ಇಳುವರಿ ಹೆಚ್ಚಳದ ತಂತ್ರಜ್ಞಾನ ಬಳಸಿ: ಉಷಾರಾಣಿ


Team Udayavani, Jun 19, 2019, 5:31 AM IST

usha-rani

ಕಾಸರಗೋಡು: ಮಾರುಕಟ್ಟೆಯಲ್ಲಿ ತೆಂಗಿನ ಕಾಯಿಯ ಬೆಲೆ ಏರಿಳಿತದಿಂದ ತೊಂದರೆ ಅನುಭವಿಸುತ್ತಿರುವ ತೆಂಗು ಬೆಳೆಗಾರರು ಈ ಸಮಸ್ಯೆಯನ್ನು ಪರಿಹರಿಸಲು ಇಳುವರಿ ಹೆಚ್ಚಳದ ತಂತ್ರಜ್ಞಾನವನ್ನು ಬಳಸಿ ಕೊಳ್ಳಬೇಕೆಂದು ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಹೇಳಿದರು.

ಅವರು ಕಾಸರಗೋಡಿನ ಕೇಂದ್ರ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ)ಯಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗಾಗಿ ನಡೆಸಿದ ತೆಂಗು ಬೆಳೆಯಲ್ಲಿ ಸುಧಾರಿತ ತಂತ್ರಜ್ಞಾನ ಎಂಬ ಪುನಶ್ಚೇತನ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ತೆಂಗು ಬೆಳೆಗಾರರು ಆಧುನಿಕ ತಂತ್ರಜ್ಞಾನ ಬಳಸಿ ಉತ್ಪಾದನೆ ಮತ್ತು ಆದಾಯವನ್ನು ಹೆಚ್ಚಿಸಿ ಕೊಳ್ಳಬೇಕು. ತೆಂಗು ಸಣ್ಣ ಹಿಡುವಳಿದಾರರ ಬೆಳೆಯಾಗಿರುವುದರಿಂದ ರೈತ ಆಧಾರಿತ ತಂತ್ರಜ್ಞಾನ ವರ್ಗಾವಣೆ ಉಪಕ್ರಮಗಳ ಆಯೋಜನೆ ಅಗತ್ಯವಿದೆ. ತೆಂಗಿನ ಕೃಷಿಯಿಂದ ಆದಾಯವನ್ನು ಹೆಚ್ಚಿಸುವ ತಂತ್ರಜ್ಞಾನ ಪ್ರದರ್ಶಿಸಲು ಮತ್ತು ಸುಧಾರಿತ (ಹೈಬ್ರಿಡ್‌) ತಳಿಯ ತೆಂಗಿನ ಕಾಯಿ ಸಸಿ ಉತ್ಪಾದನೆಯನ್ನು ಹೆಚ್ಚಿಸಲು ದೇಶದ ವಿವಿಧ ಭಾಗಗಳಲ್ಲಿರುವ ಸಿಡಿಬಿ ಅಡಿಯಲ್ಲಿ ಪ್ರದರ್ಶನ ಹಾಗೂ ಸುಧಾರಿತ ತಳಿಯ ಬೀಜ ಸಸಿ ಉತ್ಪಾದನಾ ಫಾರ್ಮ್ಗಳನ್ನು (ಡಿಎಸ್‌ಪಿ ಫಾರ್ಮ್) ಸಜ್ಜುಗೊಳಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದರು.

ತರಬೇತಿಯಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರಗಳನ್ನು ಅವರು ವಿತರಿಸಿದರು. ಅವರು ಸಿಪಿಸಿಆರ್‌ಐನಲ್ಲಿ ವಿವಿಧ ಪ್ರಯೋಗಾಲಯ ಘಟಕಗಳಿಗೆ ಭೇಟಿ ನೀಡಿದರು. ಸಿಡಿಬಿಯ ಆರ್ಥಿಕ ನೆರವಿನೊಂದಿಗೆ ಸಂಸ್ಥೆಯಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ಸಿಡಿಬಿಯಿಂದ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ತೆಂಗು ಕೃಷಿ ವಿಸ್ತರಣೆ, ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು.

ತೆಂಗಿನ ಕಾಯಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಗುಣಮಟ್ಟದ ಸಸಿ ನಾಟಿ ಮತ್ತು ಇಳುವರಿ ಹೆಚ್ಚಳದ ತಂತ್ರಗಳು ಎಂಬ ತರಬೇತಿ ಕೈಪಿಡಿಯನ್ನು ಅವರು ಬಿಡುಗಡೆಗೊಳಿಸಿದರು. ಸಿಪಿಸಿಆರ್‌ಐ ಐಸಿಎಆರ್‌ನ ಪ್ರಭಾರ ನಿರ್ದೇ ಶಕ ಡಾ| ಕೆ. ಮುರಳೀಧರನ್‌ ಅಧ್ಯಕ್ಷತೆ ವಹಿಸಿದ್ದರು.

ವಿಜ್ಞಾನಿ ಡಾ| ತಂಬಾನ್‌ ಸಿ. ತರಬೇತಿ ಕಾರ್ಯಕ್ರಮದ ವರದಿ ಮಂಡಿಸಿದರು. ವಿಜ್ಞಾನಿ ಡಾ| ಶಂಸುದ್ದೀನ್‌ ವಂದಿಸಿದರು. ತೆಂಗಿನಕಾಯಿ ಅಭಿವೃದ್ಧಿ ಮಂಡಳಿ, ಸುಧಾರಿತ ತೆಂಗು ಸಸಿ ಅಭಿವೃದ್ಧಿ ಕೇಂದ್ರದ 20 ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.