ಕುಂಬಳೆ: ಎಂಟು ಮಕ್ಕಳನ್ನು ಹೆತ್ತು ಹೊತ್ತ ತಾಯಿಯ ಕರುಣಾಜನಕ ಕ(ವ್ಯ)ಥೆ !


Team Udayavani, Jul 28, 2019, 5:38 AM IST

mane

ಕುಂಬಳೆ : ಕುಂಬಳೆ ಗ್ರಾಮ ಪಂಚಾಯತ್‌ನ ಲಕ್ಷಂವೀಡು ಕಾಲನಿಯಲ್ಲಿ ಸುಮಾರು ಐವತ್ತು ವರ್ಷಗಳ ಹಿಂದೆ ಸರಕಾರದ ಲಕ್ಷಮನೆ ಯೋಜನೆಯಲ್ಲಿ ಲಭಿಸಿದ ಅದೇ ಮುರುಕು ಮನೆಯಲ್ಲಿ ವಿಧವೆಯಾಗಿರುವ ಎಂಭತ್ತೇಳರ ಹರೆಯದ ಪರಿಶಿಷ್ಟ ವರ್ಗದ ಚಮ್ಮಾರ ಸಮುದಾಯದ ದೇವಕಿ ಅಮ್ಮ ತನ್ನ ಓರ್ವ ಅಶಕ್ತೆ ಪುತ್ರಿಯೊಂದಿಗೆ ವಾಸಿಸುತ್ತಿರುವರು..

ಅತ್ಯಂತ ದುರ್ಬಲವಾಗಿರುವ ಎರಡು ಕೋಣೆಯ ಹಂಚು ಹಾಸಿದ ಕಲ್ಲು ಮಣ್ಣಿನ ಗೋಡೆಯಿಂದ ನಿರ್ಮಿಸಿದ ಹರುಕುಮುರುಕು ಮನೆಯೊಳಗೆ ಗಾಳಿ ಮಳೆಗೆ ಯಾವ ಕ್ಷಣದಲ್ಲೂ ಧರಾಶಾಯಿಯಾಗುವ ಭಯ,ಆತಂಕದಲ್ಲಿ ಇವರಿಬ್ಬರು ದಿನ ಕಳೆಯುತ್ತಿರುವರು. ಶೌಚಾಲಯ, ನೀರು ಮತ್ತು ವಿದ್ಯುತ್ತಿನ ಸಂಪರ್ಕವೂ ಇಲ್ಲದ ಈ ಮನೆಯಲ್ಲಿ ಮಾನಸಿಕ ಅಸ್ವಸ್ಥೆ, ಅರ್ಬುದ ರೋಗ ಪೀಡಿತೆ 45ರ ಹರೆಯದ ಪುತ್ರಿಯೊಂದಿಗೆ ದೇವಕಿ ಜೀವನ ಸಾಗಿಸುತ್ತಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ದೇವಕಿ ಅಮ್ಮ ಮತ್ತು ಪುತ್ರಿಗೆ ಲಭಿಸುವ ಸರಕಾರದ ಕೇವಲ ಪಿಂಚಣಿ ಯೇ ಇವರ ಜೀವನಕ್ಕೆ ಆಧಾರವಾಗಿದೆ. ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ಕೈಸೇರುವ ಪಿಂಚಣೆಯಲ್ಲಿ ಔಷಧಿ ಸಹಿತ ತಮ್ಮ ಇತರ ಎಲ್ಲ ಖರ್ಚುವೆಚ್ಚಗಳನ್ನು ಸರಿದೂಗಿಸಬೇಕಾಗಿದೆ.

ನಾಲ್ಕು ಹೆಣ್ಣು ಮತ್ತು ನಾಲ್ಕು ಗಂಡು ಮಕ್ಕಳನ್ನು ಹೆತ್ತ ತಾಯಿಯಾಗಿದ್ದರೂ ತನ್ನ ಬುದ್ಧಿಮಾಂದ್ಯ ಮಗಳನ್ನು ಕರೆದುಕೊಂಡು ಮಕ್ಕಳ ಜೊತೆ ವಾಸಿಸಲು ಒಪ್ಪದೆ ಈ ಮನೆಯಲ್ಲಿಯೇ ನೆಲೆಸಿರುವರು.ಇತರ ಮಕ್ಕಳೆಲ್ಲರಿಗೂ ಮದುವೆಯಾಗಿದ್ದು ಕುಟುಂಬ ಸಮೇತ ಪರವೂರಿನಲ್ಲಿ ನೆಲೆಸಿದ್ದಾರೆ. ನಾಲ್ವರು ಗಂಡು ಮಕ್ಕಳಲ್ಲಿ ಓರ್ವ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟು ಇತರ ಮೂರು ಮಂದಿ ಕೂಲಿ ನಾಲಿ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ಪತ್ನಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿರುವರು.

ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಈ ಮನೆಯಲ್ಲಿ ತಾಯಿಯೊಂದಿಗಿರಲು ಯಾವ ಮಕ್ಕಳೂ ಸಿದ್ಧರಿಲ್ಲ. ನಿತ್ಯವೂ ನೀರಿಗಾಗಿ ಅಕ್ಕ ಪಕ್ಕದ ಮನೆಯವರ ಕೊಳವೆ ಬಾವಿ ಅಥವಾ ದೂರದಲ್ಲಿರುವ ಸಾರ್ವಜನಿಕ ಬಾವಿಯನ್ನು ಆಶ್ರಯಿಸಬೇಕಾಗಿದೆ. ಮೇಲ್ಛಾವಣಿ ಮತ್ತು ಭದ್ರವಾದ ಬಾಗಿಲು ಇಲ್ಲದ ಬಚ್ಚಲು ಮನೆಯನ್ನು ಸ್ಥಾನಕ್ಕೆ ಬಳಸಬೇಕು. ಕತ್ತಲೆಯ ಬದುಕಿನ ಬೆಳಕಿಗೆ ಸೀಮೆ ಎಣ್ಣೆಯ ದೀಪವೇ ಗತಿ.

2016ರಲ್ಲಿ ಕೇಂದ್ರ ಸರಕಾರದ ಸ್ವಚ್ಛ ಭಾರತ ಯೋಜನೆಯಲ್ಲಿ ಎಲ್ಲ ಮನೆಗೂ ಶೌಚಾಲಯ ನಿರ್ಮಿಸಲು ಅನುದಾನಕ್ಕೆ ಅರ್ಹರಾದ ಫಲಾನುಭವಿ ಪಟ್ಟಿಯಲ್ಲಿ ದೇವಕಿಯಮ್ಮನ ಹೆಸರು ಸೇರ್ಪಡೆಗೊಂಡಿದ್ದರೂ ಈ ವೇಳೆ ತನ್ನ ಅಸೌಖ್ಯ ಪೀಡಿತ ಮಗಳ ಚಿಕಿತ್ಸೆಗಾಗಿ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣಕ್ಕೆ ಅದರಿಂದ ಅವರು ವಂಚಿತರಾಗಿರುವರು.

ಕಳೆದ ವರ್ಷ ವಾರ್ಡು ಸದಸ್ಯೆ ಪುಷ್ಪಲತಾ ಶಾಂತಿಪಳ್ಳ ಇವರ ಮುತುವರ್ಜಿಯಿಂದ ಕೇಂದ್ರ ಸರಕಾರ ಉಜ್ವಲ ಯೋಜನೆಯಲ್ಲಿ ಉಚಿತ ಅಡುಗೆ ಅನಿಲ ಸಂಪರ್ಕ ಮತ್ತು ಗ್ರಾಮ ಪಂಚಾಯತ್‌ ವತಿಯಿಂದ ಮಂಚವೂ ಲಭಿಸಿರುವುದಾಗಿ ದೇವಕಿ ಅಮ್ಮ ಕೃತಜ್ಞತೆಯಿಂದ ನೆನೆಯುತ್ತಾರೆ.

ಆದರೆ ಎಲ್ಲಕ್ಕಿಂತ ಮುಖ್ಯವಾಗಿ ವಾಸಯೋಗ್ಯವಾಗಿರುವ ಸುಸಜ್ಜಿತ ಮನೆಯೊಂದು ದೇವಕಿ ಮತ್ತು ಅವರ ಪುತ್ರಿಯ ತುರ್ತು ಆವಶ್ಯಕತೆಯಾಗಿದೆ. ಇದಕ್ಕಾಗಿ ದೇವಕಿ ಅಮ್ಮನ ಕುಟುಂಬದ ಹಿತಚಿಂತಕರಾದ ಕೆಲವುಯುವಕರು ಸೇರಿ ಸ್ಥಳೀಯ ಗ್ರಾಮ ಪಂಚಾಯತ್‌ ಸದಸ್ಯೆಯ ನೇತೃತ್ವದಲ್ಲಿ ಸಾರ್ವಜನಿಕ,ಉದಾರ ದಾನಿಗಳ ಆರ್ಥಿಕ ನೆರವಿನಿಂದ ಮೂಲಭೂತ ಸೌಕರ್ಯಗಳೊಂದಿಗೆ ಚಿಕ್ಕ ಚೊಕ್ಕದಾದ ಮನೆಯೊಂದನ್ನು ನಿರ್ಮಿಸಿಕೊಡಲು ಮತ್ತು ಅವರಿಬ್ಬರ ಕಾಯಿಲೆಗೆ ಔಷಧಿ,ಚಿಕಿತ್ಸೆ ಪಡೆಯಲು ಶಾಶ್ವತ ನಿಧಿ ಸಂಗ್ರಹಿಸಲು ಮುಂದಾಗಿರುವರು.

ಇದಕ್ಕೆ ಊರ ಪರವೂರ ಸಹೃದಯಿ ದಾನಿಗಳ, ಸಂಘ, ಸಂಸ್ಥೆಗಳ ಮತ್ತು ಸಾರ್ವಜನಿಕರ ಸಹಕಾರ ಆಗತ್ಯವಿದ್ದು ಆರ್ಥಿಕ ಸಹಾಯ ನೀಡಲಿಚ್ಚಿಸುವವರು ದೇವಕಿ ಅವರ ಖಾತೆ ಶ್ರೀಮತಿ ದೇವಕಿ ಡಿ/ಟ ತನಿಯನಾಯ್ಕ ಕೇರಳ ಗ್ರಾಮೀಣ ಬ್ಯಾಂಕ್‌,ಕುಂಬಳೆ ಶಾಖೆ SB A/c No 40517101045019-IFSC KLGB0040517 ಖಾತೆಗೆ ಪಾವತಿಸಬಹುದು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.