ಕೆಎಸ್‌ಆರ್‌ಟಿಸಿ ಡಿಪೋ ಪರಿಸರದಲ್ಲಿ ತ್ಯಾಜ್ಯ ರಾಶಿ

ಆರೋಗ್ಯ ಇಲಾಖೆಯ ಸೂಚನೆ ನಿರ್ಲಕ್ಷ್ಯ

Team Udayavani, Sep 30, 2019, 5:12 AM IST

29KSDE2

ಕಾಸರಗೋಡು: ನಗರದ ಕೆಎಸ್‌ಆರ್‌ಟಿಸಿ ಡಿಪೋ ಪರಿಸರದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ರಾಶಿ ರಾಶಿಯಾಗಿ ಬಿದ್ದುಕೊಂಡಿವೆ. ಡಿಪ್ಪೋದ ಪೂರ್ವ ಭಾಗದಲ್ಲಿ ಪ್ಲಾಸ್ಟಿಕ್‌ ಬಾಟಲಿಗಳು ಸಹಿತ ಪ್ಲಾಸ್ಟಿಕ್‌ ತ್ಯಾಜ್ಯ ತುಂಬಿಕೊಂಡಿರುವುದರಿಂದ ಸಾರ್ವಜನಿಕರು ಹೆಚ್ಚಿನ ತೊಂದರೆ ಅನುಭವಿಸುವಂತಾಗಿದೆ.

ಪ್ಲಾಸ್ಟಿಕ್‌ ಮಾಲಿನ್ಯ ಸಂಸ್ಕರಿಸದಿದ್ದರೆ ಮಾರಕವಾದಂತಹ ರೋಗಗಳಿಗೆ ತುತ್ತಾಗಬಹುದೆಂಬ ಬಗ್ಗೆ ಆರೋಗ್ಯ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿತ್ತಾದರೂ ಇಲ್ಲಿ ಯಾವುದೇ ಪ್ರಯೋಜನವಾಗಲಿಲ್ಲ. ಪ್ಲಾಸ್ಟಿಕ್‌ಮಾಲಿನ್ಯ ಮಣ್ಣಿನೊಂದಿಗೆ ಬೆರೆಯುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದಾಗಿದೆ.

ರಾಜ್ಯದಲ್ಲಿ ಪ್ಲಾಸ್ಟಿಕ್‌ ನಿಷೇಧ ಆದೇಶವು ಜಾರಿಗೆ ಬಂದಿರುವಂತೆಯೇ ಕೆಎಸ್‌ಆರ್‌ಟಿಸಿ ಡಿಪ್ಪೋ ಪರಿಸರದಲ್ಲಿ ಪ್ಲಾಸ್ಟಿಕ್‌ ಮಾಲಿನ್ಯ ರಾಶಿ ಜನಸಾಮಾನ್ಯರಿಗೆ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸಿದೆ. ಕೆಎಸ್‌ಆರ್‌ಟಿಸಿ ನೌಕರರು ಹಾಗೂ ಪ್ರಯಾಣಿಕರು ಕುಡಿಯುವ ನೀರಿನ ಬಾಟಲಿಯನ್ನು ತೆಗದುಕೊಂಡು ಉಪಯೋಗ ನಂತರ ಬಿಸಾಡುವ ಬಾಟಲಿಗಳು ಇದರಲ್ಲಿ ಹೆಚ್ಚಿನವುಗಳಾಗಿವೆ. ಬಸ್‌ ನಿಲ್ದಾಣ ಕೇಂದ್ರದಿಂದ ಸಂಗ್ರಹಿಸುವ ಬಾಟಲಿಗಳು ಸಮರ್ಪಕವಾದ ರೀತಿಯಲ್ಲಿ ಸಂಸ್ಕರಿಸಲು ವ್ಯವಸ್ಥೆ ಇಲ್ಲದಿರುವುದರಿಂದ ಅಲ್ಲಲ್ಲಿ ರಾಶಿ ಹಾಕಲಾಗುತ್ತಿದೆ. ಬಸ್ಸಿನ ಬಿಡಿ ಭಾಗಗಳ ದುರಸ್ತಿ ಕೆಲಸಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಡಿಪ್ಪೋದಲ್ಲಿ ನಿಲ್ಲಿಸಲಾಗುತ್ತಿದೆ.

ಈ ಪ್ರದೇಶದಲ್ಲಿಯೇ ಈ ರೀತಿಯ ಪ್ಲಾಸ್ಟಿಕ್‌ ಮಾಲಿನ್ಯ, ತ್ಯಾಜ್ಯ ರಾಶಿ ಹಾಕಿರುವುದು ನಾಗರಿಕ ಸಮಾಜಕ್ಕೆ ಒಳ್ಳೆಯದಲ್ಲ.

ಮಾತ್ರವಲ್ಲದೆ ಅದರೊಂದಿಗೆ ಆಹಾರದ ತ್ಯಾಜ್ಯ ವಸ್ತುಗಳನ್ನೂ ಹಾಕಲಾಗಿದ್ದು, ಇದನ್ನು ಸೇವಿಸಲು ಬೀದಿನಾಯಿಗಳ ಹಿಂಡು ಕೆಎಸ್‌ಆರ್‌ಟಿಸಿ ಬಸ್‌ ಪರಿಸರದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದೆ. ಡಿಪ್ಪೋ ಪ್ರದೇಶವು ಶುಚಿಯಾಗಿರದ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವಾಗಿದೆ.

ಮಾಲಿನ್ಯ ತುಂಬಿಕೊಂಡಿರುವ ಕೆಎಸ್‌ಆರ್‌ಟಿಸಿ ಡಿಪ್ಪೋದ ಸಮೀಪದಲ್ಲಿಯೇ ಬಿದ್ದುಕೊಂಡಿರುವ ಪ್ಲಾಸ್ಟಿಕ್‌ ತುಂಡುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು, ಕಾಲ್ನಡೆ ಪ್ರಯಾಣಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿದೆ.

ಹೀಗೆ ಪ್ಲಾಸ್ಟಿಕ್‌ ಮಾಲಿನ್ಯ ತುಂಬಿಕೊಂಡಿರುವುದಿಂದ ಸಂಜೆಯ ವೇಳೆಗಳಲ್ಲಿ ಸೊಳ್ಳೆಗಳ ಕಾಟವೂ ಹೆಚ್ಚಾಗಿ ಕಾಣುತ್ತಿವೆ. ಅಲ್ಲದೆ ಪ್ಲಾಸ್ಟಿಕ್‌ ಮಾಲಿನ್ಯದೊಂದಿಗೆ ಆಹಾರ ತ್ಯಾಜ್ಯ ವಸ್ತುಗಳನ್ನು ಹಾಕುವುದರಿಂದ ಡಿಪ್ಪೋ ಪರಿಸರವು ಗಬ್ಬು ವಾಸನೆಯೂ ಬೀರುತ್ತಿದೆ

ಆರೋಗ್ಯ ಸಮಸ್ಯೆ ಆತಂಕ
ಕಾಸರಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿನ ಮಾಲಿನ್ಯ ಸಂಸ್ಕರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಬೇಕಾಗಿದೆ. ಇಲ್ಲವಾದರೆ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಕೆಎಸ್‌ಆರ್‌ಟಿಸಿ ಡಿಪ್ಪೋದ ಅಧಿಕಾರಿಗಳು ಹಾಗೂ ನಗರಸಭಾ ಅಧಿಕಾರಿಗಳು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಜನರಿಗೆ ಆರೋಗ್ಯ ತೊಂದರೆ ಕಾಡುವ ಆತಂಕ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.