![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Tragic: ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಸ್ನೇಹಿತರು ನೀರುಪಾಲು
Team Udayavani, Mar 7, 2024, 8:41 PM IST
![Tragic: ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಸ್ನೇಹಿತರು ನೀರುಪಾಲು](https://www.udayavani.com/wp-content/uploads/2024/03/13-3-620x372.jpg)
ಕುಶಾಲನಗರ: ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ.
ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು (23), ಕಣಿವೆಯ ಹಕ್ಕೆ ಸಚಿನ್ (22) ಹಾಗೂ ಮುಳ್ಳುಸೋಗೆ ಜನತಾಕಾಲನಿ ವಿನೋದ್(23) ಮೃತ ದುರ್ದೈವಿಗಳಾಗಿದ್ದಾರೆ.
ಐವರು ಸ್ನೇಹಿತರು ಕಾವೇರಿ ನದಿ ಬಳಿ ಕಾರು ನಿಲ್ಲಿಸಿ ಸ್ನಾನಕ್ಕೆ ತೆರಳಿದ ಸಂದರ್ಭ ಓರ್ವ ಆಳವಾದ ಪ್ರದೇಶದಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ ಮತ್ತೋರ್ವ ಮುಳುಗುವುದನ್ನು ಕಂಡು ಅವನನ್ನು ರಕ್ಷಿಸಲು ಇನ್ನೊಬ್ಬ ಸ್ನೇಹಿತ ಮುಂದಾದ ಸಂದರ್ಭ ಮೂವರೂ ಕೂಡ ಮುಳುಗಿ ಮೃತಪಟ್ಟಿದ್ದಾರೆ.
ವಿಷಯ ಅರಿತು ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಶ್ರೀನಿವಾಸ್ ದೇಹ ಪತ್ತೆಯಾಗಿದ್ದು ಕುಶಾಲನಗರ ಆಸ್ಪತ್ರೆಗೆ ಸಾಗಿಸಿದ ಸಂದರ್ಭ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ. ಇನ್ನುಳಿದ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಘಟನೆ ಮಧ್ಯಾಹ್ನದ ವೇಳೆ ನಡೆದಿದ್ದು, ಕಡು ಕತ್ತಲಿನಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಟಾರ್ಚ್ ಬಳಸಿಕೊಂಡು ಶೋಧ ಕಾರ್ಯ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಂಗಾಧರಪ್ಪ, ತಹಶೀಲ್ದಾರ್ ಕಿರಣ್ ಗೌರಯ್ಯ, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿ ಕೆ.ಜಿ ರಾಜೇಶ್, ಸಹಾಯಕ ಅಧಿಕಾರಿ ಚಿಕ್ಕೇಗೌಡ, ನಾಯಕ ಲತೀಶ್, ಸಿಬ್ಬಂದಿಗಳಾದ ಶಿವಾನಂದ, ಸಂಗಮೇಶ್, ಶಶಿ, ಉದಯ ಅವರುಗಳು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.