ಜಲ ಕ್ಷಾಮದಿಂದ ಪಾರಾಗುವ ಅನಿವಾರ್ಯವಿದೆ: ಎ.ಕೆ. ಸಿಂಗ್‌

ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಪ್ರತಿನಿಧಿಯಿಂದ ಸಂವಾದ

Team Udayavani, Jul 8, 2019, 5:47 AM IST

7-KBL-2

ಭತ್ತದ ಕೃಷಿ ನೀರಿಂಗಿಸುವ ಪ್ರಕ್ರಿಯೆಗೆ ಪೂರಕವಾಗಿದ್ದು, ಈ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಬೇಕು. ಭೂಮಿಯನ್ನು ಬರಡು ಮಾಡುವ ಅಕೇಶಿಯಾ ಮರಗಳನ್ನು ತೆರವುಗೊಳಿಸುವಂತೆ ಜನಪ್ರತಿನಿಧಿಗಳು ಆಗ್ರಹಿಸಿದರು. ವನ ಪ್ರದೇಶಗಳ ಕೆರೆಗಳು, ತೊರೆಗಳು ಸಹಿತ ಜಲಾಶಯಗಳನ್ನು ಸಂರಕ್ಷಿಸುವಲ್ಲಿ ಕೆಲವು ಕಾನೂನು ತೊಡಕುಗಳಿದ್ದು, ಅವುಗಳನ್ನು ಪರಿಹರಿಸಬೇಕೆಂಬ ಬೇಡಿಕೆ ಇರಿಸಲಾಯಿತು.

ಕುಂಬಳೆ: ಸಮಗ್ರ ಜಲನೀತಿ ರಚಿಸುವ ನಿಟ್ಟಿನಲ್ಲಿ ಮತ್ತು ಜನಶಕ್ತಿ ಅಭಿಯಾನ ಪ್ರಕಾರ ಸ್ಥಿತಿಗತಿ ಅವಲೋಕನ ನಡೆಸುವ ನಿಟ್ಟಿನಲ್ಲಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಪ್ರತಿನಿಧಿ ಅಶೋಕ್‌ ಕುಮಾರ್‌ ಸಿಂಗ್‌ ಅವರು ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು ಮತ್ತು ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬ್ಲಾಕ್‌, ಗ್ರಾಮ ಪಂಚಾಯತ್‌, ನಗರಸಭೆಗಳ ಅಧ್ಯಕ್ಷರು, ಪ್ರತಿನಿಧಿಗಳು ಭಾಗವಹಿಸಿದರು.

ದೇಶದಲ್ಲಿ ತೀವ್ರತರ ಕುಡಿಯುವ ನೀರಿನ ಬರ ಅನುಭವಿಸುತ್ತಿರುವ 255 ಜಿಲ್ಲೆಗಳಲ್ಲಿ ಕಾಸರಗೋಡು ಜಿಲ್ಲೆಯೂ ಸೇರಿದ್ದು, ಸೂಕ್ತ ಜಲಸಂರಕ್ಷಣೆ ಚಟುವಟಿಕೆಗಳ ಮೂಲಕ ಈ ಪಿಡುಗಿನಿಂದ ಪಾರಾಗಬೇಕಾದ ಅನಿವಾರ್ಯವಿದೆ. ಚಟು ವಟಿಕೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ವೇಳೆ ಸಾಧ್ಯತೆಗಳನ್ನು ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಅಶೋಕ್‌ ಕುಮಾರ್‌ ಸಿಂಗ್‌ ಅಭಿಪ್ರಾಯಪಟ್ಟರು.

ಜಲ ಬಳಕೆ ವಿಧಾನದಲ್ಲಿ ದಕ್ಷತೆಯ ಸಹ ಭಾಗಿತ್ವ ವಹಿಸಿ ಜಲನೀತಿ ರಚಿಸುವುದು ಅನಿ ವಾರ್ಯ ಎಂದು ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಅಶೋಕ್‌ ಕುಮಾರ್‌ ಅವರಲ್ಲಿ ಆಗ್ರಹಿಸಿದರು. ಜಿಲ್ಲೆಯ ನದಿಗಳನ್ನು ವೈಜ್ಞಾನಿಕ ರೀತಿಯ ಪಾರ್ಶ್ವಭಿತ್ತಿ ನಿರ್ಮಿಸುವ ಮೂಲಕ ಸಂರಕ್ಷಿಸುವ, ಜಿಲ್ಲೆಯ ಕೆಲವು ವಲಯಗಳ ಭೌಗೋಳಿಕ ಹಿನ್ನೆಲೆಯಲ್ಲಿ ನದಿನೀರು ಹರಿದು ಪೋಲಾಗುತ್ತಿದ್ದು, ಇದನ್ನು ತಡೆಯಲು ಪೂರಕ ಸೌಲಭ್ಯ ಏರ್ಪಡಿಸು ವಂತೆ ಜನಪ್ರತಿನಿಧಿಗಳು ಬೇಡಿಕೆ ಇರಿಸಿದರು.

ಸಮುದ್ರ ನೀರು ಶುದ್ಧಗೊಳಿಸಿ
ಮಂಜೇಶ್ವರ ಬ್ಲಾÉಕ್‌ನಲ್ಲಿ ಸಿಬಂದಿ ಕೊರತೆಯ ಪರಿಣಾಮ ಅನೇಕ ಕಾಮಗಾರಿಗಳು ಪೂರ್ತಿ ಗೊಂಡಿಲ್ಲ. ಇಲ್ಲಿನ ಕುಡಿಯುವ ನೀರಿನ ಬರ ಪರಿಹರಿಸಲು ಮತ್ತು ಸಮುದ್ರದ ನೀರು ಶುದ್ಧಗೊಳಿಸಿ ಮನೆ ಬಳಕೆಗೆ ಮತ್ತು ಕೃಷಿಗೆ ಬಳಸುವ ವ್ಯವಸ್ಥೆ ನಡೆಸುವಂತೆ, ಇದಕ್ಕೆ ಕೇಂದ್ರ ಸರಕಾರ ನೇತƒತ್ವ ವಹಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ನೀರಿನ ದುರುಪಯೋಗ ಆರೋಪ
ನೀರಿನ‌ ದುರುಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪಿಂಕ್ಲರ್‌ ಬಳಕೆ ಕೈಬಿಟ್ಟು ಡ್ರಿಪ್‌ ಇರಿಗೇಶನ್‌ ಯೋಜನೆಗೆ ಪ್ರೋತ್ಸಾಹ ನೀಡಬೇಕು. ಚರಂಡಿ ನಿರ್ಮಾಣ ವೇಳೆ ಪೂರ್ಣ ರೀತಿಯಲ್ಲಿ ಕಾಂಕ್ರೀಟೀಕರಣ ನಡೆಸುವ ಕಾರಣ ಭೂಮಿಗೆ ಮಳೆ ನೀರು ಇಂಗಿಹೋಗುವುದಕ್ಕೆ ತಡೆಯಾಗುತ್ತಿದೆ. ಚರಂಡಿಯ ಅಡಿಭಾಗದಲ್ಲಿ ಕಾಂಕ್ರೀಟ್‌ ಹಾಕದೆ ನೀರು ಭೂಮಿಗಿಳಿಯುವಂತೆ ಮಾಡಬೇಕು ಎಂಬ ಸಲಹೆ ಸಭೆಯ ಮುಂದೆ ಇರಿಸಲಾಯಿತು.

ಜಲಶಕ್ತಿ ಅಭಿಯಾನದ ಜಿಲ್ಲಾ ನೋಡಲ್‌ ಅಧಿಕಾರಿ, ಜಿಲ್ಲಾ ಮಣ್ಣು ಸಂರಕ್ಷಣೆ ಅಧಿಕಾರಿ ವಿ.ಎಂ. ಅಶೋಕ್‌ ಕುಮಾರ್‌, ಪ್ರಭಾರ ಹೆಚ್ಚುವರಿ ದಂಡಾಧಿಕಾರಿ ಪಿ.ಆರ್‌. ರಾಧಿಕಾ, ಹುಸೂರ್‌ ಶಿರಸೇ¤ದಾರ್‌ ಕೆ. ನಾರಾಯಣನ್‌, ಸಹಾಯಕ ಅಭಿವೃದ್ಧಿ ಕಮಿಷನರ್‌ (ಜನರಲ್‌) ಬೆವಿನ್‌ ಜೋನ್‌ ವರ್ಗೀಸ್‌, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ ವಿಶೇಷ ಅಧಿಕಾರಿ ಇ.ಪಿ. ರಾಜ್‌ ಮೋಹನ್‌ ಉಪಸ್ಥಿತರಿದ್ದರು.
ಸಭೆಯ ಬಳಿಕ ಅಶೋಕ್‌ ಕುಮಾರ್‌ ಸಿಂಗ್‌ ಅವರ ನೇತƒತ್ವದಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯ ಚೆಮ್ನಾಡ್‌, ಬದಿಯಡ್ಕ, ಪೈವಳಿಕೆ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಈ ಪ್ರದೇಶಗಳ ಜಲಲಭ್ಯತೆ, ಸಮಸ್ಯೆಗಳು, ಜಲಸಂರಕ್ಷಣೆಯ ಚಟುವಟಿಕೆಗಳು ಇತ್ಯಾದಿಗಳ ಅಧ್ಯಯನ ನಡೆಸಿತು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.