ಆದೇಶ ರದ್ದತಿಗೆ ಪ್ರಧಾನಿ, ರಾಷ್ಟ್ರಪತಿಗೆ ಮನವಿ


Team Udayavani, Jun 3, 2018, 6:00 AM IST

ss-35.jpg

ಕಾಸರಗೋಡು: ಕೇರಳ ಸರಕಾರ ಒಂದನೇ ತರಗತಿಯಿಂದ ಹತ್ತನೇ ತರಗತಿ ವರೆಗೆ ಮಲಯಾಳ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶವನ್ನು ಪ್ರತಿಭಟಿಸಿ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನದ ಬಳಿಕ ಮನವಿಯನ್ನು ಕೇರಳ ಮುಖ್ಯಮಂತ್ರಿ, ಪ್ರಧಾನಿ ಹಾಗೂ ರಾಷ್ಟ್ರಪತಿಗೆ ಸಲ್ಲಿಸಲು ತೀರ್ಮಾನಿಸಿದೆ.

ಕನ್ನಡ ಅಧ್ಯಾಪಕ ಭವನದಲ್ಲಿ ಶನಿವಾರ ನಡೆದ ಕನ್ನಡ ಹೋರಾಟ ಸಮಿತಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಈ ಆದೇಶದ ಮೂಲಕ ಭಾಷಾ ಅಲ್ಪಸಂಖ್ಯಾಕ ಕನ್ನಡಿಗರು ಅನುಭವಿಸುವ ವಿವಿಧ ಸಮಸ್ಯೆಗಳು ಮತ್ತು ಕಚೇರಿಗೆ ಯಾವುದೇ ಆದೇಶದ ಸುತ್ತೋಲೆ ಬರದ ಹಿನ್ನೆಲೆಯಲ್ಲಿ ಬಲವಂತವಾಗಿ ಮಲಯಾಳ ಪುಸ್ತಕಗಳನ್ನು ಶಾಲೆಗಳಿಗೆ ಕಳುಹಿಸದಂತೆ ಶಾಸಕರ ಸಹಿತ ಜನಪ್ರತಿನಿಧಿ ಗಳೊಂದಿಗೆ ಡಿ.ಡಿ. ಅವರನ್ನು ಭೇಟಿಯಾಗಿ ಮನವಿ ಮಾಡಲು ತೀರ್ಮಾನಿಸಲಾಯಿತು. ಜೂನ್‌ 24ರ ವರೆಗೆ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು. ಜೂನ್‌ 30ರೊಳಗೆ ಸಾವಿರಾರು ಸಹಿ ಯನ್ನೊಳಗೊಂಡ ಮನವಿಯನ್ನು ಸಲ್ಲಿ ಸಲು ತೀರ್ಮಾನಿಸಲಾಗಿದೆ.

ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ ಸಭೆಯ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಎಸ್‌.ವಿ. ಭಟ್‌, ಎಂ.ವಿ. ಮಹಾಲಿಂಗೇಶ್ವರ ಭಟ್‌ ತಾರಾನಾಥ ಮಧೂರು, ಡಾ| ಬೇ.ಸಿ. ಗೋಪಾಲಕೃಷ್ಣ ಭಟ್‌, ಬಿ. ರಾಮ ಮೂರ್ತಿ, ವಿ.ಬಿ. ಕುಳಮರ್ವ, ಬಿ. ಬಾಲಕೃಷ್ಣ ಅಗ್ಗಿತ್ತಾಯ, ಟಿ. ಶಂಕರ ನಾರಾಯಣ ಭಟ್‌, ಪ್ರದೀಪ್‌ ಶೆಟ್ಟಿ, ಸತ್ಯ
ನಾರಾಯಣ ಕಾಸರಗೋಡು, ಗುರು ಪ್ರಸಾದ್‌ ಕೋಟೆಕಣಿ, ಪ್ರಶಾಂತ್‌ ಹೊಳ್ಳ, ವಿಶಾಲಾಕ್ಷ ಪುತ್ರಕಳ, ಡಾ| ಯು. ಮಹೇಶ್ವರಿ, ಶ್ಯಾಮಲಾ ರವಿರಾಜ್‌ ಮೊದಲಾದವರು ಮಾತನಾಡಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.