ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಎಡರಂಗ ಸರಕಾರ ಯತ್ನ


Team Udayavani, Feb 16, 2019, 1:25 AM IST

14ksde7.jpg

ಕಾಸರಗೋಡು : ಎಡರಂಗ ಸರಕಾರವು ಶಬರಿಮಲೆಗೆ ಯುವತಿಯರನ್ನು ಪ್ರವೇಶಿಸುವಂತೆ ಮಾಡಿ ಕೇರಳದ ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್‌ ಆರೋಪಿಸಿದ್ದಾರೆ.

ಶಬರಿಮಲೆ ಸನ್ನಿಧಾನದ ಆಚಾರ ಅನುಷ್ಠಾನಗಳನ್ನು ಬುಡಮೇಲುಗೊಳಿಸಲು ಯತ್ನಿಸುತ್ತಿರುವ ಕೇರಳದ ಪಿಣರಾಯಿ ವಿಜಯನ್‌ ಸರಕಾರದ ಧೋರಣೆಯನ್ನು ಪ್ರತಿಭಟಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಹೊಸ ಬಸ್‌ ನಿಲ್ದಾಣದ ಪರಿಸರದಲ್ಲಿ ಆಯೋಜಿಸಿದ ಧರಣಿ ಸತ್ಯಾಗ್ರಹದಲ್ಲಿ  ಅವರು ಮಾತನಾಡಿದರು.

ಕೇರಳದಲ್ಲಿ ಕಳೆದ 11 ವರ್ಷಗಳಿಂದ ಭಕ್ತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದು ಸಿಪಿಎಂ ಪಕ್ಷವನ್ನು ಸಂಪೂರ್ಣ ವಾಗಿ ನಿದ್ದೆಗೆಡಿಸಿದೆ. ಇದರಿಂದ ಕಂಗೆಟ್ಟ ಕೇರಳದ ಎಡರಂಗ ಸರಕಾರವು ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಯತ್ನಿಸುತ್ತಿದೆ. ಕಳೆದ 15 ವರ್ಷಗಳಲ್ಲಿ ರಾಜ್ಯದಲ್ಲಿ 15000 ದಷ್ಟು ದೇವ ಸ್ಥಾನಗಳು ಪುನರುದ್ಧಾರಗೊಂಡಿವೆ. 

ಇದು ಕೇರಳದ ಜನರಲ್ಲಿ ಆಸ್ತಿಕ ಮನೋಭಾವ ಹೆಚ್ಚುತ್ತಿರು ವುದಕ್ಕೆ ಸಾಕ್ಷಿಯಾಗಿದೆ. ಈಗ ರಾಜ್ಯದ ಎಲ್ಲೆಡೆ ಶ್ರೀ ಕೃಷ್ಣ ಜಯಂತಿ ಆಚರಣೆ, ಗಣೇಶೋತ್ಸವ ಆಚರಣೆ ಇತ್ಯಾದಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ. ಇದು ರಾಜ್ಯದಲ್ಲಿ ಆಧ್ಯಾತ್ಮಿಕ ಹಾಗು ಧಾರ್ಮಿಕ ಮುನ್ನಡೆಯನ್ನು ಎತ್ತಿ ತೋರಿಸುತ್ತಿದೆ. 

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದೆ ನಾಸ್ತಿಕವಾದಕ್ಕೆ  ಪೆಟ್ಟು  ಬಿದ್ದು ಸಿಪಿಎಂ ಪಕ್ಷವು  ನಿರ್ನಾಮಗೊಳ್ಳಲಿದೆ ಎಂಬುದನ್ನು ಮನಗಂಡು ಶಬರಿಮಲೆಗೆ ಯುವತಿಯರು ಪ್ರವೇಶಿಸುವಂತೆ ಮಾಡಿ ಹಿಂದುಗಳ ನಂಬಿಕೆಗಳಿಗೆ ಘಾಸಿ ಯುಂಟು ಮಾಡಿದಾಗ ತಮ್ಮ ಬೇಳೆಯನ್ನು ಬೇಯಿಸಲು ಸಾಧ್ಯವಿದೆ ಎಂಬುದು ಸಿಪಿಎಂನ ಷಡ್ಯಂತ್ರವಾಗಿದೆ.

ಈ ನಿಟ್ಟಿನಲ್ಲಿ ಎಡರಂಗ ಸರಕಾರ ಹಾಗೂ ಆಡಳಿತ ಯಂತ್ರ ಕೂಡ ಕಾರ್ಯವೆಸಗುತ್ತಿದೆ ಎಂದು ಕೆ.ಸುರೇಂದ್ರನ್‌ ಹೇಳಿದರು. ಹಿಂದು ಕ್ಷೇತ್ರಗಳ ಆಸ್ತಿಪಾಸ್ತಿಗಳ ಬಗ್ಗೆ ಹಸ್ತಕ್ಷೇಪ ನಡೆಸುತ್ತಿರುವ ಪಿಣರಾಯಿ ವಿಜಯನ್‌ ಸರಕಾರಕ್ಕೆ ಮುಸ್ಲಿಂ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆಯಾಗಲಿ ಹಾಗು ಕ್ರಿಶ್ಚಿಯನ್‌ ಸಭಾಗಳು ನಡೆಸುವ ಸಾವಿರ ಕೋಟಿ ರೂ.ಗಳ  ಆಸ್ತಿಗಳ ಬಗ್ಗೆಯಾಗಲಿ ಹಸ್ತಕ್ಷೇಪ ನಡೆಸುವ ಧೈರ್ಯ ಇಲ್ಲ. ಕಾರಣ ಇವೆಲ್ಲಕ್ಕೂ ವೋಟ್‌ ಬ್ಯಾಂಕ್‌ ಪ್ರಮುಖ ಕಾರಣವಾಗಿದೆ. ಆದುದರಿಂದ ಹಿಂದು ಆಚಾರ ಅನುಷ್ಠಾನಗಳಿಗೆ ಧಕ್ಕೆ ತರುವ ಕೇರಳ ಸರಕಾರದ ಧೋರಣೆಯನ್ನು ಪ್ರತಿಭಟಿಸಲು ಪ್ರತಿಯೋರ್ವ ಆಸ್ತಿಕರೂ ಮುಂದೆ ಬರಬೇಕೆಂದು ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್‌ ಅಧ್ಯಕ್ಷತೆ ವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಸುರೇಶ್‌ ಕುಮಾರ್‌ ಶೆಟ್ಟಿ ಪೂಕಟ್ಟೆ, ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.