ಕಾಸರಗೋಡು ನಗರದೆಲ್ಲೆಡೆ ಮುರಿದುಬಿದ್ದ ಚರಂಡಿ ಸ್ಲಾಬ್‌

ಪಾದಚಾರಿಗಳಿಗೆ ಅಪಾಯ ಭೀತಿ

Team Udayavani, Mar 28, 2019, 6:30 AM IST

charandi-slab

ಕಾಸರಗೋಡು: ಪಾದಚಾರಿಗಳಿಗೆ ಅಪಾಯ ಭೀತಿಯೊಡ್ಡಿರುವ ಕಾಸರಗೋಡು ನಗರದ ಕಾಲುದಾರಿಗಳು (ಫುಟ್‌ಪಾತ್‌ಗಳು) ಹಲವೆಡೆಗಳಲ್ಲಿ ಬಿರುಕು ಬಿಟ್ಟಿವೆ. ಪ್ರತಿದಿನವೂ ಜನಸಂದಣಿ ಇರುವ ಕಾಸರಗೋಡು ನಗರದ ಚರಂಡಿಯ ಮೇಲೆ ಹಾಸಿದ ಕಾಂಕ್ರೀಟ್‌ ಸ್ಲಾಬ್‌ಗಳನ್ನು ಕಾಲುದಾರಿಯಾಗಿ ಉಪ ಯೋಗಿಸಲಾಗುತ್ತಿದ್ದು, ಇದು ಹಲವು ಕಡೆಗಳಲ್ಲಿ ತುಂಡಾಗಿ ಬಿದ್ದಿವೆ.

ನಗರದ ಹೊಸ ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ, ತಾಯಲಂಗಾಡಿ, ಬ್ಯಾಂಕ್‌ ರೋಡ್‌, ಎಂ.ಜಿ.ರೋಡ್‌, ಕರಂದಕ್ಕಾಡು, ಕೆಪಿಆರ್‌ ರಾವ್‌ ರೋಡ್‌, ನಾಯಕ್ಸ್‌ ರೋಡ್‌, ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಪರಿಸರ, ಕೋಟೆಕಣಿ ರಸ್ತೆ ಸಹಿತ ಹಲವೆಡೆ ಸ್ಲಾಬ್‌ಗಳು ಹಾನಿಗೊಂಡಿವೆ.

ಈ ದಾರಿಯಾಗಿ ನಡೆಯುವಾಗ ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿದಂತೆ ಇತರ ಎಲ್ಲರೂ ಚರಂಡಿಯೊಳಗೆ ಬಿದ್ದು ಗಾಯಗೊಂಡಿರುವ ಹಲವಾರು ಘಟನೆಗಳು ನಡೆದಿವೆ. ಕಾಸರಗೋಡು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆ, ಕಾಸರಗೋಡು ಜಿಯುಪಿ ಶಾಲೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಸಣ್ಣ ಮಕ್ಕಳು ಸಂಚರಿಸುವ ದಾರಿಯಲ್ಲೂ ಈ ರೀತಿಯಾಗಿ ಸ್ಲಾಬ್‌ಗಳು ಮುರಿದು ಬಿದ್ದಿವೆ.

ತಾಯಲಂಗಾಡಿ ರೈಲು ನಿಲ್ದಾಣ ರಸ್ತೆಯಲ್ಲೂ ಇದೇ ಸ್ಥಿತಿ ಇದೆ. ಕೆಲವು ಕಡೆಗಳಲ್ಲಿ ಮುರಿದ ಸ್ಲಾಬ್‌ಗಳನ್ನು ತೆಗೆಯದೆ ಅದರ ಮೇಲೆ ಮತ್ತೂಂದನ್ನು ಸ್ಥಾಪಿಸಿ ಮತ್ತಷ್ಟು ಸಮಸ್ಯೆ ಸೃಷ್ಟಿಸಲಾಗಿದೆ. ತುಂಡಾಗಿರುವ ಸ್ಲಾಬ್‌ ತೆಗೆದು ಹೊಸತನ್ನು ಸ್ಥಾಪಿಸಬೇಕೆಂದು ಹಲವು ಬಾರಿ ಆಗ್ರಹಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿದೆ.
ಕಾಸರಗೋಡು ನಗರವು ಸಮಗ್ರ ಅಭಿವೃದ್ಧಿಯಿಂದ ವಂಚಿತವಾಗಿದೆ. ಇನ್ನೂ ಹೇಳಿಕೊಳ್ಳುವಂತಹ ಪ್ರಗತಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ನಗರಸಭಾ ಆಡಳಿತಕ್ಕೆ ದೊಡ್ಡ ಜವಾಬ್ದಾರಿಯಿದ್ದರೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಲಾಗಿದೆ. ಇಡೀ ಜಿಲ್ಲೆಯ ಪ್ರಮುಖ ಕೇಂದ್ರವಾಗಿರುವ ಕಾಸರಗೋಡಿನ ಫುಟ್‌ಪಾತ್‌ ವ್ಯವಸ್ಥೆಯೇ ಇಷ್ಟೊಂದು ಕೆಳಮಟ್ಟದಲ್ಲಿದ್ದು, ಇತರ ವ್ಯವಸ್ಥೆಗಳಿಗೆ ಕೈಗನ್ನಡಿಯಂತಿದೆ. ಆಡಳಿತವು ಫುಟ್‌ಪಾತ್‌ ವ್ಯವಸ್ಥೆಯನ್ನುಸರಿಪಡಿÓಬೇಕೆಂಬ ಆಗ್ರಹ ವ್ಯಾಪಕವಾಗಿದೆ.

ಕಾಲುದಾರಿಗಳು ಅಸ್ತವ್ಯಸ್ತ
ಕಾಸರಗೋಡು ನಗರದ ಹಲವು ಭಾಗಗಳಲ್ಲಿ ಕಾಲುದಾರಿಗಳು ಅಸ್ತವ್ಯಸ್ತವಾಗಿದ್ದು, ಇದರಿಂಜ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳಂತೂ ನಡೆಯುವಾಗ ಬಹಳಷ್ಟು ಕಡೆಗಳಲ್ಲಿ ಬಿದ್ದು ಗಾಯಗೊಂಡಿದ್ದಾರೆ.

ನಗರಸಭಾ ಆಡಳಿತವು ಮೌನಕ್ಕೆ ಶರಣಾಗಿದೆ. ನಗರಸಭೆ ‌ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಐಶಾರಾಮಿ ವಾಹನಗಳಲ್ಲಿ ಸಂಚರಿಸುತ್ತಿದ್ದರೂ, ಕನಿಷ್ಠ ಸಮರ್ಪಕ ಫುಟ್‌ಪಾತ್‌ ವ್ಯವಸ್ಥೆ ಕೂಡ ಮಾಡದಿರುವುದು ದೌರ್ಭಾಗ್ಯ.

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.