ದೇಲಂಪಾಡಿಗೆ ಸರಕಾರಿ ಬಸ್‌ ಪ್ರಾರಂಭಿಸಲು ಗ್ರಾಮಸ್ಥರ ಆಗ್ರಹ


Team Udayavani, Oct 2, 2018, 6:50 AM IST

jalsur-photo-1.jpg

ದೇಲಂಪಾಡಿ:  ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ದೇಲಂಪಾಡಿ ಗ್ರಾಮಕ್ಕೆ ಸರಕಾರಿ ಬಸ್‌ಗಳಿಲ್ಲದೆ ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ. ತೀರ ಹತ್ತಿರದ ಪ್ರದೇಶಗಳಿಗೂ ಸಂಪರ್ಕಿಸಲು ಸಾಧ್ಯವಾಗದೆ ಇಲ್ಲಿನ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ.

ದೇಲಂಪಾಡಿ ಗ್ರಾಮ ವ್ಯಾಪ್ತಿಯ ಬೆಳ್ಳಿಪ್ಪಾಡಿ, ಬನಾರಿ ಹಾಗೂ ಪಂಜಿಕಲ್ಲು ಭಾಗದಲ್ಲಿ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. ಕೆಲಸ ಕಾರ್ಯಗಳಿಗೆ ಇಲ್ಲಿನ ವರು ಜಾಲೂÕರು-ಸುಳ್ಯ ಕಡೆಗೆ ತೆರಳ ಬೇಕಾಗುತ್ತದೆ. ಹೀಗಿದ್ದರೂ ಸರಿಯಾದ ವಾಹನಗಳ ವ್ಯವಸ್ಥೆಯೇ ಇಲ್ಲಿಲ್ಲ.

ಪರ್ಯಾಯ ಮಾರ್ಗ ದೂರ
ದೇಲಂಪಾಡಿ ಗ್ರಾಮದಿಂದ ಕಾಸರ ಗೋಡಿಗೆ ಸಂಚರಿಸಲು ಬಸ್‌ಗಳ ಓಡಾಟ ಹೆಚ್ಚಿದೆ. ಸುಳ್ಯಕ್ಕೆ ಹೋಗುವ ಪ್ರಯಾಣಿಕರು ಈ ಬಸ್‌ಗಳನ್ನೆ ಅವಲಂಬಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ದೇಲಂಪಾಡಿಗೆ ಪುತ್ತೂರು ಡಿಪೋದಿಂದ ಒಂದು ಸರಕಾರಿ ಬಸ್‌ ಅರಂಭಿಸಲಾಗಿತ್ತು. ಆದರೆ ಈ ಬಸ್‌ ಪಂಜಿಕಲ್ಲು ಮಾರ್ಗವಾಗಿ ಸಂಚರಿಸುತ್ತಿಲ್ಲ. ಸುಳ್ಯಕ್ಕೆ ಪ್ರಯಾಣಿಸುವ ಜನರು ದೇಲಂಪಾಡಿಯಿಂದ ಈಶ್ವರ ಮಂಗಲ ಕಾವು ಮೂಲಕ ಸಂಚರಿಸುತ್ತಿದ್ದಾರೆ. ಈ ಬದಲಿ ಮಾರ್ಗ ವನ್ನು ಪಂಜಿಕಲ್ಲು ರಸ್ತೆಗೆ ಹೋಲಿಸಿದರೆ ತುಂಬಾ ದೂರ. ದೇಲಂಪಾಡಿ-ಈಶ್ವರ ಮಂಗಲ-ಸುಳ್ಯ ರಸ್ತೆ ಸುಮಾರು 28 ಕಿ.ಮೀ. ದೂರವಿದೆ. ಆದರೆ ಪಂಜಿಕಲ್ಲು-ಸುಳ್ಯ ಮಾರ್ಗ 15 ಕಿ.ಮೀ ದೂರವಿದೆ. 

ಈ ರಸ್ತೆಯಲ್ಲಿ ಸಂಚರಿಸಿದರೆ ಸಮಯವೂ ಉಳಿಸಬಹುದು. ಪ್ರಯಾಣ ವೆಚ್ಚ ಕೂಡ ಕಡಿಮೆ.

ಶೀಘ್ರ ಬಸ್‌ ಸಂಚಾರ: ಆಗ್ರಹ
ದೇಲಂಪಾಡಿ ಪಂಜಿಕಲ್ಲು ಸುಳ್ಯ ರಸ್ತೆ ವಾಹನ ಸಂಚಾರಕ್ಕೆ ಯೋಗ್ಯವಾಗಿವೆ. ಕಾರು, ಜೀಪು, ಆಟೋ ರಿಕ್ಷಾಗಳು, ಪಿಕ್‌ ಅಪ್‌, ಮಿನಿ ಲಾರಿಗಳು ಸಹಿತ ದ್ವಿಚಕ್ರ ವಾಹನಗಳು ಅನಾಯಸವಾಗಿ ಓಡಾಡುತ್ತಿವೆ. ಸುಳ್ಯದಲ್ಲಿ ಕಳೆದ ವರ್ಷವೇ ಬಸ್‌ ಡಿಪೋ ಕಾರ್ಯಾರಂಭಿಸಿದೆ. ಅತೀ ಶೀಘ್ರದಲ್ಲಿ ಎರಡು ಸರಕಾರಿ ಬಸ್ಸುಗಳು ಈ ಮಾರ್ಗವಾಗಿ ಸಂಚರಿಸುವಂತಾಗಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.ಬೆಳಗ್ಗೆ ಏಳು ಗಂಟೆಗೆ ಪುತ್ತೂರಿನಿಂದ ದೇಲಂಪಾಡಿ ಮಾರ್ಗವಾಗಿ ಬಸ್‌ ಹೊರಟರೆ ಶಾಲಾ ಮಕ್ಕಳಿಗೆ, ಕೆಲಸಕಾರ್ಯಗಳಿಗೆ ದಿನನಿತ್ಯ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

ಶಾಲಾ ಮಕ್ಕಳ ಸ್ಥಿತಿ ಅತಂತ್ರ
ಸುಳ್ಯಕ್ಕೆ ತೆರಳುವ ಶಾಲಾ ಮಕ್ಕಳು ಶಾಲೆಗೆ ಸರಿಯಾದ ಸಮಯಕ್ಕೆ ತಲುಪಲಾಗುತ್ತಿಲ್ಲ. ಈಶ್ವರ ಮಂಗಲ ಮಾರ್ಗವಾಗಿ ಸಂಚರಿಸುವ ಮಕ್ಕಳು ದಿನಂಪ್ರತಿ 50ರಿಂದ 60 ಕಿ.ಮೀ. ಪ್ರಯಾಣಿಸುವಂತಾಗಿದೆ. ಹೆಚ್ಚಿನ ಹೆತ್ತವರು ಬೇಸತ್ತು ಮಕ್ಕಳನ್ನು ಪುತ್ತೂರಿನ ಶಾಲಾ, ಕಾಲೇಜಿಗೆ ಕಳುಹಿಸುತ್ತಿದ್ದಾರೆ.

ಖಾಸಗಿ ವಾಹನಗಳ ಬಳಕೆ
ದೇಲಂಪಾಡಿ-ಪಂಜಿಕಲ್ಲು ಭಾಗ ದಲ್ಲಿ ಬಸ್‌ ಓಡಾಟವಿಲ್ಲದೆ ಜನರು ಅನಿವಾರ್ಯವಾಗಿ ಆಟೋ ರಿಕ್ಷಾಗಳನ್ನು ಅವಲಂಬಿಸಿದ್ದಾರೆ. ಪ್ರತಿನಿತ್ಯ  ಪ್ರಯಾಣಿಸಲು ದ್ವಿಚಕ್ರ ವಾಹನ, ಆಟೋ ರಿûಾಗಳನ್ನು ಬಳಸುವುದರಿಂದ ಸಂಚಾರ ವೆಚ್ಚ ದುಬಾರಿಯಾಗುತ್ತಿದೆ. ಈಶ್ವರ ಮಂಗಲ ಮಾರ್ಗವಾಗಿ ಸಂಚರಿಸಿ ದೇಲಂಪಾಡಿ ಹೃದಯ ಭಾಗಕ್ಕೆ ಬರಲು 2ರಿಂದ 3 ಕಿ.ಮೀ. ದೂರ ನಡೆಯಬೇಕು.

ಬಸ್ಸು ಓಡಾಟವಾಗಲಿ
ಬಸ್ಸುಗಳ ಓಡಾಟವಿಲ್ಲದೆ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಪ್ರಯಾಣಿಕರಿಗೆ ಆಟೋ ರಿಕ್ಷಾಗಳ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರ ಬಸ್ಸು ಪ್ರಯಾಣ ಆರಂಭಿಸಿ, ಕನಿಷ್ಠ ಎರಡು ಸರಕಾರಿ ಬಸ್ಸುಗಳಾದರೂ ಓಡಾಡುವಂತಾಗಬೇಕು.
– ಚಂದ್ರಶೇಖರ್‌ ಬೆಳ್ಳಿಪ್ಪಾಡಿ
ಸ್ಥಳೀಯರು

ಸಂಕಷ್ಟ ದೇಲಂಪಾಡಿ- ಪಂಜಿಕಲ್ಲು  ಮಾರ್ಗ ಸುಳ್ಯಕ್ಕೆ ಬಹಳ ಹತ್ತಿರದ ರಸ್ತೆಯಾಗಿದೆ. ಬಹಳ ವರ್ಷಗಳಿಂದ ಈ ಭಾಗಕ್ಕೆ ಬಸ್ಸುಗಳಿಲ್ಲದೆ ಕಷ್ಟ ಅನುಭವಿಸುತ್ತಿದ್ದೇವೆ. ಶೀಘ್ರವಾಗಿ ಬಸ್‌ ಸಂಚಾರ ಆರಂಭಿಸಿದರೆ ಶಾಲಾ ಮಕ್ಕಳಿಗೆ ಅನುಕೂಲವಾಗುತ್ತದೆ.
– ಜಯ ಬಂದ್ಯಡ್ಕ 
ಗ್ರಾಮಸ್ಥರು

       
– ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.