ದೇಗುಲಗಳು ನ್ಯಾಯಾಲಯಗಳಾಗಬೇಕು : ಡಾ| ನಾರಾಯಣನ್‌ 


Team Udayavani, Mar 15, 2019, 1:00 AM IST

degula.jpg

ಕಾಸರಗೋಡು: ಭಾರತವು ಪುಣ್ಯ ತೀರ್ಥಗಳ ನಾಡು. ಇದು ಯಜ್ಞ ಭೂಮಿಯೂ ಹೌದು. ಆಚಾರ್ಯತ್ವ, ಆಮ್ನಾಯ ಜಪ, ಉತ್ಸವ, ಅನ್ನದಾನ, ನಿಯಮ (ಆಚಾರ) ಇವು ಪಂಚತತ್ವಗಳೇ ವಿಗ್ರಹಗಳಿಗೆ ಜೀವಕಳೆ ತುಂಬುವ ಮತ್ತು ಚೈತನ್ಯ ವೃದ್ಧಿಸುವ ಘಟಕಗಳು. ಯಾವುದೇ ವೈರುಧ್ಯಗಳಿದ್ದರೂ ಪರಸ್ಪರ ಸಹಕರಿಸಿ ಜೀವಿಸುವ ಕಲೆಯನ್ನು “ಶಿವ ಕುಟುಂಬ’ ದಾರಿ ತೋರಿಸುತ್ತದೆ. ಶ್ರೀ ರುದ್ರವನ್ನು ಮನನ ಮಾಡಿಕೊಂಡು ಪಂಚಾಕ್ಷರಿ ನಾಮದೊಂದಿಗೆ ಶಿವೋಪಾಸನೆಗೈಯಬೇಕು.

ಉತ್ಸವಗಳೆಂದರೆ ಶ್ರೀ ದೇವರು ಸಂತೋಷದಿಂದಿರುವ    ಸಂದರ್ಭ ಎಂದರ್ಥ. ದೇಗುಲಗಳು ವೈದ್ಯಾಲಯಗಳಾಗುವಂತೆ ಭಗವದ್ಭಕ್ತರ ಪಾಲಿಗೆ ನ್ಯಾಯಾಲಯವೂ ಆಗಬೇಕು. ಸಣ್ಣಪುಟ್ಟ ಕೌಟುಂಬಿಕ ಸಮಸ್ಯೆಗಳಿಗೆ ಪೊಲೀಸ್‌ ಠಾಣೆಗೆ ಹೋಗುವ ಬದಲು, ಪರಿಹಾರಗಳಿಗೆ ದೇಗುಲಗಳು  ನ್ಯಾಯಾಲಯಗಳಾಗಿ ಪರಿವರ್ತಿಸಿ ಕೊಳ್ಳಬೇಕು. ಭಕ್ತರಿಗೆ ಸಹಬಾಳ್ವೆಯ ಸಂದೇಶ ನೀಡಲು ಸತ್ಸಂಗಗಳನ್ನು ಏರ್ಪಡಿಸಬೇಕು. ನಮ್ಮೆಲ್ಲರ ಜೀವನವು ಶಿವಮಯವಾಗಲಿ ಎಂದು ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿ ಕೋ-ಆರ್ಡಿನೇಟರ್‌ ಡಾ| ಎಂ. ನಾರಾಯಣನ್‌ ಭಟ್ಟತ್ತಿರಿಪ್ಪಾಡ್‌ ಹೇಳಿದರು.

ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.

ರಾಷ್ಟ್ರ ನಿರ್ಮಾಣ  
ಕಾಸರಗೋಡಿನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂಬುದಕ್ಕೆ ಕಾವಿಮಯ ಅಲಂಕಾರವೇ ಸಾಕ್ಷಿ.   ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ದೇಗುಲ ಜೀರ್ಣೋದ್ಧಾರದಿಂದ  ಪ್ರೇರಣೆ ಲಭಿಸಲಿ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಶ್ವ ಹಿಂದೂ ಪರಿಷತ್‌ ಕರ್ನಾಟಕ ಪ್ರಾಂತ್ಯ ಅಧ್ಯಕ್ಷ ಎಂ.ಬಿ. ಪುರಾಣಿಕ್‌ ಹೇಳಿದರು.

ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಕಾರ್ಯದರ್ಶಿ ನ್ಯಾಯವಾದಿ ಕರುಣಾಕರನ್‌ ನಂಬ್ಯಾರ್‌ ಅಧ್ಯಕ್ಷತೆ ವಹಿಸಿದರು. ವರದರಾಜ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ವಿದ್ಯಾಕರ ಮಲ್ಯ, ಕಾಸರಗೋಡು ವೈದ್ಯಾಧಿಕಾರಿ ಡಾ| ಜನಾದ‌ìನ ನಾಯ್ಕ, ಕರಂದಕ್ಕಾಡು ಶ್ರೀ ವೀರಹನುಮಾನ್‌ ಮಂದಿರ ಮತ್ತು ವ್ಯಾಯಾಮ ಶಾಲೆಯ ಕಾರ್ಯದರ್ಶಿ ಗಣೇಶ್‌ ಕೆ, ನೆಲ್ಲಿಕುಂಜೆ ಓಂ ಭಗವತಿ ಪ್ರಭಾ ಭಜನ ಮಂದಿರದ ಅಧ್ಯಕ್ಷ ಭಾಸ್ಕರ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ದಿನೇಶ್‌ ಎಂ.ಟಿ., ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಿ.ವಿ. ಪೊದುವಾಳ್‌ ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಜತೆ ಕಾರ್ಯದರ್ಶಿ ನಾರಾಯಣ ಕೆ. ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಜಯರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಜತೆ ಕಾರ್ಯದರ್ಶಿ ವರಪ್ರಸಾದ್‌ ಕೋಟೆಕಣಿ ವಂದಿಸಿದರು. 

ಜ್ಞಾನ ಕೊಟ್ಟ ಗುರು ಗ್ರಾಮದ ದೇವಸ್ಥಾನ ಹೆತ್ತ ತಾಯಿ. ಜ್ಞಾನಕೊಟ್ಟ ಗುರು. ಇವರ ಋಣವನ್ನು ತೀರಿಸಲು ಸಾಧ್ಯವುಂಟೇ? ತಲೆಮಾರಿಗೆ ಅಪೂರ್ವವಾಗಿ ಲಭಿಸುವ ಸೌಭಾಗ್ಯವಿದು. ನಾವೆಲ್ಲ ನಿಮಿತ್ತ ಮಾತ್ರ. ಒಂದು ಕ್ಷೇತ್ರ ಜೀರ್ಣೋದ್ಧಾರವಾಯಿತೆಂದರೆ ಭಗವದ್ಭಕ್ತರಿಗೆ ಅನುಗ್ರಹ ಪ್ರಾಪ್ತಿಯಾಗಿದೆ ಎಂದರ್ಥ. ಇಲ್ಲಿ ನಾನು ಎಂಬುದು ಶೂನ್ಯ. ವಿನಾಯಾಸ ಜೀವನ, ಅನಾಯಾಸ ಮರಣ ಪ್ರಾಪ್ತಿಗಾಗಿ ನಾವು ಪ್ರಾರ್ಥಿಸಬೇಕು. ನಾವು ಮಾಡುವ ಕ್ರಿಯೆ ಮುಖ್ಯವಲ್ಲ. ಬದಲು ಭಾವನೆ ಮುಖ್ಯ. ಸದ್ಭಾವನೆಯಿಂದಗೈದ ಕರ್ಮಗಳೆಲ್ಲವೂ ಭಗವದರ್ಪಿತ .

-ವಸಂತ ಪೈ ಬದಿಯಡ್ಕ ಉದ್ಯಮಿ 
 

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.