ವಿರಾಜಪೇಟೆ: ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ!
Team Udayavani, Feb 26, 2021, 8:38 AM IST
Representative Image
ಮಡಿಕೇರಿ: ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಸಂದೀಪ್ (22 ವ) ಎಂದು ಗುರುತಿಸಲಾಗಿದೆ.
ಸಿದ್ದಾಪುರ ಸಮೀಪ ಬಿಬಿಟಿಸಿ ಬೀಟಿಕಾಡು ತೋಟದಲ್ಲಿಈ ಘಟನೆ ನಡೆದಿದ್ದು, ಕಾಫಿ ಪಲ್ಪಿಂಗ್ ಕಣದಲ್ಲಿ ಸಂದೀಪ್ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ:ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!
ಕಳೆದ ರಾತ್ರಿ ಸಂದೀಪ್ ನಿದ್ರೆಯಲ್ಲಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಕಾರ್ಮಿಕ ಸಂದೀಪ್ ಮೃತಪಟ್ಟಿದ್ದಾನೆ.
ಜೊತೆಯಲ್ಲಿದ್ದ ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಡವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ನಕ್ಷತ್ರ ಆಮೆ ಮಾರಾಟ ಯತ್ನ : ಮೂವರ ಬಂಧನ
ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಶಾಶ್ವತವಾಗಿ ಕಾರ್ಮಿಕರು ಒತ್ತಾಯ ನಡೆಸಿದರು.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ