ಕೊಡಗಿನ ವರುಣ್ ಗಣಪತಿ ಭಾರತ ಸೇನೆಯ ಲೆಫ್ಟಿನೆಂಟ್
Team Udayavani, Nov 24, 2020, 11:58 AM IST
ಮಡಿಕೇರಿ, ನ. 23: ಭಾರತೀಯ ಭೂ ಸೇನೆಯಲ್ಲಿ ಒಂದು ವರ್ಷದ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿ “ಸೋರ್ಡ್ ಆಫ್ ಹಾನರ್’ ಮತ್ತು “ರಾಷ್ಟ್ರಪತಿಗಳ ಚಿನ್ನದ ಪದಕ’ದೊಂದಿಗೆ ಲೆಫ್ಟಿನೆಂಟ್ ಆಗಿ ಕೊಡಗಿನ ಕುವರ ಚೋಳಂಡ ವರುಣ್ ಗಣಪತಿ ಹೊರಹೊಮ್ಮಿದ್ದಾರೆ.
ಇತ್ತೀಚೆಗೆ ಚೆನ್ನೈಯ ಆಫೀಸರ್ ಟ್ರೈನಿಂಗ್ ಅಕಾಡೆಮಿಯ ಆವರಣದಲ್ಲಿ ನಡೆದ “ಪಾಸಿಂಗ್ ಔಟ್ ಪರೇಡ್’ನಲ್ಲಿ ಈ ಗೌರವಕ್ಕೆ ಭಾಜನರಾದ ವರುಣ್ ಬೆಂಗಳೂರಿನ ಬಿಷಪ್ ಕಾಟನ್ ಬಾಯ್ಸ ಸ್ಕೂಲ್, ಮೈಸೂರಿನ ರಾಮಕೃಷ್ಣ ವಿದ್ಯಾ ಶಾಲೆ, ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದರು. ಜನವರಿಯಲ್ಲಿ ನಡೆದ ವಾಯುಪಡೆಯ ತರಬೇತಿ ಪರೀಕ್ಷೆಗಳಲ್ಲಿ ಕೂಡ ಉತ್ತೀರ್ಣರಾಗಿ ವಾಯುಪಡೆಗೆ ಆಯ್ಕೆಯಾಗಿದ್ದರು.
ವರುಣ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಲೋಕಾಯುಕ್ತ ಎಸ್ಪಿ ಆಗಿರುವ ಚೋಳಂಡ ಪೂವಯ್ಯ ಮತ್ತು ಧರಣಿ ಪೂವಯ್ಯ (ತಾಮನೆ ಮಣವಟ್ಟೀರ) ದಂಪತಿಯ ಹಿರಿಯ ಪುತ್ರ.
ವರುಣ್ ಅವರು ಈ ಹಿಂದೆ “ಖಡ್ಗ ಗೌರವಕ್ಕೆ’ ಪಾತ್ರರಾದ ಕರ್ನಲ್ ಪಟ್ಟಡ ಎನ್. ತಿಮ್ಮಯ್ಯ, ಲೆಫ್ಟಿನೆಂಟ್ ಜನರಲ್ ಪಟ್ಟಚೆರುವಂಡ ಸಿ. ತಿಮ್ಮಯ್ಯ, ಸ್ಕ್ವಾ.ಲೀ. ಮಲ್ಲೇಂಗಡ ಬಿ. ಚಿಟ್ಟಿಯಪ್ಪ ಮತ್ತು ಲೆ| ಕಮಾಂಡರ್ ಮುಕ್ಕಾಟೀರ ಸೂರಜ್ ಅಯ್ಯಪ್ಪ ಅವರ ವಿಶೇಷ ಸಾಧನೆಯ ಪಟ್ಟಿಯಲ್ಲಿ ಸೇರಿದ್ದಾರೆ. ವರುಣ್ ಅವರು ಲೆ| ಕಮಾಂಡರ್ ಮುಕ್ಕಾಟೀರ ಸೂರಜ್ ಅಯ್ಯಪ್ಪ ಅವರಂತೆ “ಖಡ್ಗ ಗೌರವ’ ಮತ್ತು ರಾಷ್ಟ್ರಪತಿಗಳ ಚಿನ್ನದ ಪದಕ ಪಡೆದ ಸಾಧನೆಯಲ್ಲಿ ಎರಡನೇಯವರಾಗಿ ಹೊರಹೊಮ್ಮಿದ್ದು ಮತ್ತೂಂದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ