ರಂಗಭೂಮಿ ಸಮಾಜದ ಕನ್ನಡಿ, ಕಲಾವಿದನಿಗೆ ಗೌರವ: ಒಡಿಯೂರು ಶ್ರೀ

ಉತ್ತರ ಕೊರ್ಲೆ, ಗಿರಿಗಿಟ್‌ ಗಿರಿಧರೆ ನಾಟಕಗಳ ಮುಹೂರ್ತ

Team Udayavani, Jun 28, 2019, 5:55 AM IST

27KSDE12

ಮಂಜೇಶ್ವರ: ಶಾರದಾ ಆರ್ಟ್ಸ್ ಕಲಾವಿದೆರ್‌ ಮಂಜೇಶ್ವರ ಮತ್ತು ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್‌ ಮಂಜೇಶ್ವರ ತಂಡದ ನೂತನ ನಾಟಕಗಳ ಶುಭ ಮುಹೂರ್ತವು ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ರಂಗಭೂಮಿಯು ಸಮಾಜದ ಕನ್ನಡಿ. ಹಾಸ್ಯವೇ ನಾಟಕವಲ್ಲ, ನಾಟಕವೇ ಹಾಸ್ಯವಲ್ಲ. ಸಂದೇಶ ಸಾರುವ ಕಥಾವಸ್ತು ಹಾಸ್ಯದೊಂದಿಗೆ ಬೆರೆತು ನಾಟಕ ಪ್ರದರ್ಶಿಸಿದರೆ ಸಮಾಜಕ್ಕೆ ಒಳಿತಾಗಬಹುದು. ಕಲೆಗೆ ಆರಾಧನ ಶಕ್ತಿ ಉಂಟು. ಅದನ್ನು ನಂಬಿ ನಡೆದರೆ ಕಲಾವಿದರು ಉನ್ನತ ಮಟ್ಟಕ್ಕೆ ಮುಟ್ಟಬಹುದು. ಅದಕ್ಕೆ ಶಾರದಾ ಐಸಿರಿ ತಂಡವೇ ಸಾಕ್ಷಿ ಎಂದರು.

ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿ, ಅಂದು ಸಮಾಜದಲ್ಲಿ ನಾಟಕದವ, ಆಟದವ ಎಂಬ ತಾತ್ಸಾರ ಭಾವನೆ ಇತ್ತು. ಇಂದು ಕಲಾವಿದರಿಗೆ ರಾಜ ಮರ್ಯಾದೆ ಸಿಗುತ್ತದೆ. ರಂಗಭೂಮಿಯಿಂದ ಎಷ್ಟೋ ಕಲಾವಿದರ ಸಂಸಾರ ಸಾಗುತ್ತಿದೆ. ಸಮಾಜವು ಇನ್ನಷ್ಟು ಪ್ರೋತ್ಸಾಹಿಸಿದರೆ ಕಲಾವಿದರ ಬದುಕು ಅಭಿವೃದ್ಧಿ ಹೊಂದಬಹುದು ಎಂದು ನುಡಿದರು.

ಕಣಿಯೂರು ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ಆಶೀರ್ವಚನ ನೀಡಿ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಸರಗೋಡು ಚಿನ್ನಾ ತುಳು ರಂಗಭೂಮಿಯ ಖಾತ್ಯ ಕಲಾವಿದ, ಚಲನಚಿತ್ರ ನಟ, ಐಸಿರಿ ತಂಡದ ನಿರ್ದೇಶಕ ಕುಸಲ್ದರಸೆ ನವೀನ್‌ ಡಿ. ಪಡೀಲ್‌ ಅವರನ್ನು ಸಮ್ಮಾನಿಸಲಾಯಿತು. ಸಮಾರಂಭದಲ್ಲಿ ತಿಮ್ಮಪ್ಪ ಕಾಂಜರು, ಕೋಳಾರು ಸತೀಶ್ಚಂದ್ರ ಭಂಡಾರಿ, ಪಾವಳ ಶ್ರೀ ಉದಯ ಗುರುಸ್ವಾಮಿ, ಎಸ್‌.ಎನ್‌ ಕಡಂಬಾರು, ಪದ್ಮನಾಭ ಕಡಪ್ಪರ, ನ್ಯಾಯವಾದಿ ನವೀನ್‌ ರಾಜ್‌ ಕೆ.ಜೆ., ಶಶಿಧರ ಪೊಯ್ಯತ್ತಬೈಲು, ಸಂಕಬೈಲು ಮಂಜುನಾಥ ಅಡಪ್ಪ, ಹರೀಶ್‌ ಶೆಟ್ಟಿ ಮಾಡ ಶುಭಹಾರೈಸಿದರು.

ನಾಟಕಗಳ ಪ್ರಥಮ ಪ್ರದರ್ಶನ ಜುಲೈ 28 ಮತ್ತು ಆಗಸ್ಟ್‌ 3ರಂದು ಶ್ರೀ ಧಾಮ ಮಾಣಿಲದಲ್ಲಿ ಕಾಣಲಿದೆ. ಪ್ರಕಾಶ್‌ ಕೆ.ತೂಮಿನಾಡು ಸ್ವಾಗತಿಸಿದರು. ಸುಂದರ್‌ ರೈ ಮಂದಾರ ವಂದಿಸಿದರು. ಸೋಮನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಎಲ್ಲರನ್ನೂ ಒಪ್ಪಿಕೊಳ್ಳಬೇಕು ನಾನು ಅನ್ನುವುದು ಬಿಟ್ಟು ನಾವು ಎಂಬ ಆತ್ಮಶುದ್ಧಿಯಿಂದ ರಂಗಭೂಮಿಯಲ್ಲಿ ಕಲಾವಿದನಾಗಿ ಸಾಗಿ ಇನ್ನೊಬ್ಬರ ಪ್ರತಿಭೆಯನ್ನು ಒಪ್ಪಿಕೊಂಡು ಕಲಾಸೇವೆ ಮಾಡಿದರೆ ಕಲಾ ಸರಸ್ವತಿ ಒಲಿಯುವಳು.
– ಕಾಸರಗೋಡು ಚಿನ್ನಾ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.