ಸಾಮಾಜಿಕ ಜಾಲತಾಣ ಧನಾತ್ಮಕವಾಗಿ ಬಳಸಿ: ನವೀನ್‌ ಕುಮಾರ್‌ ಪುತ್ರಕಳ


Team Udayavani, Jul 5, 2018, 7:35 AM IST

04ksde7.jpg

ಕಾಸರಗೋಡು: ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಆ ಬದಲಾವಣೆಗಳನ್ನು ಅರಿತುಕೊಂಡು ಅದರೊಂದಿಗೆ ಹೆಜ್ಜೆ ಹಾಕದಿದ್ದರೆ ಬೆಳವಣಿಗೆ ಸಾಧ್ಯವಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಗೆಲುವನ್ನು ಪಡೆಯಬೇಕಿದ್ದರೆ ಹೊಸ ಹೊಸ ವಿಷಯಗಳಿಗೆ  ತೆರೆದುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಧನಾತ್ಮಕವಾಗಿ  ಬಳಸಿಕೊಳ್ಳುವ ಮೂಲಕ ನಾವು ಬೆಳೆಯುವುದಕ್ಕೆ ಸಾಧ್ಯ. ಉದ್ಯೋಗ ಮಾಹಿತಿಗೆ ಸಂಬಂಧಿಸಿದ ಹಲವು ಜಾಲತಾಣಗಳು ಇಂದು ಲಭ್ಯವಿವೆ. ಅವುಗಳ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವುದು ಅತ್ಯಂತ ಅಗತ್ಯ ಎಂದು ಬೆಳ್ಳೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಅಧ್ಯಾಪಕ ನವೀನ್‌ ಕುಮಾರ್‌ ಪುತ್ರಕಳ ಅಭಿಪ್ರಾಯಪಟ್ಟರು.

ಅವರು ಸಿರಿಚಂದನ ಕನ್ನಡ ಯುವಬಳಗ ಕಾಸರಗೋಡು  ಇದರ ಆಶ್ರಯದಲ್ಲಿ ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ನಡೆದ ಮೂರನೇ ಉದ್ಯೋಗ ಮಾಹಿತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಕೇರಳದ ಕಾಸರಗೋಡು, ಕಣ್ಣೂರು, ವಯನಾಡು, ಮಲಪ್ಪುರ, ಪಾಲಾ^ಟ್‌, ಕಲ್ಲಿಕೋಟೆ, ತೃಶ್ಶೂರು, ಎರ್ನಾಕುಳಂ ಮತ್ತು ಇಡುಕ್ಕಿ ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ತಿಳಿಸಿದ ಅವರು ನಮ್ಮ ನಾಡಿನ ವಿಶೇಷತೆಗಳ ಆಳವಾದ ಅರಿವು ನಮಗೆ ಇರಬೇಕಾದುದು ಅತ್ಯಗತ್ಯ ಎಂದರು.

ಅಭ್ಯಾಸಕ್ಕೆಂದೇ ಸಮಯ ಮೀಸಲಿಡಿ: ಸೌಮ್ಯಾ
ಉದ್ಯೋಗ ಮಾಹಿತಿ ಶಿಬಿರದ ಸಹಸಂಚಾಲಕಿ ಸೌಮ್ಯಾ ಕುರುಮುಜ್ಜಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ನಿಯಮಿತವಾದ ಅಭ್ಯಾಸ ಬೇಕು. ದಿನದಲ್ಲಿ ಒಂದಷ್ಟು   ಸಮಯವನ್ನು ಇದಕ್ಕಾಗಿ ಮೀಸಲಿರಿಸಬೇಕು. ಹಾಗಾದರೆ ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಎಂದರು. ಕೇರಳದ ಪ್ರಮುಖ  ವ್ಯಕ್ತಿಗಳು, ಅವರಿಗೆ ಲಭಿಸಿದ ಪ್ರಶಸ್ತಿಗಳು, ವಿಶೇಷ ದಿನಗಳು ಮೊದಲಾದ ವಿಷಯಗಳ ಬಗ್ಗೆ ಮಾಹಿತಿ  ನೀಡಿದ   ಅವರು   ಸಂಕೇತಗಳ   ಮೂಲಕ ಅವುಗಳನ್ನು ಹೇಗೆ ನೆನಪಿರಿಸಿಕೊಳ್ಳಬಹುದು ಎಂಬುದನ್ನು ತಿಳಿಸಿದರು.

ಶಿಬಿರದ ಕೊನೆಯಲ್ಲಿ ಆಯ್ದ ಶೀಬಿರಾರ್ಥಿಗಳಿಂದ ತರಗತಿಯ ಅವಲೋಕನ ನಡೆಸಲಾಯಿತು. ಸಂಯೋಜಕ  ಮಹೇಶ ಏತಡ್ಕ,  ಬಳಗದ ಕೋಶಾಧಿಕಾರಿ ವಿನೋದ್‌ ಕುಮಾರ್‌ ಸಿ.ಎಚ್‌. ಅವರು ಶಿಬಿರದ ಯಶಸ್ಸಿನ ಬಗೆಗೆ ಸಂತೋಷ ವ್ಯಕ್ತಪಡಿಸಿ ಪೂರ್ಣವಾದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ಸಿರಿಚಂದನ ಕನ್ನಡ ಯುವಬಳಗದ  ಮಾರ್ಗದರ್ಶಕ ಡಾ| ರತ್ನಾಕರ ಮಲ್ಲಮೂಲೆ, ಅಧ್ಯಕ್ಷ ರಕ್ಷಿತ್‌ ಪಿ. ಎಸ್‌., ಉಪಾಧ್ಯಕ್ಷ ಪ್ರಶಾಂತ್‌ ಹೊಳ್ಳ, ಜತೆ ಕಾರ್ಯದರ್ಶಿ ಸೌಮ್ಯ ಪ್ರಸಾದ್‌, ಸದಸ್ಯರಾದ ಧನೇಶ್‌ ಕೋಟೆಕಣಿ, ಶ್ರದ್ಧಾ  ನಾಯರ್ಪಳ್ಳ, ಜಯಪ್ರಕಾಶ ಪಳ್ಳತಡ್ಕ, ಶಿವಪ್ರಸಾದ್‌  ಮೈಲಾಟಿ, ಮೋಹಿತ್‌, ಕಾರ್ತಿಕ್‌ ಪಡ್ರೆ, ಸುಬ್ರಹ್ಮಣ್ಯ ಹೇರಳ ಮತ್ತಿತರರು ನೇತೃತ್ವ ನೀಡಿದರು.

ಶಿಬಿರ ನಡೆಸಲು ಸ್ಥಳಾವಕಾಶ ನೀಡಿ ಉಪಾಹಾರದ  ವ್ಯವಸ್ಥೆ   ಮಾಡಿದ ಗುರು ಪ್ರಸಾದ್‌ ಕೋಟೆಕಣಿ ಮತ್ತು ಬಳಗ ದವರಿಗೆ ಬಳಗದ ಸದಸ್ಯೆ ಶ್ರದ್ಧಾ ನಾಯರ್ಪಳ್ಳ ಕೃತಜ್ಞತೆ ಸಲ್ಲಿಸಿದರು. 

ಕಣ್ಣೂರು ವಿ.ವಿ. ಬಿ.ಎ. ಕನ್ನಡ ಪದವಿ ಪರೀಕ್ಷೆಯಲ್ಲಿ  ಅನುಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಬಳಗದ ಸದಸ್ಯರಾದ ಸುನೀತಾ ಮಯ್ಯ ಹಾಗೂ ಅನುರಾಧಾ ಕೆ. ಅವರನ್ನು  ಯುವಬಳಗದ ಮಾರ್ಗದರ್ಶಕ ಡಾ| ರತ್ನಾಕರ ಮಲ್ಲಮೂಲೆ ಅಭಿನಂದಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.