ಇಂದು ನಾಡೋಜ ಡಾ| ಕಯ್ಯಾರರ 104ನೇ ಜನ್ಮದಿನ, ಪ್ರಶಸ್ತಿ ಪ್ರದಾನ
Team Udayavani, Jun 8, 2019, 6:00 AM IST
ಉಪ್ಪಳ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಮತ್ತು ಜನಾರ್ದನ ಕಲಾವೃಂದ ಜೋಡುಕಲ್ಲು ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡದ ಹಿರಿಯ ಚೇತನ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈಗಳ 104ನೇ ಜನ್ಮದಿನಾಚರಣೆ ಮತ್ತು ಗಡಿನಾಡ ಕೇಸರಿ ಪ್ರಶಸ್ತಿ ಪ್ರದಾನ ಜೂನ್ 8ರಂದು ಜೋಡುಕಲ್ಲು ಜೆ.ಕೆ.ವಿ. ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ಜರಗಲಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾ ಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಕಾರ್ಯಕ್ರಮ ಉದ್ಘಾಟಿಸುವರು.
ಕೇರಳ ಗ್ರಾಮೀಣ ಬ್ಯಾಂಕ್ನ ನಿವೃತ್ತ ಪ್ರಾದೇಶಿಕ ಪ್ರಬಂಧಕ ಎಸ್. ಜಗನ್ನಾಥ ಶೆಟ್ಟಿ ಕುಂಬಳೆ ಅವರು ಸಂಸ್ಮರಣ ಭಾಷಣ ಮಾಡುವರು.
ಟಿ.ಎಚ್.ಎಂ. ಬಸವರಾಜರಿಗೆ
ಗಡಿನಾಡ ಕೇಸರಿ ಪ್ರಶಸ್ತಿ
ಬೆಂಗಳೂರು ಕರ್ನಾಟಕ ಇತಿಹಾಸ ಅಕಾಡೆಮಿಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಎಚ್.ಎಂ. ಬಸವರಾಜ ಬಳ್ಳಾರಿಯವರಿಗೆ ಗಡಿನಾಡ ಕೇಸರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ರವಿ ನಾಯ್ಕಪು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸುವರು.
ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ. ಅಶ್ರಫ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಪ್ರಸಾದ ರೈ ಕಯ್ಯಾರ, ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಶೆಟ್ಟಿ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ನ ಶ್ರೀಧರ ಹೊಳ್ಳ ಕಯ್ಯಾರ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ಪ್ರೊ| ಎ. ಶ್ರೀನಾಥ್, ಮೀಡಿಯ ಕ್ಲಾಸಿಕಲ್ ಅಧ್ಯಕ್ಷ ಶ್ರೀಕಾಂತ್ ನೆಟ್ಟಣಿಗೆ, ಜೆಕೆವಿ ಜೋಡುಕಲ್ಲು ಅಧ್ಯಕ್ಷ ಲಕ್ಷ್ಮಣ ಮಡಂದೂರು ಮೊದಲಾದವರು ಮುಖ್ಯ ಅಥಿತಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ