರ್.ಎಂ. ಅನನ್ಯ ವಾಸುದೇವ್ ಅವರಿಗೆ ಈ ಕಾರ್ಯಾಚರಣೆಯ ಜವಾಬ್ದಾರಿಯನ್ನು ವಹಿಸಿದ್ದರು.
ಮೊಹಿದ್ದೀನ್ ಅವರ ಕುಟುಂಬದ ಜತೆಗೆ ನಿರಂತರವಾದ ಸಂಪರ್ಕ ಸಾಧಿಸಿ ಧೈರ್ಯ ತುಂಬಿದ ಅನನ್ಯ ವಾಸುದೇವ್, ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ ಹಾಗೂ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು. ಪರಿಣಾಮ 8 ತಿಂಗಳ ಹಾಗೂ 2.5 ವರ್ಷದ ಮಕ್ಕಳು ಸೇರಿದಂತೆ ಮೊಹಿದ್ದೀನ್ ಅವರ ಕುಟುಂಬದ 6 ಸದಸ್ಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕ್ಷೇಮವಾಗಿ ಕರೆತರುವಲ್ಲಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಯಶಸ್ವಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?