ಸಾವಿರ ದಿನ: ಕನ್ನಡ ಕಿರು ಹೊತ್ತಗೆ ಬಿಡುಗಡೆ
Team Udayavani, Mar 8, 2019, 1:00 AM IST
ಕಾಸರಗೋಡು: ರಾಜ್ಯ ಸರಕಾರ ಪೂರೈಸಿದ ಒಂದು ಸಾವಿರ ದಿನದ ಅಭಿವೃದ್ಧಿ ಚಟುವಟಿಕೆಗಳು, ಸಾಧನೆಗಳು ಇತ್ಯಾದಿಗಳ ಕನ್ನಡ ಕಿರುಹೊತ್ತಗೆ ಪ್ರಕಟಗೊಂಡಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಕಿರುಹೊತ್ತಗೆ ಬಿಡುಗಡೆಗೊಳಿಸಿದರು. ಅನಂತರ ಹೆಚ್ಚುವರಿ ದಂಡನಾಧಿಕಾರಿ ಎನ್. ದೇವಿದಾಸ್ ಅವರಿಗೆ ಹಸ್ತಾಂತರಿಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ಸಹಾಯಕ ಜಿಲ್ಲಾಧಿಕಾರಿ (ಜನರಲ್) ಸಿ.ಬಿಜು, ಮಹಿಳಾ ಶಿಶು ಕಲ್ಯಾಣ ಅಧಿಕಾರಿ ಡೀನಾ ಭರತನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜೋನ್ ಜೋಸ್, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಬಿ. ಭಾಸ್ಕರನ್, ಹಿರಿಯ ವರಿಷ್ಠಾಧಿಕಾರಿ ಕೆ. ವಿನೋದ್ ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು, ಕೃಷಿ, ಸಾಮಾಜಿಕ ನ್ಯಾಯ, ಕಂದಾಯ ಇಲಾಖೆಗಳ ಸಿಬಂದಿ ಉಪಸ್ಥಿತರಿದ್ದರು. ಕಾಸರಗೋಡು ಜಿಲ್ಲೆಯಲ್ಲಿ ಒಂದು ಸಾವಿರ ದಿನದಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳು, ಸಾಧನೆಗಳು ಮತ್ತು ಪಿಣರಾಯಿ ವಿಜಯನ್ ಅವರ ನೇತೃತ್ವದ ರಾಜ್ಯ ಸರಕಾರ ನಡೆಸಿದ ಸಾಧನೆಗಳ ಕುರಿತು ಈ ಕಿರುಹೊತ್ತಗೆಯಲ್ಲಿ ಮಾಹಿತಿಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ