ದೂರದೂರಿನಲ್ಲಿ ಪರೀಕ್ಷಾ ಕೇಂದ್ರ ಬೇಡ: ಮಾನವ ಹಕ್ಕು ಆಯೋಗ


Team Udayavani, Jul 18, 2019, 5:20 AM IST

manava-hakku-ayoga

ಕಾಸರಗೋಡು: ಪ್ರೊಬೇಷನ್‌ ಅಧಿಕಾರಿ ಶ್ರೇಣಿ ಎರಡು ಹುದ್ದೆಗೆ ಲೋಕ ಸೇವಾ ಆಯೋಗ ನಡೆಸುತ್ತಿರುವ ಪರೀಕ್ಷೆಗೆ ಜಿಲ್ಲೆಯ ಪರೀûಾರ್ಥಿಗಳಿಗೆ ತೃಶ್ಶೂರು, ಪಾಲಕ್ಕಾಡ್‌ಗಳಲ್ಲಿ ಪರೀಕ್ಷೆ ಕೇಂದ್ರ ನಿಗದಿ ಪಡಿಸಿರುವ ವಿಚಾರದಲ್ಲಿ ರಾಜ್ಯ ಮಾನವ ಹಕ್ಕು ಆಯೋಗ ಸ್ಪಷ್ಟೀಕರಣ ಬಯಸಿದೆ.

ಜಿಲ್ಲೆಯಲ್ಲಿಯಾ ಸಮೀಪದ ಜಿಲ್ಲೆಗಳಲ್ಲಿ ಪರೀûಾ ಕೇಂದ್ರಗಳನ್ನು ನಿಗದಿಪಡಿಸುವುದು ಬಿಟ್ಟು, ಬಹಳ ದೂರದಲ್ಲಿ ಕೇಂದ್ರ ಒದಗಿಸಿರುವುದು ಉದ್ಯೋಗಾ ರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಾನವಹಕ್ಕು ಆಯೋಗ ಸದಸ್ಯ ಕೆ. ಮೋಹನ ಕುಮಾರ್‌ ಪಿ.ಎಸ್‌.ಸಿ. ಕಾರ್ಯದರ್ಶಿ ಅವರಲ್ಲಿ ಈ ಸಂಬಂಧ ಸ್ಪಷ್ಟೀಕರಣ ಆಗ್ರಹಿಸಿದ್ದಾರೆ.

ಕಾಸರಗೋಡು ಸರಕಾರಿ ಅತಿಥಿ ಗೃಹದಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ಕೆ. ಮೋಹನ್‌ ಕುಮಾರ್‌ ಈ ವಿಚಾರ ಪ್ರಕಟಿಸಿದರು. ಈ ರೀತಿ ಪರೀûಾ ಕೇಂದ್ರಗಳನ್ನು ದೂರದೂರುಗಳಲ್ಲಿ ನಿಗದಿ ಪಡಿಸಲಾಗುತ್ತಿರುವ ಪರಿಣಾಮ ಜಿಲ್ಲೆಯಿಂದ ಸರಕಾರಿ ಪರೀಕ್ಷೆಗಳಿಗೆ ಹಾಜರಾಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದು ಉದ್ಯೋಗಾರ್ಥಿಗಳ ಉತ್ಸಾಹ ಕಡಿಮೆಗೊಳಿಸಿ ದಂತಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪುಲ್ಲೂರು-ಪೆರಿಯ ಗ್ರಾ. ಪಂ. ಮಂಜೂರು ಮಾಡಿರುವ ಬಸ್‌ ಮಹಾಲಕ್ಷ್ಮೀಪುರಕ್ಕೆ ಸೂಕ್ತ ಹಾದಿ ಯಿದ್ದೂ. ಅಲ್ಲಿಯ ವರೆಗೆ ಬಾರದೆ ಎರಡು ಕಿ.ಮೀ. ದೂರದ ಚಟ್ಟಂಚಾಲ್‌ವರೆಗೆ ಮಾತ್ರ ಬಂದು ತೆರಳುವುದು ಸಮಸ್ಯೆಯಾಗಿದೆ. ಜತೆಗೆ ಆರ್ಥಿಕವಾಗಿ ಬಡವಳಾದ ತಾವು ಆಟೋ ಸಹಿತ ವಾಹನದಲ್ಲಿ ಪ್ರತಿದಿನ ಚಟ್ಟಂಚಾಲ್‌ವರೆಗೆ ತೆರಳುವುದು ಕಷ್ಟಸಾಧ್ಯ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆ ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಪುತ್ರನಿಗೆ ಮಾನಸಿಕ ತೊಳಲಾಟಕ್ಕೆ ಕಾರಣವಾಗಿದೆ ಎಂದು ದೂರುದಾತೆ ತಿಳಿಸಿದ್ದಾರೆ. ಅಹವಾಲು ಸ್ವೀಕಾರ ಸಭೆಯಲ್ಲಿ ಒಟ್ಟು 39 ದೂರುಗಳ ಪರಿಶೀಲನೆ ನಡೆಸಲಾಗಿದ್ದು, 11 ಅಹವಾಲುಗಳಿಗೆ ತೀರ್ಪು ನೀಡಲಾಗಿದೆ. ಮುಂದಿನ ಸಭೆ ಆ. 8ರಂದು ನಡೆಯಲಿದೆ ಎಂದು ಅ ಧಿಕಾರಿಗಳು ತಿಳಿಸಿದರು.

ಕಾನೂನಿನ ತಾಂತ್ರಿಕತೆ ತಳಹದಿಯಾದರೆ ಸಾಲದು
ಕಾನೂನಿನ ತಾಂತ್ರಿಕತೆಯನ್ನು ಮಾತ್ರ ತಳಹದಿ ಯಾಗಿರಿಸಿ ಅರ್ಹರಿಗೆ ಮುಂಗಡಪಟ್ಟಿಯ ಪಡಿತರ ಚೀಟಿ ನಿಷೇ ಧಿಸುವುದು ಸರಿಯಲ್ಲ ಎಂದು ರಾಜ್ಯ ಮಾನವಹಕ್ಕು ಆಯೋಗದ ಸದಸ್ಯ ಎಂ.ಮೋಹನ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ವಿಶೇಷಚೇತನರಾದ ಇಬ್ಬರು ಹೆಣ್ಣು ಮಕ್ಕಳು, ರೋಗಿಯಾಗಿರುವ ಪತಿ ಯನ್ನು ಹೊಂದಿರುವ ಕಾಂಞಂಗಾಡ್‌ ನಿವಾಸಿ ಮಹಿಳೆ ಯೊಬ್ಬರು ಈ ಸಂಬಂಧ ನೀಡಿರುವ ದೂರಿನ ಪರಿಶೀಲನೆ ಅವರು ನಡೆಸಿದರು. ಮನೆಯ ವಿಸ್ತೀರ್ಣ ಒಂದು ಸಾವಿರ ಚದರ ಅಡಿಗಿಂತ ಅ ಧಿಕ ಇರುವ ಕಾರಣ ಬಿ.ಪಿ.ಎಲ್‌. ಪಡಿತರ ಚೀಟಿ ನಿಷೇ ಧಿಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು.

ಸಾಮಾಜಿಕ ನ್ಯಾಯ ಜಿಲ್ಲಾಧಿಕಾರಿ ನೀಡಿರುವ ವರದಿ ಪ್ರಕಾರ ಈ ಮಹಿಳೆಯ ಮನೆಮಂದಿ ಬಿ.ಪಿ.ಎಲ್‌. ಪಟ್ಟಿಗೆ ಅರ್ಹರಾಗಿರುವುದು ಖಚಿತಗೊಂಡಿದೆ. ಸಾಮಾಜಿಕ ಹಿನ್ನೆಲೆಯನ್ನೂ ಗಮನಿಸಿ ಸಂಬಂಧಪಟ್ಟ ಸಿಬಂದಿ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಮೋಹನ್‌ ಕುಮಾರ್‌ ತಿಳಿಸಿದರು.

ಬಸ್‌ ಬರುವುದಿಲ್ಲ
ಬಡ್ಸ್‌ ಶಾಲೆಯಲ್ಲಿ ಕಲಿಯುತ್ತಿರುವ ವಿಶೇಷ ಚೇತನ ಪುತ್ರ ಪಂಚಾಯತ್‌ ಮಂಜೂರು ಮಾಡಿರುವ ಬಸ್‌ ಮನೆ ವರೆಗೆ ಆಗಮಿಸದೇ ಇರುವ ಪರಿಣಾಮ ಶಾಲೆಗೆ ತೆರಳದಂಥ ದುಃಸ್ಥಿತಿ ನಿರ್ಮಾಣವಾಗಿದೆ ಎಂದು ತಾಯಿಯೊಬ್ಬರು ದೂರು ನೀಡಿದ್ದು, ಈ ಸಂಬಂಧ ವರದಿ ಸಲ್ಲಿಸುವಂತೆ ಆಯೋಗವು ಜಿಲ್ಲಾಧಿಕಾರಿ ಮತ್ತು ಗ್ರಾಮ ಪಂಚಾಯತ್‌ಗೆ ಆದೇಶ ನೀಡಿದೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.