ಕನ್ನಡಿಗರ ಕೂಗು ಸಾಕು, ಅಟ್ಟಹಾಸ ಬೇಕು: ಶ್ರೀಕಾಂತ್‌


Team Udayavani, May 25, 2018, 6:00 AM IST

24ksde7.jpg

ಕಾಸರಗೋಡು: ಪದೇ ಪದೇ ಮಲಯಾಳ ಕಲಿಕೆ ಕಡ್ಡಾಯ ಹೇರಿಕೆಯ ಆದೇಶದ ಮೂಲಕ ಕನ್ನಡ ಭಾಷೆ, ಸಂಸ್ಕೃತಿ ನಾಶ ಮಾಡಲು ಹೊರಟಿರುವ ಕೇರಳ ಸರಕಾರದ ವಿರುದ್ಧ ತೀವ್ರ ಹೋರಾಟ ಅನಿವಾರ್ಯ. ಸರಕಾರದ ಮುಂದೆ ಕನ್ನಡಿಗರು ಕೂಗು ನಿಲ್ಲಿಸಬೇಕು. ಬದಲಿಯಾಗಿ ಕನ್ನಡಿಗರ ಅಟ್ಟಹಾಸ ಕೇಳಿಸಬೇಕು. ಆವಾಗ ಸರಕಾರ ಕನ್ನಡಿಗರ ಧ್ವನಿಗೆ ತಲೆಬಾಗುತ್ತದೆ ಎಂದು ಜಿಲ್ಲಾ ಪಂಚಾಯತ್‌ ಸದಸ್ಯ, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್‌ ಅವರು ಹೇಳಿದರು.

ಕೇರಳ ಸರಕಾರ ಜಾರಿಗೆ ತಂದಿರುವ ಒಂದನೇ ತರಗತಿಯಿಂದ ಹತ್ತನೇ ತರಗತಿಯ ವರೆಗೆ ಮಲಯಾಳ ಕಡ್ಡಾಯ ಕಲಿಕೆಯನ್ನು ಪ್ರತಿಭಟಿಸಿ ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಆಯೋಜಿಸಿದ ಒಂದು ವಾರ ಧರಣಿ ಸತ್ಯಾಗ್ರಹದ ಎರಡನೇ ದಿನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕಾಸರಗೋಡಿನ ಕನ್ನಡ ಮಕ್ಕಳ ಮೇಲೆ ಮಲಯಾಳ ಹೇರಿಕೆ ಬೇಡ. ಮಲಯಾಳ ಹೇರಿಕೆಯಿಂದ ಕಾಸರಗೋಡಿನ ಹಲವು ಭಾಷೆಗಳ ಸಂಗಮ ಭೂಮಿ ಎಂಬ ಮಾನ್ಯತೆ ಕಳೆದುಕೊಳ್ಳಬೇಕಾಗುತ್ತದೆ. ಅಲ್ಲದೆ ಭಾಷಾ ಅಲ್ಪಸಂಖ್ಯಾತರ ಭಾಷೆ, ಸಂಸ್ಕೃತಿ ಅಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಕನ್ನಡವನ್ನು ಹತ್ತಿಕ್ಕುವ ಮತ್ತು ಸಂವಿಧಾನಬದ್ಧವಾಗಿ ಕಲ್ಪಿಸಿರುವ ಎಲ್ಲಾ ಸವಲತ್ತುಗಳನ್ನು ಹಕ್ಕುಗಳನ್ನು ಕಸಿದುಕೊಳ್ಳಲು ಹಿಂಬಾಗಿಲ ಕುತಂತ್ರ ನಡೆಯುತ್ತಲೇ ಇದೆ. ಇದರ ವಿರುದ್ಧ ದಶಕಗಳಿಂದ ಕಾನೂನು ಮತ್ತು ಇತರ ಹೋರಾಟ ನಡೆಯುತ್ತಿದೆ. ಸಂವಿಧಾನಬದ್ಧ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳಲು ದಿನಾ ಹೋರಾಟ ನಡೆಸಬೇಕಾದ ಅನಿವಾರ್ಯತೆ ಬಂದಿರುವುದು ದೌರ್ಭಾಗ್ಯ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಅದಕ್ಕಾಗಿ ರಾಜಕೀಯ ಒತ್ತಡ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು. 

ಕಾಸರಗೋಡಿನ ಕನ್ನಡದ ಮಕ್ಕಳು ಮಲಯಾಳ ಭಾಷೆಯನ್ನು ಹೆಚ್ಚುವರಿಯಾಗಿ ಕಲಿಯಬೇಕು. ಆದರೆ ಅದೇ ವೇಳೆ ವಿದೇಶದಲ್ಲಿ ಕಲಿತು ಇಲ್ಲಿಗೆ ಬಂದ ಮಕ್ಕಳು ಇಲ್ಲಿ ಮಲಯಾಳ ಕಲಿಯಬೇಕಾಗಿಲ್ಲ ಎಂಬಂತಹ ಆದೇಶವಿರುವುದು ಸರಕಾರದ ದ್ವಂದ್ವ ನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಂಡರೆ ಮಾತ್ರವೇ ನಮ್ಮತನವನ್ನು ಉಳಿಸಿಕೊಳ್ಳಲು ಸಾಧ್ಯ. ಗುಲಾಮ ಗಿರಿಯನ್ನು ಒಪ್ಪಿಕೊಳ್ಳಲು ಕನ್ನಡಿಗರು ಸಿದ್ಧರಿಲ್ಲ ಎಂದು ಇದೇ ವೇಳೆ ಅವರು ಸರಕಾರಕ್ಕೆ ಮುನ್ನೆಚ್ಚರಿಕೆಯನ್ನು ನೀಡಿದರು. ರಾಜ್ಯಪಾಲರು ಮತ್ತು ರಾಷ್ಟ್ರಪತಿಯ ವರೆಗೆ ಹೋಗಲು ಕನ್ನಡಿಗರು ಸಿದ್ಧರಾಗಬೇಕೆಂದರು. ಮೊಸಳೆ ಕಣ್ಣೀರು ಸುರಿಸುವವರ ಬಗ್ಗೆ ಸದಾ ಜಾಗೃತರಾಗಿರಬೇಕೆಂದು ಹೇಳಿದ ಅವರು ಕನ್ನಡಿಗರು ಭಿಕ್ಷೆ ಬೇಡುತ್ತಿಲ್ಲ. ಸಂವಿಧಾನಬದ್ಧವಾಗಿ ನೀಡಿರುವ ಹಕ್ಕುಗಳನ್ನು ಮತ್ತು ಸವಲತ್ತುಗಳನ್ನು ಮಾತ್ರವೇ ಕೇಳುತ್ತಿದ್ದೇವೆ. ಈ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಇನ್ನಷ್ಟು ತೀವ್ರವಾದ ಹೋರಾಟಕ್ಕೆ ಮುನ್ನುಗ್ಗುವುದು ಖಂಡಿತ ಎಂದರು. 

ಹೋರಾಟದ ಕಿಚ್ಚನ್ನು ಇನ್ನಷ್ಟು ತೀವ್ರಗೊಳಿಸಬೇಕೆಂದ ಅವರು ಇದು ಅಳಿವು ಉಳಿವಿನ ಪ್ರಶ್ನೆಯಾಗಿದೆ. ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ನಡೆಯುವುದರಲ್ಲಿ ಸಂಶಯವಿಲ್ಲ ಎಂದರು. ಈಗ ಕಾನೂನು ರೂಪದ ಲಿಖೀತ ಆಜ್ಞೆ ಬರದಿದ್ದರೂ ಕಾಸರಗೋಡು ಡಿ.ಡಿ. ಬೆದರಿಕೆ ಮತ್ತು ಕುತಂತ್ರದಿಂದ ಮಲಯಾಳ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕಾರಣದಿಂದ ಡಿ.ಡಿ. ವಿರುದ್ಧವೂ ಹೋರಾಟ ಅನಿವಾರ್ಯವಾಗಲಿದೆ ಎಂದರು.

ಧರಣಿಯನ್ನು ಉದ್ದೇಶಿಸಿ ನ್ಯಾಯವಾದಿ ಸದಾನಂದ ರೈ, ಮಧೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ದಿವಾಕರ ಆಚಾರ್ಯ, ಕೇರಳ ರಾಜ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಅಧಿಕೃತ ವಕ್ತಾರ ವಿಶಾಲಾಕ್ಷ ಪುತ್ರಕಳ, ಕಾಸರಗೋಡು ನಗರಸಭಾ    ಸದಸ್ಯರಾದ ಸವಿತಾ ಟೀಚರ್‌, ಶ್ರೀಲತಾ, ಪೈವಳಿಕೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಅಚ್ಯುತ, ಪ್ರೊ|   ಶ್ರೀಕೃಷ್ಣ ಭಟ್‌, ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ, ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ, ಕವಿ ರಾಧಾಕೃಷ್ಣ ಕೆ.  ಉಳಿಯತ್ತಡ್ಕ, ಬಿಜೆಪಿ ಬದಿಯಡ್ಕ ಗ್ರಾಮ ಪಂಚಾಯತ್‌ ಅಧ್ಯಕ್ಷ ನಾರಾಯಣ ಭಟ್‌, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಂಘಟನೆ ಗಿಳಿವಿಂಡಿನ ಕಾರ್ತಿಕ್‌, ಕವಿ ಹರೀಶ್‌ ಪೆರ್ಲ, ಅಧ್ಯಾಪಕ ಅಬ್ದುಲ್‌ ರಹಿಮಾನ್‌  ಮೊದಲಾದವರು ಮಾತನಾಡಿದರು.

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಮಾಜಿ ಅಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್‌ ಅಧ್ಯಕ್ಷತೆ ವಹಿಸಿದರು.
 
ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಕಾಸರಗೋಡು ಸ್ವಾಗತಿಸಿದರು.

ಕಾಸರಗೋಡು ನಗರಸಭಾ ಸದಸ್ಯರಾದ ಸಂಧ್ಯಾ ಶೆಟ್ಟಿ, ಅರುಣ್‌ ಕುಮಾರ್‌ ಶೆಟ್ಟಿ, ಸತ್ಯನಾರಾಯಣ ಕೆ., ಸೀತಾರಾಮ ಮಾಸ್ಟರ್‌, ಸತ್ಯನಾರಾಯಣ ಹೊನ್ನೆಮೂಲೆ, ಪದ್ಮರಾಜ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಗಡಿನಾಡು ಕಾಸರಗೋಡು ಪ್ರದೇಶವು ಅಚ್ಚಗನ್ನಡ ನಾಡು. ಇತಿಹಾಸದಲ್ಲಿ  ಇಲ್ಲಿನ ನೆಲ, ಜಲ, ಭಾಷೆ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಕ್ಷೇತ್ರ, ಊರು, ಉಸಿರು ಎಲ್ಲವೂ ಕನ್ನಡಮಯವಾಗಿದ್ದು, ಆದರೆ ಇತ್ತೀಚೆಗಿನ ವರ್ಷಗಳಿಂದ ಮಲೆಯಾಳ ಭಾಷೆಯು ತನ್ನ  ಕಬಂಧಬಾಹುಗಳನ್ನು  ವಿಸ್ತರಿಸಿಕೊಂಡಿದೆ. ಈ ಮೂಲಕ ಕನ್ನಡ ಭಾಷೆ, ಸಂಸ್ಕೃತಿಯ ಅವನತಿಗೆ ನಾಂದಿ ಹಾಡಲಾಯಿತು. ಇನ್ನಾದರೂ ಇಲ್ಲಿನ ಕನ್ನಡ ಭಾಷೆ, ಶಿಕ್ಷಣಕ್ಕೆ ಒಂದಿನಿತೂ ಧಕ್ಕೆ ಬಾರದಂತೆ ಕೇರಳ ಸರಕಾರ ಮತ್ತು  ಅಧಿಕಾರಿ ವರ್ಗ ಗಮನಹರಿಸಬೇಕೆಂದು ಅವರು ಆಗ್ರಹಿಸಿದರು. ರಾಜ್ಯದಲ್ಲಿ  ಮಲೆಯಾಳ ಕಡ್ಡಾಯ ಆಧ್ಯಾದೇಶ ಜಾರಿಗೊಳಿಸಲಾಗಿದ್ದು, ಇದರಿಂದಾಗಿ ಕನ್ನಡಕ್ಕೆ ಮತ್ತಷ್ಟು  ಸಂಕಷ್ಟ  ಎದುರಾಗಲಿದೆ. ಈ ನಿಟ್ಟಿನಲ್ಲಿ  ಸರಕಾರದ ಸುಗ್ರೀವಾಜ್ಞೆಯನ್ನು  ಪ್ರಬಲವಾಗಿ ಪ್ರತಿಭಟಿಸಬೇಕಾಗಿದೆ. ಕನ್ನಡಿಗರು ಎಂದಿಗೂ ಮಲೆಯಾಳ ಸಹಿತ ಬೇರೆ ಭಾಷೆಗಳನ್ನು ದ್ವೇಷಿಸುವವರಲ್ಲ. ಆದರೆ ಸಂವಿಧಾನಬದ್ಧವಾಗಿ ದೊರೆತಿರುವ ಕನ್ನಡಿಗರ ಹಕ್ಕು, ಸ್ವಾತಂತ್ರ್ಯ, ಸವಲತ್ತುಗಳನ್ನು  ಕಸಿಯಲು ಹೊರಟರೆ ಸುಮ್ಮನೆ ಕೂರುವವರಲ್ಲ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ. ಕಾಸರಗೋಡು ಪ್ರದೇಶವು ಎಂದೆಂದಿಗೂ ಕನ್ನಡ ನೆಲ ಹಾಗೂ ಕನ್ನಡ ಭಾಷಾ ಪ್ರದೇಶವೇ ಆಗಿದೆ  ಎಂದು ಶ್ರೀಕಾಂತ್‌ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.