ಜನ ಗುಂಪು ಸೇರುವ ಸಮಾರಂಭಗಳಲ್ಲಿ ತಾವು ಭಾಗಿಯಾಗಲಾರೆವು: ಪ್ರತಿಜ್ಞೆ ಸ್ವೀಕಾರ
Team Udayavani, Oct 11, 2020, 1:26 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಜ್ಞೆ ಸ್ವೀಕಾರ ನಡೆಯಿತು.
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಅತ್ಯಧಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಅವಧಿಯಲ್ಲಿ ಜನ ಗುಂಪು ಸೇರುವ ಯಾವುದೇ ಸಾರ್ವಜನಿಕ-ಖಾಸಗಿ ಸಮಾರಂಭಗಳಲ್ಲಿ ತಾವು ಮತ್ತು ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂದು ಸರಕಾರಿ ಸಿಬಂದಿ ಮತ್ತು ಶಿಕ್ಷಕರು ಪ್ರತಿಜ್ಞೆ ಕೈಗೊಂಡಿದ್ದಾರೆ.
ಪೊಲೀಸರು, ಆರೋಗ್ಯ ಕಾರ್ಯಕರ್ತರು, ಸರಕಾರಿ ಸಿಬಂದಿ ಮೊದಲಾದವರಲ್ಲಿ ಕೋವಿಡ್ ಸೋಂಕು ಅಧಿಕ ಪ್ರಮಾಣದಲ್ಲಿ ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕೊರೊನಾ ಕೋರ್ ಸಮಿತಿ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಅವರ ಆದೇಶ ಪ್ರಕಾರ ಈ ಕಾರ್ಯಕ್ರಮ ನಡೆಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್ ಪ್ರತಿಜ್ಞೆ ಪಠಿಸಿದರು. ಅರಣ್ಯ ವಿಭಾಗೀಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಅರಣ್ಯ ಅಧಿಕಾರಿ ಅನೂಪ್ ಕುಮಾರ್, ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ ಆರ್.ಸಿ.ಎಚ್. ಅಧಿಕಾರಿ ಡಾ| ಮುರಳೀಧರ ನಲ್ಲೂರಾಯ, ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಪ್ರತಿಜ್ಞೆ ಪಠಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ