ಪಾಣಾರ್‌ಕುಳಂನಲ್ಲಿ ನಿರ್ಮಾಣಗೊಳ್ಳಲಿದೆ ಕಾಸ್ರೋಡ್‌ ಕೆಫೆ


Team Udayavani, Mar 2, 2019, 1:20 AM IST

kass.jpg

ಕಾಸರಗೋಡು: ಜಿಲ್ಲೆಯ ಪ್ರವಾಸೋದ್ಯಮ ವಲಯಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ  ರೂಪಿಸಲಾದ ಯೋಜನೆ ಕಾಸ್ರೋಡ್‌ ಕೆಫೆ ಚೆಂಗಳ ಗ್ರಾಮ ಪಂಚಾಯತ್‌ನ ಪಾಣಾರ್‌ಳಂನಲ್ಲೂ ಜಾರಿಗೊಳ್ಳಲಿದೆ.

ಪ್ರವಾಸೋದ್ಯಮ ಉದ್ಯಾನ ಸಹಿತ ಕೇಂದ್ರ ಪಾಣಾರ್‌ಕುಳಂನಲ್ಲಿ ಈ ನಿಟ್ಟಿನಲ್ಲಿ ಸ್ಥಾಪನೆಗೊಳ್ಳಲಿದೆ. ಕಂದಾಯ ಇಲಾಖೆ ಈ ಯೋಜನೆಗಾಗಿ ಪ್ರವಾಸೋ ದ್ಯಮ ಇಲಾಖೆಗೆ ಹಸ್ತಾಂತರಿಸಿದ 50 ಸೆಂಟ್ಸ್‌ ಜಾಗದಲ್ಲಿ ಚೆಂಗಳ ಗ್ರಾ. ಪಂ.ಸಹಾಯದೊಂದಿಗೆ ಪ್ರವಾಸೋದ್ಯಮ ಉದ್ಯಾನ ನಿರ್ಮಾಣಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ ಬದಿ ವಿದೇಶಿ ಪ್ರವಾಸಿಗರನ್ನೂ ಆಕರ್ಷಿಸುವ ನಿಟ್ಟಿನಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಅ ಧಿಕಾರಿಗಳು ತಿಳಿಸಿದರು.

ಮಕ್ಕಳಿಗಾಗಿ ಆಟದ ಮೈದಾನ, ಆ್ಯಂಪಿ ಥಿಯೇಟರ್‌ ಸಹಿತದ ಟ್ಯೂರಿಸಂ ಹಟ್‌ ಇಲ್ಲಿ ಸ್ಥಾಪನೆಗೊಳ್ಳಲಿದೆ. ಪಾರ್ಕಿಂಗ್‌ ಸೌಲಭ್ಯ, ಶೌಚಾಲಯ ಸೌಲಭ್ಯ, ಹೂದೋಟ, ಕಾಲ್ನಡಿಗೆ ಹಾದಿ, ಮಿನಿಮಾಸ್‌, ಮಕ್ಕಳ ಮನರಂಜನಾ ಸಾಮಾಗ್ರಿಗಳು ಇತ್ಯಾದಿ ಈ ಉದ್ಯಾನ ಯೋಜನೆಯಲ್ಲಿ ಒಳಗೊಂಡಿದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ಅವರ ವಿಶೇಷ ಕಾಳಜಿಯೊಂದಿಗೆ ಜಾರಿಗೊಳಿಸುವ “ಕಾಸೋÅಡ್‌ ಕೆಫೆ’ ಯೋಜನೆಯನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅನುಷ್ಠಾನಕ್ಕೆ ತರುತ್ತಿದ್ದು, ಮೊದಲ ಸಂಸ್ಥೆ ತಲಪ್ಪಾಡಿಯಲ್ಲಿ ಕೆಲವೇ ದಿನಗಳ ಹಿಂದೆ ಉದ್ಘಾಟನೆಗೊಂಡಿದೆ. ಕುಂಬಳೆ, ಬಟ್ಟತ್ತೂರು, ಪೆರಿಯ, ಚೆಮ್ಮಟ್ಟಂವಯಲ್‌, ಕಾಲಿಕಡವು ಪ್ರದೇಶಗಳಲ್ಲೂ ಕೆಫೆ ನಿರ್ಮಾಣಗೊಳಿಸುವ ಚಟುವಟಿಕೆಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ. ಮುಂದಿನ 6 ತಿಂಗಳಲ್ಲಿ ಇವು ಚಟುವಟಿಕೆ ಆರಂಭಿಸುವ ನಿರೀಕ್ಷೆಯಿದೆ ಎಂದು ಅ ಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯ ಹೆದ್ದಾರಿಗಳ ಮೂಲಕ ಸಾಗುವ ಪ್ರಯಾಣಿಕರಿಗೆ ಅತ್ಯುತ್ತಮ ಗುಣಮಟ್ಟದ ಆಹಾರ, ಪಾನೀಯ ನೀಡಿಕೆ, ವಿಶ್ರಾಂತಿಗೆ ವ್ಯವಸ್ಥೆ ಒದಗಿಸುವಿಕೆ ಇಲ್ಲಿನ ಪ್ರಧಾನ ಉದ್ದೇಶ, ಲಘು ಉಪಾಹಾರ, ವಿಶ್ರಾಂತಿ ಕೊಠಡಿ, ಶೌಚಾಲಯ ಸಹಿತದ ಯೂನಿಟ್‌ಗಳಲ್ಲಿ ಉತ್ತಮ ಪರಿಣತಿ ಪಡೆದ ಸಮವಸ್ತ್ರಧಾರಿ ಸಿಬಂದಿ ಸೇವೆ ನೀಡಲಿದ್ದಾರೆ. ರೆಸ್ಟಾರೆಂಟ್‌ ನಡೆಸಿ ಅನುಭವ ಹೊಂದಿರುವ ಮಂದಿಗೆ ಕರಾರು ಮೇರೆಗೆ ಈ ಯೂನಿಟ್‌ ನಡೆಸಲು ಹೊಣೆ ನೀಡಲಾಗುತ್ತದೆ. ಜತೆಗೆ ಇವುಗಳ ಚಟುವಟಿಕೆಗಳ ಮೇಲೆ ಡಿ.ಟಿ.ಪಿ.ಸಿ. ನಿಗಾ ಇರಿಸಲಿದೆ.

ಕಾಮಗಾರಿಗೆ ಚಾಲನೆ  
ಚೆಂಗಳ ಗ್ರಾಮ ಪಂಚಾಯತ್‌ನ ಪಾಣಾರ್‌ಕುಳಂನಲ್ಲಿ ನಿರ್ಮಾಣಗೊಳ್ಳುವ ಕಾಸ್ರೋಡ್‌ ಕೆಫೆ ಪ್ರವಾಸೋದ್ಯಮ ಉದ್ಯಾನ ನಿರ್ಮಾಣ ಸಂಬಂಧ ನಡೆಯುವ ಕಾಮಗಾರಿಗೆ ಶಾಸಕ ಎನ್‌.ಎ.ನೆಲ್ಲಿಕುನ್ನು ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು, 

ಡಿ.ಟಿ.ಪಿ.ಸಿ. ಕಾರ್ಯದರ್ಶಿ ಬಿಜು ರಾಘವನ್‌ ವರದಿ ವಾಚಿಸಿದರು. ಚೆಂಗಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾಹಿನಾ ಸಲೀಂ, ಉಪಾಧ್ಯಕ್ಷೆ ಶಾಂತಕುಮಾರಿ ಟೀಚರ್‌, ಡಿ.ಟಿ.ಪಿ.ಸಿ. ಪ್ರಬಂಧಕ ಪಿ.ಸುನಿಲ್‌ ಕುಮಾರ್‌, ಗ್ರಾಮ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷರಾದ ಎ. ಅಹಮ್ಮದ್‌ ಹಾಜಿ, ಹಾಜಿರಾ ಮಹಮ್ಮದ್‌ ಕುಂಞಿ, ಶಾಹಿದಾ ಮಹಮ್ಮದ್‌, ಜಿಲ್ಲಾ ಪಂಚಾಯತ್‌ ಸದಸ್ಯ ಮುಂತಾಝ್ ಝಮೀರ, ಖದೀಜಾ ಮಹಮೂದ್‌, ಪಂಚಾಯತ್‌ ಮಾಜಿ ಅಧ್ಯಕ್ಷ ಸಿ.ಬಿ. ಅಬ್ದುಲ್ಲ ಹಾಜಿ, ಪಂಚಾಯತ್‌ ಕಾರ್ಯದರ್ಶಿ ಎಂ. ಸುರೇಂದ್ರನ್‌, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಣಕಾಸು ಯೋಜನೆ
ಪ್ರವಾಸೋದ್ಯಮ ಇಲಾಖೆಯ ಎಂಪಾನೆಲ್ಡ್‌ ಆರ್ಕಿಟೆಕ್ಟ್ ಪಿ.ಸಿ. ರಶೀದ್‌ ಅವರು ಸಿದ್ಧಪಡಿಸಿದ ಯೋಜನೆ ಪ್ರಕಾರ ನಿರ್ಮಿತಿ ಕೇಂದ್ರ ಈ ಕಾಮಗಾರಿ ನಡೆಸುತ್ತಿದೆ. 1.53 ಕೋಟಿ ರೂ. ವೆಚ್ಚ ನೀರಿಕ್ಷಿಸಲಾಗುತ್ತಿದ್ದು, ಜಿ.ಪಂ. 25 ಲಕ್ಷ ರೂ., ಚೆಂಗಳ ಗ್ರಾ. ಪಂ. 25 ಲಕ್ಷ ರೂ., ಶಾಸಕ ಎನ್‌.ಎ. ನೆಲ್ಲಿಕುನ್ನು ಅವರ ಸ್ಥಳೀಯ ಅಭಿವೃದ್ಧಿ ನಿ ಧಿಯಿಂದ 5 ಲಕ್ಷ ರೂ. ಮಂಜೂರುಗೊಳಿಸಲು ನಿರ್ಧರಿಸಲಾಗಿದೆ ಎಂದು ಅ ಧಿಕಾರಿಗಳು ಹೇಳಿದರು. ಪ್ರವಾಸೋದ್ಯಮ ಇಲಾಖೆ 98 ಲಕ್ಷ ರೂ. ನೀಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.