ಅಂಗವಿಕಲರಿಗೆ ಸೌಲಭ್ಯ ವಿತರಣೆ ಆಸರೆಯಾದ ಸಂಸದರ ನಿಧಿ


Team Udayavani, Mar 10, 2019, 1:00 AM IST

angavikala.jpg

ಕಾಸರಗೋಡು: ಸಂಸದ ಪಿ.ಕರುಣಾಕರನ್‌ ಅವರ ಸ್ಥಳೀಯ ಅಭಿವೃದ್ಧಿ ನಿಧಿ ಅಂಗವಿಕಲರಿಗೆ ಕೈಯಾಸರೆಯಾಗಿದೆ. ಈ ನಿಧಿ ಬಳಸಿ ಅಂಗವಿಕಲರಿಗೆ ವಿದ್ಯುನ್ಮಾನ ಗಾಲಿ ಕುರ್ಚಿ, ಬದಿ ಗಾಲಿ ಅಳವಡಿಸಿದ ತ್ರಿಚಕ್ರ ವಾಹನ ಇತ್ಯಾದಿ ವಿತರಣೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಸಂಸದ ಪಿ.ಕರುಣಾಕರನ್‌ ಈ ಸಲಕರಣೆಗಳ ವಿತರಣೆ ನಡೆಸಿದರು. 99,500 ರೂ. ಮೌಲ್ಯದ ಎರಡು ವಿದ್ಯುನ್ಮಾನ ಗಾಲಿಕುರ್ಚಿ, 81 ಸಾವಿರ ರೂ. ಮೌಲ್ಯದ ತ್ರಿಚಕ್ರ ವಾಹನ ಖರೀದಿಸಿ ವಿತರಿಸಲಾಗಿದೆ.

ಸಾಮಾಜಿಕ ನ್ಯಾಯ ಇಲಾಖೆಗೆ ಸಲ್ಲಿಸಲಾದ ಅರ್ಜಿಗಳ ಹಿನ್ನೆಲೆಯಲ್ಲಿ ಅರ್ಹರ ಆಯ್ಕೆ ನಡೆಸಲಾಗಿದ್ದು, ಚಂದೇರ ಕಾಂಞಿರಿಕ್ಕಲ್‌ ಹೌಸ್‌ ನಿವಾಸಿ ಕೆ.ರಾಜೀವನ್‌(48), ಎಡನೀರಿನ ಪಾಡಿ ಕನ್ನಿಕುಂಡ್‌ ನಿವಾಸಿ ವಾಮನ(35) ಅವರಿಗೆ ವಿದ್ಯುನ್ಮಾನ ಗಾಲಿ ಕುರ್ಚಿ, ಮಡಿಕೈ ಚದುರಕಿಣರ್‌ ಚೆಟ್ಟಿ ವೀಟ್ಟಿಲ್‌ ನಿವಾಸಿ ಗಣೇಶನ್‌(35) ಅವರಿಗೆ ತ್ರಿಚಕ್ರ ವಾಹನ ಲಭಿಸಿದೆ.

ಈ ಸಂದರ್ಭ ಮಾತನಾಡಿದ ಸಂಸದ ಅವರು ಕಾಸರಗೋಡು ಕ್ಷೇತ್ರದಲ್ಲಿ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯ ಮೊಬಲಗಿನಲ್ಲಿ ಶೇ.98 ವಿನಿಯೋಗಿಸಲಾಗಿದೆ. ಇದರಲ್ಲಿ ಹತ್ತು ಕಡೆ ಅಂಗವಿಕಲರ ಸಹಾಯಕ್ಕೆ ಸಲಕರಣೆಗಳನ್ನು  ಖರೀದಿಸಿ ವಿತರಿಸಲಾಗಿದೆ ಎಂದು ತಿಳಿಸಿದರುನಬಾರ್ಡ್‌ ಆರ್‌.ಐ.ಡಿ.ಎಫ್‌ ಯೋಜನೆಯನ್ನು ಎಂಡೋಸಲ್ಫಾನ್‌ ಸಂತ್ರಸ್ತರ ವಲಯದಲ್ಲಿ ಜಾರಿಗೊಳಿಸಲು ಸಾಧ್ಯವಾದುದು ದೊಡ್ಡ ಸಾಧನೆ ಎಂದರು.

ಸಮಾಜದ ಮುಖ್ಯವಾಹಿನಿಯಿಂದ ಬೇರ್ಪಟ್ಟ ಜನಾಂಗದವರ ಸೌಲಭ್ಯಕ್ಕೂ ಸಹಾಯ ಒದಗಿಸಲು ನಿಧಿಯ ಮೂಲಕ ಸಾಧ್ಯವಾಗಿದೆ ಎಂದವರು ಹೇಳಿದರು. ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಾಮಾಜಿಕ ನ್ಯಾಯ ಇಲಾಖೆ ಅಧಿಕಾರಿ ಎನ್‌.ಭಾಸ್ಕರನ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.