ಕಾಸರಗೋಡು ಜನರಲ್‌ ಆಸ್ಪತ್ರೆ ತೀವ್ರ ಬಿಕ್ಕಟ್ಟಿನಲ್ಲಿ

ಜಲ ಪ್ರಾಧಿಕಾರದಿಂದ ನೀರು ಪೂರೈಕೆ ಮೊಟಕು

Team Udayavani, Apr 30, 2019, 6:30 AM IST

general-hospital

ಕಾಸರಗೋಡು, ಎ. 29: ಜಲ ಪ್ರಾಧಿಕಾರದಿಂದ ಕಾಸರಗೋಡು ಜನರಲ್‌ ಆಸ್ಪತ್ರೆಗೆ ಪೂರೈಕೆಯಾಗುತ್ತಿದ್ದ ನೀರು ನಿಲುಗಡೆಯಿಂದ ಆಸ್ಪತ್ರೆಯ ರೋಗಿಗಳು ಮತ್ತು ಸಿಬಂದಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಯಸ್ವಿನಿ ಹೊಳೆಯ ಬಾವಿಕ್ಕೆರೆ ಜಲ ದಾಸ್ತಾನು ಕೇಂದ್ರದಲ್ಲಿ ನೀರು ಪಂಪಿಂಗ್‌ ನಿಲುಗಡೆಗೊಂಡಿರುವುದರಿಂದ ಆಸ್ಪತ್ರೆಗೆ ನೀರು ಪೂರೈಕೆ ನಿಲುಗಡೆಗೆ ಪ್ರಮುಖ ಕಾರಣವಾಗಿದೆ. ಜನರಲ್‌ ಆಸ್ಪತ್ರೆಯ ದೈನಂದಿನ ನಿರ್ವಹಣೆಗೆ ಎರಡು ಲಕ್ಷ ಲೀಟರ್‌ಗಳಷ್ಟು ನೀರಿನ ಅಗತ್ಯವಿದೆ. ಇದರಲ್ಲಿ ಜಲ ಪ್ರಾಧಿಕಾರದ ಮೂಲಕ ಒಂದು ಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿತ್ತು.

ನೀರು ಪೂರೈಕೆ ಮೊಟಕುಗೊಂಡಿರುವುದರಿಂದಾಗಿ ಜನರಲ್‌ ಆಸ್ಪತ್ರೆಯ ಏಳು ಅಂತಸ್ತಿನ ಕಟ್ಟಡ ಮತ್ತು ಇತರ ಕಟ್ಟಡಗಳ ನೀರಿನ ಟ್ಯಾಂಕ್‌ ಬರಿದಾಗಿದೆ. ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯ ಶೌಚಾಲಯ, ಸ್ನಾನದ ಕೊಠಡಿ, ಲ್ಯಾಬ್‌ ಮತ್ತಿತರ ಎಲ್ಲ ವಾರ್ಡ್‌ಗಳಿಗೂ ನೀರು ಪೂರೈಕೆ ಮೊಟಕುಗೊಂಡಿದೆ. ಈಗ ಆಸ್ಪತ್ರೆಯ ಬಾವಿಯಿಂದ ನೀರು ಅತ್ಯಗತ್ಯಕ್ಕೆ ಬಳಸಲಾ ಗುತ್ತಿದೆ. ಜಲ ಪ್ರಾಧಿಕಾರದಿಂದ ಪೂರೈಕೆ ಗೊಳ್ಳುತ್ತಿದ್ದ ನೀರಿನಲ್ಲಿ ಉಪ್ಪಿನ ಅಂಶ ಇರುವು ದರಿಂದ ಉಪಯೋಗಿಸಲು ಅಸಾಧ್ಯವಾಗಿದೆ.

ಆಸ್ಪತ್ರೆಯ ಬಾವಿಯಿಂದ ಅಪರಿಮಿತ ಪಂಪಿಂಗ್‌ ಮಾಡುತ್ತಿರುವುದರಿಂದ ಈ ಬಾವಿ ಯಲ್ಲೂ ನೀರು ಬತ್ತ ತೊಡಗಿದೆ. ಕಳೆದ ವರ್ಷ ಬೇಸಗೆ ಕಾಲದಲ್ಲಿ ತಲಾ 3,000 ಲೀಟರ್‌ಗೆ ತಲಾ 800 ರೂ. ತೆತ್ತು ಖಾಸಗಿ ವಲಯದಿಂದ ಆಸ್ಪತ್ರೆಗೆ ನೀರು ಪೂರೈಸುವ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈ ಬಾರಿ ಕಾಸರ ಗೋಡಿನಲ್ಲಿ ಜಲಸಂಪನ್ಮೂಲಗಳಲ್ಲಿ ನೀರಿನ ಮಟ್ಟ ಗಣನೀಯ ಕುಸಿದಿರುವುದರಿಂದಾಗಿ ಆಸ್ಪತ್ರೆಗೆ ಅಗತ್ಯದ ನೀರನ್ನು ಖಾಸಗಿ ವಲಯದಿಂದಲೂ ಪೂರೈಸಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ಆಸ್ಪತ್ರೆಯ ಡಯಾಲಿಸಿಸ್‌ ಪ್ರಕ್ರಿಯೆ ಮೇಲೂ ಇದು ಪರಿಣಾಮ ಬೀರ ತೊಡಗಿದೆ. ನೀರಿನ ಸಮಸ್ಯೆ ಆಸ್ಪತ್ರೆಯ ದೈನಂದಿನ ಚಟುವಟಿಕೆ ಮತ್ತು ಆಪರೇಷನ್‌ಗಳಿಗೂ ಪ್ರತಿಕೂಲಕರವಾಗಿ ಪರಿಣಮಿ ಸಿದೆ. ಇನ್ನೊಂದೆಡೆ ನೀರು ಲಭಿಸದೆ ರೋಗಿ ಗಳು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ನೀರಿನ ಅಲಭ್ಯ ಸಾಂಕ್ರಾಮಿಕ ರೋಗ ಹರಡು ವಿಕೆಗೂ ಕಾರಣವಾಗಬಹುದೆಂಬ ಆತಂಕವನ್ನು ಆಸ್ಪತ್ರೆಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಟ್ಯಾಂಕ್‌ಗಳ ಮೂಲಕ ಹೊರಗಡೆಯಿಂದ ನೀರು ಪೂರೈಸುವ ಯತ್ನದಲ್ಲಿ ಆಸ್ಪತ್ರೆಯ ಸಂಬಂಧಪಟ್ಟವರು ತೊಡಗಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.