ರೋಗಿಗಳಿಗಿನ್ನು ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ


Team Udayavani, Sep 18, 2018, 2:55 AM IST

hospital-17-9.jpg

ಕಾಸರಗೋಡು: ಕೇರಳ ರಾಜ್ಯದ ಎಲ್ಲ ಜಿಲ್ಲೆ ಮತ್ತು ಜನರಲ್‌ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ  ಸೌಲಭ್ಯ ದೊರಕಲಿದೆ. ಈವರೆಗೆ ರಾಜ್ಯದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಮಾತ್ರವಾಗಿ ಸೀಮಿತಗೊಳಿಸಲಾಗಿದ್ದ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯಗಳು ಇನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ಜನರಲ್‌ ಆಸ್ಪತ್ರೆಗಳಲ್ಲಿ ಲಭಿಸಲಿವೆ. ಇದಕ್ಕಿರುವ ಕ್ರಮಗಳು ಹಾಗೂ ಅಗತ್ಯದ ಸೌಕರ್ಯಗಳನ್ನು ಶೀಘ್ರದಲ್ಲೇ ಏರ್ಪಡಿಸಲಾಗುವುದು ಎಂದು ಕೇರಳ ಆರೋಗ್ಯ ಖಾತೆ ಸಚಿವೆ ಕೆ.ಕೆ.ಶೈಲಜಾ ಅವರು ತಿರುವನಂತಪುರದಲ್ಲಿ  ತಿಳಿಸಿದ್ದಾರೆ.

ಈ ಯೋಜನೆಯಂತೆ ಸೂಪರ್‌ ಸ್ಪೆಷಾಲಿಟಿ ಶ್ರೇಣಿಯಲ್ಲಿರುವ ತಜ್ಞ  ಹಾಗೂ ನುರಿತ ವೈದ್ಯರನ್ನು ರಾಜ್ಯದ ಎಲ್ಲ ಜಿಲ್ಲಾ  ಮತ್ತು  ಜನರಲ್‌ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ನೇಮಿಸುವ ಕ್ರಮಗಳು ನಡೆಯುತ್ತಿವೆ. ಅದಕ್ಕಿರುವ ಅಗತ್ಯದ ಕಟ್ಟಡ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಸದ್ಯದಲ್ಲೇ ಏರ್ಪಡಿಸಲಾಗುವುದು. ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ಒದಗಿಸುವ ಸೌಲಭ್ಯಗಳನ್ನು ಕೂಡ ಒದಗಿಸಲಾಗುವುದು ಎಂದು ಸಚಿವೆ ಕೆ.ಕೆ. ಶೈಲಜಾ ವಿವರಿಸಿದರು.

ಎಂಡೋ ರೋಗಿಗಳಿಗೂ ಉತ್ತಮ ಚಿಕಿತ್ಸೆ ಲಭ್ಯ
ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗಳ ವೈದ್ಯಕೀಯ ಆಸ್ಪತ್ರೆಗಳು ಅಥವಾ ಖಾಸಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಈಗಿದೆ. ಅಂತಹ ಚಿಕಿತ್ಸೆಗೆ ಭಾರೀ ಖರ್ಚು ತಗಲುತ್ತಿದೆ. ಬಡವರಿಗೆ ಇದು ಕೈಗೆಟುಕದ ವಿಷಯವಾಗಿದೆ. ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರವು ಈ ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಉನ್ನತ ಮಟ್ಟದ ಚಿಕಿತ್ಸೆಗಾಗಿಯೂ ಇದು ಸಹಕಾರಿಯಾಗಲಿದೆ.

ಸರಕಾರದ ಈ ತೀರ್ಮಾನದಂತೆ ಕಾಸರಗೋಡು ಜನರಲ್‌ ಆಸ್ಪತ್ರೆ ಮತ್ತು ಕಾಂಞಂಗಾಡು ಚೆಮ್ಮಟಂವಯಲ್‌ನಲ್ಲಿರುವ ಕಾಸರಗೋಡು ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಶೀಘ್ರದಲ್ಲೇ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯ ಲಭ್ಯವಾಗಲಿದೆ. ಈ ಮಧ್ಯೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಕ್ರಮಗಳೂ ನಡೆಯುತ್ತಿವೆ. ಜಿಲ್ಲೆ ಮತ್ತು ಜನರಲ್‌ ಆಸ್ಪತ್ರೆಗಳ ವಿಭಾಗಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಅಗತ್ಯದ ವೈದ್ಯರನ್ನು ನೇಮಿಸಲು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಅರ್ಹತೆ ಹೊಂದಿರುವ ವೈದ್ಯರನ್ನು ಒಳಪಡಿಸಿ ವಿಶೇಷ ಕೇಡರ್‌ಗಳಿಗೂ ಈಗಾಗಲೇ ರೂಪು ನೀಡಲಾಗಿದೆ. ಈ ಮೂಲಕ ಎಲ್ಲಾ  ಜಿಲ್ಲೆಗಳ ಸೂಪರ್‌ ಸ್ಪೆಷಾಲಿಟಿ ವಿಭಾಗಗಳಿಗೆ ಅಗತ್ಯದ ವೈದ್ಯರನ್ನು ನೇಮಿಸಲು ಕೂಡ ನಿರ್ಧರಿಸಲಾಗಿದೆ.

ಜಿಲ್ಲೆಯ ರೋಗಿಗಳಿಗೆ ಪ್ರಯೋಜನ
ಕಾಸರಗೋಡು ಜಿಲ್ಲೆಯ ಜನರಲ್‌ ಆಸ್ಪತ್ರೆ ಮತ್ತು  ಜಿಲ್ಲಾ  ಆಸ್ಪತ್ರೆಗಳನ್ನು ಸೂಪರ್‌ ಸ್ಪೆಷಾಲಿಟಿಯಾಗಿ ಮೇಲ್ದರ್ಜೆಗೆ ಏರಿಸಿದ್ದಲ್ಲಿ ಜಿಲ್ಲೆಯ ರೋಗಿಗಳಿಗೆ ಹೆಚ್ಚು ಪ್ರಯೋಜನ ದೊರಕಲಿದೆ. ಇದೀಗ ಜಿಲ್ಲೆಯ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗೆ ಮಂಗಳೂರು, ಮಣಿಪಾಲ ಹಾಗೂ ಪರಿಯಾರಂ ವೈದ್ಯಕೀಯ ಆಸ್ಪತ್ರೆಗಳಿಗೆ ತೆರಳುತ್ತಿದ್ದು, ಕೇರಳ ಸರಕಾರದ ನೂತನ ಯೋಜನೆಯು ಜಾರಿಗೆ ಬಂದಲ್ಲಿ ಅತೀ ಹೆಚ್ಚು ಉಪಕಾರವಾಗಲಿದೆ. ಅಲ್ಲದೆ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಉತ್ತಮ ಚಿಕಿತ್ಸೆ ಕೂಡ ಲಭಿಸಲಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯು ವೈದ್ಯಕೀಯ ರಂಗದಲ್ಲಿ  ಅಭಿವೃದ್ಧಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.