ಪುನ:ಶ್ಚೇತನಕ್ಕೆ ಕಾಯುತ್ತಿರುವ ಮಧೂರು ಸಮೀಪದ ಪರಕ್ಕಿಲ ಕೆರೆ


Team Udayavani, May 5, 2019, 6:20 AM IST

kere

ಕಾಸರಗೋಡು : ಜಿಲ್ಲೆಯಲ್ಲಿ ಸಾಕಷ್ಟು ಜಲ ಸಂಪನ್ಮೂಲಗಳಿವೆ. ರಾಜ್ಯದಲ್ಲೇ ಅತ್ಯಂತ ಹೆಚ್ಚು ನದಿ ಹರಿಯುವ ಕಾಸರಗೋಡು ಜಿಲ್ಲೆಯಲ್ಲಿ ಪ್ರಮುಖವಾಗಿ 11 ಹೊಳೆಗಳಿವೆ. ಇನ್ನು ಉಪ ಹೊಳೆಗಳು ಅನೇಕವಿದೆ. ಹಲವಾರು ಕೆರೆ, ಮದಗಗಳು ಇವೆ. ಶಿಥಿಲಾವಸ್ಥೆಯಲ್ಲಿರುವ ಜಲಸಂಪನ್ಮೂಲಗಳನ್ನು ಪುನ:ಶ್ಚೇತನಗೊಳಿಸಿದ್ದಲ್ಲಿ ಕಾಸರಗೋಡಿನ ಜನರಿಗೆ ನೀರಿನ ಸಮಸ್ಯೆ ಇರದು.

ಅವುಗಳಲ್ಲೊಂದು ಪುನ:ಶ್ಚೇತನಕ್ಕೆ ಕಾಯುತ್ತಿರುವ ಮಧೂರು ಪರಕ್ಕಿಲ ಕೆರೆ. ಈ ಕೆರೆಗೆ ಪುನ:ಶ್ಚೇತನ ನೀಡಿದ್ದಲ್ಲಿ ಕೃಷಿಕರ ಪಾಲಿಗೆ ವರದಾನವಾಗಲಿದೆ. ಕೆರೆಗೆ ಪುನ:ಶ್ಚೇತನ ಲಭಿಸಿಬೇಕಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಇಚ್ಛಾಶಕ್ತಿ ಬೇಕು.

ಕಡು ಬೇಸಿಗೆಯಲ್ಲೂ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವುಳ್ಳ ಅಪೂರ್ವ ಕೆರೆಯೊಂದು ಮಧೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಪರಕ್ಕಿಲದಲ್ಲಿದೆ. ವರ್ಷ ಪೂರ್ತಿ ನೀರು ತುಂಬಿಕೊಂಡಿರುವ ಈ ಕೆರೆ ಅವಗಣನೆಯಿಂದಾಗಿ ಅವನತಿಯ ಅಂಚಿಗೆ ಸರಿಯುತ್ತಿದೆ.

ಸುಮಾರು ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ವ್ಯಾಪಿಸಿಕೊಂಡಿರುವ ವಿಶಾಲ ಕೆರೆಗೆ ಶತಮಾನದ ಇತಿಹಾಸವಿದೆ. ವಿಶಾಲವಾದ ಕೆರೆಯಲ್ಲಿ ಹೂಳು ತುಂಬಿಕೊಂಡು ತನ್ನ ಒಡಲಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ. ಮಧೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಅತ್ಯಂತ ದೊಡ್ಡ ಕೆರೆಯೆಂದೇ ಗುರುತಿಸಿಕೊಂಡಿರುವ ಪರಕ್ಕಿಲ ಕೆರೆ ಜಲಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ.

ನಿರಂತರ ನೀರಿನಿಂದ ತುಂಬಿ ತುಳುಕುತ್ತಿದ್ದ ಈ ಕೆರೆ ಕೃಷಿಕರ ಪಾಲಿಗೆ ಜೀವನಾಡಿಯಾಗಿದೆ. ಈ ಕೆರೆಗೆ ಪುನ:ಶ್ಚೇತನ ನೀಡಬಹುದಾಗಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕೆರೆಯ ಬಗ್ಗೆ ನಿರ್ಲಕ್ಷÂ ತೋರುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಈ ಕರೆ ಅವನತಿಯತ್ತ ಸಾಗುತ್ತಿದೆ. ಈ ಕೆರೆಯಲ್ಲಿ ನೀರು ತುಂಬಿಕೊಂಡಿದ್ದರೆ ಆಸುಪಾಸಿನ ಬಾವಿ, ಕೆರೆಗಳಲ್ಲೂ ಅಂತರ್ಜಲ ಮಟ್ಟ ಹೆಚ್ಚುತ್ತದೆ.

ಕಾಯಕಲ್ಪ ಬೇಕು : ಮಧೂರು ಪಂಚಾಯತ್‌ನ ಜನರ ಜೀವನಾಡಿಯಾಗಿರುವ ಪರಕ್ಕಿಲ ಕೆರೆಯನ್ನು ಸಂರಕ್ಷಿಸಲು ಕಾಯಕಲ್ಪ ನಡೆಯಬೇಕು. ಶತಮಾನ ಕಂಡಿರುವ ಪರಕ್ಕಿಲ ಕೆರೆಯಲ್ಲಿ ತುಂಬಿಕೊಂಡಿರುವ ಹೂಳು ಎತ್ತುವುದರಿಂದ ಕೆರೆಯಲ್ಲಿ ನೀರು ತುಂಬಿ ತುಳಕಲಿದೆ. ಇದೀಗ ಹೂಳು ತುಂಬಿಕೊಂಡಿರುವುದರಿಂದ ನೀರಿನ ಸಂಗ್ರಹವೂ ಕುಸಿದಿದೆ. ನಾಲ್ಕೂ ಬದಿಯಿಂದ ಆವರಣ ಗೋಡೆ ನಿರ್ಮಿಸುವುದರ ಮೂಲಕ ಮಳೆ ನೀರಿನೊಂದಿಗೆ ಹರಿದು ಬರುವ ಹೂಳು ತುಂಬುವುದನ್ನು ತಡೆಗಟ್ಟಬಹುದು.

ಹೂಳು ತುಂಬುವುದನ್ನು ತಡೆಗಟ್ಟುವುದರಿಂದ ವರ್ಷ ಪೂರ್ತಿ ನೀರು ಸಂರಕ್ಷಿಸಬಹುದು. ಇದು ಕೃಷಿಕರಿಗೆ ಮತ್ತು ಸ್ಥಳೀಯರಿಗೆ ವರದಾನವಾಗಬಹುದು.

ಮದಗ ಸಂರಕ್ಷಣೆ : ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳು, ಮದಗಗಳು ಇವೆ. ಅವುಗಳಲ್ಲಿ ಹಲವು ಈಗಾಗಲೇ ಶಿಥಿಲಾವಸ್ಥೆಗೆ ತಲುಪಿದೆ. ಇವುಗಳಲ್ಲಿ ಪ್ರಮುಖ ಮದಗಗಳಾದ ಪೈವಳಿಕೆ ಬಾಯಿಕಟ್ಟೆ, ಪುತ್ತಿಗೆಯ ಅನೋಡಿಪಳ್ಳ, ಎಣ್ಮಕಜೆಯ ಬೆದ್ರಂಪಳ್ಳ ಮೊದಲಾದವುಗಳನ್ನು ಸಂರಕ್ಷಿಸಬೇಕಾಗಿದೆ.

ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮದಗಗಳನ್ನು ಸಂರಕ್ಷಿಸಲು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರನ್ನು ಬಳಸಿಕೊಳ್ಳಬೇಕೆಂದು ಸಾರ್ವತ್ರಿಕವಾಗಿ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಕಾರ್ಮಿಕರನ್ನು ಜಲ ಸಂರಕ್ಷಣೆಯ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕೆಂದೂ ಆಗ್ರಹಿಸುತ್ತಿದ್ದಾರೆ.

ಇನ್ನೂ ಸಾಕಾರಗೊಳ್ಳದ ಅಭಿವೃದ್ಧಿ ಯೋಜನೆ : ವರ್ಷಪೂರ್ತಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವುಳ್ಳ ಪರಕ್ಕಿಲ ಕೆರೆಯನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಪಂಚಾಯತ್‌ ಯೋಜನೆ ಹಾಕಿಕೊಂಡಿತ್ತು. ಆದರೆ ಈ ವರೆಗೂ ಜಿಲ್ಲಾ ಪಂಚಾಯತ್‌ ಯೋಜನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಥಮಿಕ ಪ್ರಕ್ರಿಯೆಯನ್ನೂ ಆರಂಭಿಸಿಲ್ಲ.
ಮಧೂರು ಗ್ರಾಮ ಪಂಚಾಯತ್‌ ಪರಕ್ಕಿಲ ಕೆರೆಯನ್ನು ಅಭಿವೃದ್ಧಿ ಪಡಿಸುವಂತೆ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುತ್ತಲೇ ಬಂದಿದೆ.

ಆದರೆ ಮನವಿಗೆ ಸ್ಪಂದನೆ ಲಭಿಸಿಲ್ಲ. ಈ ಕಾರಣದಿಂದಾಗಿ ಪರಕ್ಕಿಲ ಕೆರೆ ಅವನತಿಗೆ ಸರಿಯುತ್ತಿದೆ. ಸಂಪೂರ್ಣ ಅವನತಿಗೆ ಸರಿಯುವ ಮುನ್ನವೇ ಕೆರೆಗೆ ಪುನ:ಶ್ಚೇತನ ನೀಡಲು ಮುಂದಾದರೆ ಮಧೂರು ಗ್ರಾಮ ಪಂಚಾಯತ್‌ನಲ್ಲಿ ಅನುಭವಿಸುತ್ತಿರುವ ನೀರಿನ ಸಮಸ್ಯೆಗೆ ತಕ್ಕ ಮಟ್ಟಿಗೆ ಪರಿಹಾರ ಲಭಿಸಬಹುದುಕಾನೂನನ್ನು ಕಡ್ಡಾಯಗೊಳಿಸಲಾಗಿದೆ.

ಜಲಸಂರಕ್ಷಣೆಗೆ ಆದ್ಯತೆ
ನೀಪರಕ್ಕಿಲ ಕೆರೆಯ ಅಭಿವೃದ್ಧಿಗೆ ಪಂಚಾಯತ್‌ನಿಂದ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುತ್ತಿದ್ದೇವೆ. ಪಂಚಾಯತ್‌ಗೆ ಸೀಮಿತ ಅನುದಾನ ಇರುವುದರಿಂದ ಈ ಕೆರೆ ಅಭಿವೃದ್ಧಿ ಹೊಣೆಯನ್ನು ಕಿರು ನೀರಾವರಿ ಇಲಾಖೆ ಅಥವಾ ಜಿಲ್ಲಾ ಪಂಚಾಯತ್‌ ವಹಿಸಿಕೊಳ್ಳಬೇಕಾದುದು ಅನಿವಾರ್ಯ. ಈ ಬಗ್ಗೆ ಎರಡು ವರ್ಷಗಳಿಂದ ಮನವಿ ಸಲ್ಲಿಸಿದ್ದೇವೆ. ಕೆರೆಯ ನೀರನ್ನು ಕೃಷಿಗೆ ಬಳಸಿ ಜಲಸಂರಕ್ಷಣೆಗೆ ಆದ್ಯತೆ ನೀಡಲಾಗುವುದು.
ಮಾಲತಿ ಸುರೇಶ್‌, ಅಧ್ಯಕ್ಷೆ ಮಧೂರು ಗ್ರಾಮ ಪಂಚಾಯತ್‌

ಅಭಿವೃದ್ಧಿ ಪ್ಯಾಕೇಜ್‌
ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಜಲ ಸಂರಕ್ಷಣೆ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು.
ಜಲಾಶಯ ಕಡಿಮೆಯಾದ ಐದು ನದಿಗಳ ಮತ್ತು ನದಿ ತೀರ ಪ್ರದೇಶಗಳಲ್ಲಿ ಜಲ ಸಂಗ್ರಹ ಪ್ರಕ್ರಿಯೆಯನ್ನು ಪ್ರಥಮ ಹಂತದಲ್ಲಿ ಜಾರಿಗೊಳಿಸಲಾಗುವುದು.
ಕೊಳವೆ ಬಾವಿಗಳನ್ನು ಸಾಧ್ಯವಾದಷ್ಟು ಕಡಿಮೆಗೊಳಿಸಿ ತೆರೆದ ಬಾವಿಗಳ ಸಾಧ್ಯತೆಯನ್ನು ಹೆಚ್ಚಿಸಲಾಗುವುದು.
ಕೃಷಿ ಪ್ರದೇಶಗಳನ್ನು ಹೆಚ್ಚಿಸಿ ಅಲ್ಲಿಗೂ ನೀರು ತಲುಪಿಸಲಾಗುವುದು.
ಡಾ| ಡಿ.ಸಜಿತ್‌ಬಾಬು, ಜಿಲ್ಲಾಧಿಕಾರಿ

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.