ಭಜನೆ ಸಂಸ್ಕೃತಿ ಉಳಿವಿಗೆ ಟ್ರಸ್ಟ್‌ ಮಾದರಿ ಚಟುವಟಿಕೆ: ಆಸ್ರಣ್ಣ

ಕಾಟುಕುಕ್ಕೆ ಭಜನ ಚಾರಿಟೆಬಲ್ ಟ್ರಸ್ಟ್‌ ಪುತ್ತೂರು

Team Udayavani, Jul 19, 2019, 5:42 AM IST

18KSDE6

ಪೆರ್ಲ: ಹರಿದಾಸ ಸಾಹಿತ್ಯದ ಸಾರ-ಸಂದೇಶಗಳನ್ನು ಭಜನೆಯ ಮೂಲಕ ಮನೆಮನೆಯಲ್ಲಿ ಮತ್ತೆ ಅನುರಣಿಸುವಂತೆ ಮಾಡುವ ಮೂಲೋದ್ದೇಶದೊಂದಿಗೆ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್‌ ಪುತ್ತೂರು ಅಸ್ತಿತ್ವಕ್ಕೆ ಬಂದಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆದ ಸಮಾರಂಭ ದಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಕಮಲಾ ದೇವಿ ಪ್ರಸಾದ ಆಸ್ರಣ್ಣ ದೀಪಬೆಳಗಿಸಿ ಟ್ರಸ್ಟ್‌ ಉದ್ಘಾ ಟಿಸಿ ಭಜನೆಯ ಮೂಲಕ ಮಹಿಳಾ ಸಂಘ ಟನೆ ಹಾಗೂ ಮೌಲ್ಯಗಳ ಬಿತ್ತನೆಯಿಂದ ಸತ್ಸಮಾಜ, ಸಂಸ್ಕೃತಿ ರೂಪಿಸುವ ನಿಟ್ಟಿನಲ್ಲಿ ಟ್ರಸ್ಟ್‌ ರಚನೆಯಾಗಿರುವುದು ಶ್ಲಾಘನೀಯ. ರಾಮಕೃಷ್ಣ ಅವರು ತನ್ನ ಶಿಷ್ಯ ಬಳಗದ ನೂರು ಭಜನ ಮಂಡಳಿಗಳನ್ನು ಒಟ್ಟು ಮಾಡಿ ಟ್ರಸ್ಟ್‌ ರೂಪಿಸಿರುವುದು ಭಜನ ಕ್ರಾಂತಿಯ ಮಾದರಿ ಚಟುವಟಕೆ. ಇಂಥ ಸಮಾರಂಭದಲ್ಲಿ ಪಾಲ್ಗೊಳ್ಳುವುದೇ ಧನ್ಯತೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಂಸದ ನಳಿನ್‌ ಕುಮಾರ್‌ ಕಟೀಲ್ ಮಾತನಾಡಿ ಭಜನೆ ಎಂಬುದು ಒಂದು ಸಂಸ್ಕಾರ. ಅದು ಮನ, ಮನೆಯಲ್ಲಿ ಹಿಂದೆ ಇದ್ದು, ಈಗ ಇಲ್ಲವಾಗುತ್ತದೆ. ಪರಿಣಾಮ ನೈತಿಕ ಅಧಃಪತನದಿಂದ ಅನಾಗರಿಕ ಸಮಾಜ ನಿರ್ಮಾಣವಾಗುತ್ತಿದೆ. ಮನುಷ್ಯ ಬದುಕಿನ ಪರಿವರ್ತನೆಗೆ ಭಜನೆಯಿಂದ ಸಾಧ್ಯವಿದೆ. ಇದನ್ನರಿತು ರಾಮಕೃಷ್ಣ ಕಾಟುಕುಕ್ಕೆ ಅವರು ಭಜನೆಗಾಗಿ ಪ್ರಪ್ರಥಮ ಟ್ರಸ್ಟ್‌ ರೂಪಿಸಿರುವುದು ಕ್ರಾಂತಿಕಾರಕ ಕೆಲಸ. ಅವರು ಅಭಿನಂದನೀಯರು. ಕೇವಲ ಭಜನೆಯನ್ನು ಹಾಡುವುದಷ್ಟೇ ಅಲ್ಲದೇ, ದಾಸ ಸಾಹಿತ್ಯದ ಅರ್ಥ, ಸಂದೇಶಗಳನ್ನರಿತರೆ ಆತ್ಮವಿಕಾಸದ ಜತೆ ಜೀವನದ ಉನ್ನತಿಯೂ ಸಾಧ್ಯ. ವರ್ತಮಾನದ ಸಾಮಾಜಿಕ ಬದುಕಿನಲ್ಲಿ ಮೌಲ್ಯಗಳನ್ನು ಬಿತ್ತುವ ಇಂತಹ ಆಧ್ಯಾತ್ಮಿಕ ಚಟುವಟಿಕೆಗಳು ಅತ್ಯಗತ್ಯದ ಕಾಯಕ ಎಂದವರು ನುಡಿದರು.

ಹನುಮಗಿರಿ ಶ್ರೀ ರಾಮಾಂಜನೇಯ ದೇವಳದ ಅಧ್ಯಕ್ಷ ನನ್ಯ ಅಚ್ಯುತ ಮೂಡಿ ತ್ತಾಯ ಅಧ್ಯಕ್ಷತೆ ವಹಿಸಿದರು. ಕಾಟುಕುಕ್ಕೆ ಭಜನ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ರಾಮ ಕೃಷ್ಣ ಕಾಟುಕುಕ್ಕೆ ಪ್ರಾಸ್ತಾವಿಕ ಮಾತನಾಡಿ ದರು. ದ.ಕ.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ನಾರಂಪಾಡಿ ಉಮಾಮಹೇಶ್ವರ ದೇವಳದ ಉಪಾಧ್ಯಕ್ಷ ಮಧುಕರ ರೈ ಕೊರೆಕ್ಕಾನ, ಮುಂಬೈ ಉದ್ಯಮಿ ಕುಕ್ಕಂದೂರು ಚಂದ್ರಶೇಖರ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡರು. ಶ್ರೀ ಕ್ಷೇತ್ರ ಧರ್ಮಸ್ಥಳ ಭಜನ ಪರಿಷತ್‌ ಕಾರ್ಯದರ್ಶಿ, ಟ್ರಸ್ಟ್‌ ಉಪಾಧ್ಯಕ್ಷ ಜಯರಾಮ ನೆಲ್ಲಿತ್ತಾಯ ಸ್ವಾಗತಿಸಿ, ಪತ್ರಕರ್ತ ಎಂ.ನಾ. ಚಂಬಲ್ತಿಮಾರ್‌ ಕಾರ್ಯಕ್ರಮ ನಿರೂಪಿಸಿದರು. ಉಷಾ ಶಿವರಾಂ ಭಟ್ ಕಾರಿಂಜ ವಂದಿಸಿದರು.

ಟ್ರಸ್ಟ್‌ ಉದ್ಘಾಟನೆ ಅಂಗವಾಗಿ ಬೆಳಗ್ಗೆ ಗಾಯಕ ಕಿಶೋರ್‌ ಪೆರ್ಲ ಅವರಿಂದ ದೇವರ ನಾಮಾವಳಿಗಳ ಸಂಕೀರ್ತನೆ ನಡೆಯಿತು.

ದೇಶದಲ್ಲೇ ಮೊದಲ ಭಜನ ಚಾರಿಟೆಬಲ್ ಟ್ರಸ್ಟ್‌
ಸಮಾರಂಭಕ್ಕೆ ಬೆಳಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಶುಭನುಡಿ ಗಳನ್ನಾಡಿ ಚಾಲನೆ ಇತ್ತರು. ಬಳಿಕ ಒಂದೂ ವರೆ ಸಾವಿರಕ್ಕೂ ಮಿಕ್ಕಿದ ಭಜನಾರ್ಥಿ ಗಳೊಂದಿಗೆ ರಾಮಕೃಷ್ಣ ಕಾಟುಕುಕ್ಕೆ ಅವರು ಸಮೂಹ ದೇವರನಾಮ ಹಾಡಿ ದರು. ಬಳಿಕ ಭಜನಾಮೃತ ಭಾಗ-1, ಭಾಗ-2 ಕೃತಿ ಹಾಗೂ ವಿಜಯದಾಸರ ಪಂಚರತ್ನ ಸುಳಾದಿ ಕೃತಿ ಮತ್ತು ಟ್ರಸ್ಟ್‌ ರಶೀದಿಗಳನ್ನು ಅತಿಥಿಗಳು ಬಿಡುಗಡೆ ಮಾಡಿದರು. 2009ರಲ್ಲಿ ಸಾಂಪ್ರದಾಯಿಕ ಭಜನ ತರಬೇತಿಗೆಂದು ಹೊರಟ ರಾಮಕೃಷ್ಣ ಕಾಟುಕುಕ್ಕೆಯವರು ಕೇವಲ 10 ವರ್ಷಗಳಲ್ಲಿ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕು ಮತ್ತು ಕಾಸರಗೋಡು ಭಾಗದಲ್ಲಿ ನೂರಕ್ಕೂ ಅಧಿಕ ಭಜನ ಮಂಡಳಿಗಳನ್ನು ಹೊಂದಿ, ದೇಶದಲ್ಲೇ ಪ್ರಥಮವಾಗಿ ಭಜನೆಗೊಂದು ಚಾರಿಟೆಬಲ್ ಟ್ರಸ್ಟ್‌ ರೂಪಿಸಿ ಭಜನ ಕ್ಷೇತ್ರದಲ್ಲಿ ಕ್ರಿಯಾಶೀಲ ಚಟುವಟಿಕೆಗಳಿಗೆ ಮುಂದಡಿ ಇಟ್ಟಿರುವುದನ್ನು ಅತಿಥಿ ಗಳೆಲ್ಲರೂ ಪ್ರಶಂಸಿಸಿ, ಇವರ ಜತೆ ಕೈಜೋಡಿಸುವ ಭರವಸೆ ಇತ್ತರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.