ದ್ವೇಷ ತೊರೆದು ಮನುಷ್ಯ ಸ್ನೇಹಿಯಾಗಬೇಕು: ಅಬ್ದುಲ್‌ ಖಾದರ್‌ ಮೌಲವಿ


Team Udayavani, Jun 6, 2019, 6:10 AM IST

khadar-moulavi

ಕಾಸರಗೋಡು: ಪವಿತ್ರ ರಮ್ಜಾನ್‌ ಮಾಸವನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ಭಕ್ತಿಯಿಂದ ಉಪವಾಸ, ಪ್ರಾರ್ಥನೆ ಮತ್ತು ದಾನದ ಮೂಲಕ ಪೂರ್ಣಗೊಳಿಸಿದ ಮುಸ್ಲಿಮರು ಬುಧವಾರ ಕೇರಳ ರಾಜ್ಯಾದ್ಯಂತ ಸಂಭ್ರಮದಿಂದ ಈದುಲ್‌ ಫಿತ್ರ ಹಬ್ಬವನ್ನು ಭಕ್ತಿ, ಶ್ರದ್ಧೆ, ಸಂಭ್ರಮ, ಸಡಗರದಿಂದ ಆಚರಿಸಿದರು.

ರಾಜ್ಯದೆಲ್ಲೆಡೆ ಮಸೀದಿ, ಈದ್ಗಾ ಮೈದಾನ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಧಾರ್ಮಿಕ ಉಪನ್ಯಾಸಗಳಲ್ಲಿ ಪ್ರೀತಿ, ತ್ಯಾಗ, ಸಹೋದರ ಭಾವ, ಶಾಂತಿಯ ಆದರ್ಶಗಳನ್ನು ಎತ್ತಿ ಹಿಡಿಯುವಂತೆ ಧರ್ಮ ಗುರುಗಳು ಕರೆ ನೀಡಿದರು.

ಸಂಭ್ರಮದ ಅಂಗವಾಗಿ ಮುಸ್ಲಿಮರು ನಡೆಸುತ್ತಿರುವ ಯತೀಮ್‌ ಖಾನಾಗಳಿಗೆ (ಅನಾಥಾಶ್ರಮ) ಭೇಟಿ ನೀಡಿದ ಮುಸ್ಲಿಮರು ಅಲ್ಲಿನ ನಿವಾಸಿಗಳಿಗೆ ಬಟ್ಟೆಗಳನ್ನು ದಾನವಾಗಿ ನೀಡಿದರಲ್ಲದೆ ಹಬ್ಬದ ಪಾರಿತೋಷಕಗಳನ್ನು ವಿತರಿಸಿದರು.

ಇತಿಹಾಸ ಪ್ರಸಿದ್ಧ ತಳಂಗರೆ ಮಾಲಿಕ್‌ ದಿನಾರ್‌ ಜುಮಾ ಮಸ್ಜಿದ್‌, ನೆಲ್ಲಿಕುಂಜೆ ಮುಹಿಯುದ್ದೀನ್‌ ಜುಮಾ ಮಸ್ಜಿದ್‌, ಕಾಸರಗೋಡು ಇಸ್ಲಾಮಿಕ್‌ ಸೆಂಟರ್‌, ಟೌನ್‌ ಮುಬಾರಕ್‌ ಮಸ್ಜಿದ್‌, ಟೌನ್‌ ಹಸನ್‌ತುಲ್‌ ಜಾರಿಯ (ಕಣ್ಣಾಡಿಪಳ್ಳಿ), ಕಾಸರಗೋಡು ಹೊಸ ಬಸ್‌ ನಿಲ್ದಾಣದ ಸುನ್ನಿ ಸೆಂಟರ್‌ ಮೊದಲಾದೆಡೆ ವಿಶೇಷ ಪ್ರಾರ್ಥನೆ ನಡೆಯಿತು. ಕೆಎನ್‌ಎಂ ಕಾಸರಗೋಡು ಟೌನ್‌ ಸಲಫಿ ಜುಮಾ ಮಸ್ಜಿದ್‌ ಈದ್ಗಾದಲ್ಲಿ ಪ್ರಾರ್ಥನೆಗೆ ಮುಹಮ್ಮದಲಿ ಸಲಫಿ ನೇತೃತ್ವ ನೀಡಿದರು.

ಮಸ್ಜಿದುನ್ನೂರಿನಲ್ಲಿ ಪ್ರವಚನ
ಈದುಲ್‌ ಫಿತ್ರ ಹಬ್ಬವು ಶಾಂತಿ ಸೌಹಾರ್ದವನ್ನು ಲೋಕಕ್ಕೆ ಸಾರುತ್ತಿದೆ. ಕೆಡುಕನ್ನು ಒಳಿತಿನ ಮೂಲಕ ಎದುರಿಸಿ ಮನುಷ್ಯ ಸ್ನೇಹಿಯಾಗಿ ಇತರ ಧರ್ಮ ದವರನ್ನು ನೋಯಿಸದೆ ಅವರನ್ನೂ ತಮ್ಮ ಸಹೋದರರಂತೆ ಕಾಣಲು ಪ್ರೇರಿಸಿದ ಧರ್ಮವಾಗಿದೆ ಇಸ್ಲಾಂ ಧರ್ಮ. ಮನುಷ್ಯ ಮನುಷ್ಯರೊಳಗಿನ ಸಂಬಂಧ ಉತ್ತಮ ವಾಗಬೇಕಿದೆ. ಹಳಸಿದ ಸಂಬಂಧಗಳು ಮರು ಜೋಡಣೆಯಾಗಬೇಕಿದೆ ಎಂಬ ಖುರಾನ್‌ ಸಂದೇಶ ನಮಗೆಲ್ಲ ಸ್ಫೂರ್ತಿಯಾಗಲಿ ಎಂಬುದಾಗಿ ಹಿರಿಯ ವಿದ್ವಾಂಸ ಅಬ್ದುಲ್‌ ಖಾದರ್‌ ಮೌಲವಿ ಹೇಳಿದರು.

ಅವರು ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿರುವ ಮಸ್ಜಿದುನ್ನೂರು ಜುಮಾ ಮಸೀದಿಯಲ್ಲಿ ಪೆರ್ನಾಲ್‌ ನಮಾಝ್ನ ಬಳಿಕ ಖುತುಬಾ ಪ್ರವಚನ ಹಾಗೂ ಸಂದೇಶವನ್ನು ನೀಡಿ ಮಾತನಾಡಿದರು. ಪವಿತ್ರವಾದ ರಮ್ಜಾನ್‌ ಉಪವಾಸದ ಬಳಿಕ ಶವ್ವಾಲ್‌ ತಿಂಗಳ ಆರಂಭದ ದಿನ ಈದುಲ್‌ ಫಿತ್ರ (ಸಣ್ಣ ಪೆರ್ನಾಲ್‌) ಹಬ್ಬವನ್ನು ನಾಡಿನಾ ದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಕುಂಜತ್ತೂರು ರಾ. ಹೆದ್ದಾರಿಯಲ್ಲಿರುವ ಮಸ್ಜಿದುನ್ನೂರು ಜುಮಾ ಮಸೀದಿಯಲ್ಲಿ ನಡೆದ ನಮಾಜಿಗೂ ಅಬ್ದುಲ್‌ ಖಾದರ್‌ ಮೌಲವಿಯವರು ನೇತೃತ್ವ ನೀಡಿದರು. ಈ ಮಸೀದಿಯಲ್ಲಿ ಸಹಸ್ರಾರು ಮಹಿಳೆಯರು ಹಾಗೂ ಪುರುಷರು ಮಕ್ಕಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಅದೇ ರೀತಿ ಉದ್ಯಾವರ ಸಾವಿರ ಜಮಾಹತ್‌, ಕುಂಜತ್ತೂರು, ಪೊಸೋಟು, ಪಾಂಡ್ಯಾಲ್‌ ಜಮಾಹತ್‌ಗಳಲ್ಲಿ, ಹೊಸಂಗಡಿ, ಕಡಂಬಾರ್‌, ಆನೆಕಲ್ಲು, ತೂಮಿನಾಡು, ಅಲ್‌ ಫತಾಹ್‌ ಜುಮಾ ಮಸೀದಿ ಗಳಲ್ಲಿ ಪೆರ್ನಾಲ್‌ ನಮಾಜ್‌, ಪ್ರವಚನ ಹಾಗೂ ಸಂದೇಶ ನಡೆಯಿತು.

30 ದಿವಸಗಳ ಉಪವಾಸ ವ್ರತ, ದಾನ ಧರ್ಮಗಳನ್ನು ಮಾಡುತ್ತಾ ಯಾವುದೇ ಕೆಡುಕಿಗೆ ಆಸ್ಪದ ನೀಡದ ಮುಸ್ಲಿಮರು ಸಾಕಷ್ಟು ಒಳಿತಿನ ಪುಣ್ಯದ ಕಾರ್ಯಗಳನ್ನು ಮಾಡಿ ತಮ್ಮ ಕುಟುಂಬಗಳೊಂದಿಗೆ ಈದುಲ್‌ ಫಿತ್ರ ಹಬ್ಬವನ್ನು ಆಚರಿಸಿದರು.

ಶುಭಾಶಯ ಸಂಭ್ರಮ
ಬೆಳಗ್ಗೆ ಶುಚಿಭೂìತರಾಗಿ ಹೊಸ ಉಡುಪುಗಳನ್ನು ಧರಿಸಿ ಸುಗಂಧ ಲೇಪಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ಪರಸ್ಪರ ಆಲಿಂಗಿಸಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬಳಿಕ ಬಂಧುಗಳ ಮತ್ತು ಮಿತ್ರರ ಮನೆಗಳಿಗೆ ತೆರಳಿ ಮೃಷ್ಟಾನ್ನ ಭೋಜನವನ್ನು ಸವಿದರು. ಮಕ್ಕಳು, ಮಹಿಳೆಯರು ಮನೆಯಲ್ಲಿ ಹೊಸ ಉಡುಗೆ ತೊಟ್ಟು ಹಬ್ಬವನ್ನು ಸಂಭ್ರಮಿಸಿದರು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.