ಕಣಜದ ಹುಳುಗಳು ದಾಳಿ: 10 ಮಂದಿ ಶಾಲಾ ವಿದ್ಯಾರ್ಥಿಗಳು, ಇಬ್ಬರು ಆಟೋ ಚಾಲಕರಿಗೆ ಗಾಯ


Team Udayavani, Jan 10, 2023, 12:26 AM IST

ಕಣಜದ ಹುಳುಗಳು ದಾಳಿ: 10 ಮಂದಿ ಶಾಲಾ ವಿದ್ಯಾರ್ಥಿಗಳು, ಇಬ್ಬರು ಆಟೋ ಚಾಲಕರಿಗೆ ಗಾಯ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಕಣಜದ ಹುಳುಗಳು ದಾಳಿ ನಡೆಸಿದ್ದು, ಹತ್ತು ಮಂದಿ ವಿದ್ಯಾರ್ಥಿಗಳು ಹಾಗು ಇಬ್ಬರು ಆಟೋ ಚಾಲಕರು ಗಾಯಗೊಂಡಿದ್ದಾರೆ.

ಚೆಮ್ನಾಡ್‌ ವೆಸ್ಟ್‌ ಜಿಎಲ್‌ಪಿ ಶಾಲೆಯ ಹತ್ತು ಮಂದಿ ವಿದ್ಯಾರ್ಥಿಗಳು ಎರಡು ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ. ವಿದ್ಯಾರ್ಥಿಗಳಾದ ಅದಾನ್‌ ಅಬು (6), ಜೈನಬ (7), ಫಾತಿಮತ್‌ ಸುಹರಾ (6), ಅಹಮ್ಮದ್‌ ಜುಬೀರ್‌ (7), ಮೊಹಮ್ಮದ್‌ ರಿನಾದ್‌ (7), ಆಯಿಶ ನವೀರ (6), ಫಾತಿಮತ್‌ (7), ಆಯಿಷಾ (11), ಅಫ್ರಾನ್‌ ಅಹಮ್ಮದ್‌ (9), ಮೊಹಮ್ಮದ್‌ ರಾಹಿಲ್‌ (8), ಆಟೋ ರಿಕ್ಷಾ ಚಾಲಕರಾದ ಹಾರಿಸ್‌ (37) ಮತ್ತು ಹಕೀಂ(30) ಗಾಯಗೊಂಡಿದ್ದಾರೆ. ಅವರಿಗೆ ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ರೈಲು ಢಿಕ್ಕಿ: ಕರಾವಳಿ ಠಾಣೆ ಸ್ರಾಂಕ್‌ ಸಾವು
ಉಪ್ಪಳ: ರೈಲು ಢಿಕ್ಕಿ ಹೊಡೆದು ಕುಂಬಳೆ ಕರಾವಳಿ ಠಾಣೆಯ ಸ್ರಾಂಕ್‌ ಸಾವಿಗೀಡಾಗಿದ್ದಾರೆ. ಆಲಪ್ಪುಳ ಚುಗಂ ಕುಪ್ಪಪುರಂ ಕೈನಕಾರಿ ಪಳ್ಳಿ ತುರುತ್ತಿ ಮುಲ್ಲಯಕ್ಕಲ್‌ ಆಲ ಪರಂಬಿಲ್‌ ಆನಂದ ಕೃಷ್ಣನ್‌ ಅವರ ಪುತ್ರ ಉಣ್ಣಿಕೃಷ್ಣನ್‌ (28) ಸಾವಿಗೀಡಾದವರು.

ಉಪ್ಪಳ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್‌ ಠಾಣೆಗೆ ರೈಲು ಹಳಿ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಭಾಗದಿಂದ ಬರುತ್ತಿದ್ದ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿತು. ಅವರು ಕುಂಬಳೆ ಕರಾವಳಿ ಪೊಲೀಸ್‌ ಠಾಣೆಯ ಇಂಟರ್‌ಸೆಪ್ಟರ್‌ ಬೋಟ್‌ನ ಸ್ರಾಂಕ್‌ ಆಗಿದ್ದರು.

ರೈಲು ಢಿಕ್ಕಿ: ಅಪರಿಚಿತ ವ್ಯಕ್ತಿ ಸಾವು
ಕಾಸರಗೋಡು: ನಗರದ ಅಡ್ಕತ್ತಬೈಲ್‌ ಸಮೀಪದ ಚೀರುಂಬ ಕುದ್ರುನಲ್ಲಿ ರೈಲು ಢಿಕ್ಕಿ ಹೊಡೆದು ಸುಮಾರು 50 ವರ್ಷ ಪ್ರಾಯದ ವ್ಯಕ್ತಿಯೋರ್ವರು ಸಾವಿಗೀಡಾಗಿದ್ದಾರೆ. ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಳ: ನಿದ್ದೆಯಲ್ಲೇ ಮಹಿಳೆ ಸಾವು
ಉಪ್ಪಳ: ನಿದ್ದೆಯಲ್ಲೇ ಉಪ್ಪಳ ಬಪ್ಪಾಯಿತೊಟ್ಟಿ ನಿವಾಸಿ ಅಯೂಬ್‌ ಅವರ ಪತ್ನಿ ಸಬನಾ ಅಜ್ಮಿàನ್‌ (44) ಸಾವಿಗೀಡಾಗಿದ್ದಾರೆ. ಅವರು ಶನಿವಾರ ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಎದ್ದೇಳಲಿಲ್ಲ. ಮನೆಯವರು ಎಬ್ಬಿಸುವ ವೇಳೆ ಎಚ್ಚರಗೊಳ್ಳದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅದಾಗಲೇ ಅವರ ಸಾವು ಸಂಭವಿಸಿತ್ತು

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.