ಹೊಸ್ಕೇರಿ ಆಸ್ತಿ ವಿವಾದ: ಎಸ್‍ಪಿ ಕಚೇರಿ ಎದುರು ಧರಣಿ ಕುಳಿತ ಮಹಿಳೆ ಪೊಲೀಸ್ ವಶಕ್ಕೆ


Team Udayavani, Dec 25, 2020, 4:02 PM IST

ಹೊಸ್ಕೇರಿ ಆಸ್ತಿ ವಿವಾದ: ಎಸ್‍ಪಿ ಕಚೇರಿ ಎದುರು ಧರಣಿ ಕುಳಿತ ಮಹಿಳೆ ಪೊಲೀಸ್ ವಶಕ್ಕೆ

ಮಡಿಕೇರಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ಪ್ರಭಾವಿ ವ್ಯಕ್ತಿಯೊಬ್ಬರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಹೊಸ್ಕೇರಿ ಗ್ರಾಮದ ನಿವಾಸಿ ಮಂಡೀರ ವಿಮಾ ಹರೀಶ್ ಆರೋಪಿಸಿದ್ದು, ಡಿವೈಎಸ್‍ಪಿ ಹಾಗೂ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿಯನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಪತಿ ಮಂಡೀರ ಹರೀಶ್ ಹಾಗೂ ಮಾವನಿಗೆ ಸೇರಿದ ಹೊಸ್ಕೇರಿಯ ಸಿದ್ದಾಪುರ ರಸ್ತೆಯಲ್ಲಿರುವ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ನ್ಯಾಯಾಲಯದಲ್ಲಿದೆ. ಈ ನಡುವೆಯೇ ಪ್ರಭಾವಿ ರಾಜಕಾರಣಿಯೊಬ್ಬರು ತಮ್ಮ ಸಹೋದರರೊಂದಿಗೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿದ್ದಾರೆ. ಅಲ್ಲದೆ ಕಾನೂನಿಗೆ ವಿರುದ್ಧವಾಗಿ ಕುರುಬ ಸಮುದಾಯಕ್ಕೆ ಸೇರಿದ ಕಾರ್ಮಿಕರನ್ನು ಕೂಡ ತೋಟದೊಳಗೆ ಬಿಟ್ಟಿದ್ದಾರೆ. ಅಕ್ರಮ ಪ್ರವೇಶ, ರಿವಾಲ್ವರ್ ಹೊಂದಿರುವುದು ಮತ್ತು ಕೊಲೆ ಬೆದರಿಕೆ ಹಾಕಿರುವ ಬಗ್ಗೆ ರಾಜಕಾರಣಿಯ ವಿರುದ್ಧ ದೂರು ನೀಡಿದರೂ ಪೊಲೀಸರು ಬಂಧಿಸಿಲ್ಲವೆಂದು ಆರೋಪಿಸಿದರು.

ಇದನ್ನೂ ಓದಿ:ಪುತ್ತೂರು: ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಉದ್ಯಮಿ ಸಾವು!

ನಾವು ನೀಡಿದ ದೂರಿಗೆ ಸ್ಪಂದಿಸದ ಪೊಲೀಸ್ ಅಧಿಕಾರಿಗಳು ನನ್ನ ಪತಿಯ ವಿರುದ್ಧ ಕೆಲವರು ಮಾಡಿರುವ ಜಾತಿ ನಿಂದನೆಯ ಸುಳ್ಳು ಆರೋಪದ ದೂರನ್ನು ಪರಿಗಣಿಸಿ ಸಾರ್ವಜನಿಕವಾಗಿ ಬಂಧಿಸಿದ್ದಾರೆ. ನನ್ನ ಹಾಗೂ ನನ್ನ ತಮ್ಮನ ವಿರುದ್ಧವೂ ಜಾತಿನಿಂದನೆಯ ದೂರು ದಾಖಲಿಸಲಾಗಿದ್ದು, ನಮ್ಮಿಬ್ಬರನ್ನು ಇಲ್ಲಿಯವರೆಗೆ ಬಂಧಿಸಿಲ್ಲ. ಆದರೆ ನನ್ನ ಪತಿ ಹರೀಶ್ ಅವರನ್ನು ಮಾತ್ರ ಬಂಧನಕ್ಕೆ ಒಳಪಡಿಸಲಾಗಿದ್ದು, ಡಿವೈಎಸ್‍ಪಿ ಹಾಗೂ ಠಾಣಾಧಿಕಾರಿಗಳಿಗೆ ಕಾನೂನಿನ ಅರಿವಿನ ಕೊರತೆ ಇದೆ ಎಂದು ವಿಮಾ ಟೀಕಿಸಿದರು.

ಹೊಸ್ಕೇರಿ ಆಸ್ತಿ ವಿವಾದ: ಎಸ್‍ಪಿ ಕಚೇರಿ ಎದುರು ಧರಣಿ ಕುಳಿತ ಮಹಿಳೆ ಪೊಲೀಸ್ ವಶಕ್ಕೆ

ಸುಮಾರು ಆರು ಎಕರೆ ಭೂಮಿಗೆ ಸಂಬಂಧಿಸಿದಂತೆ ಮಾವ ಹಾಗೂ ಪತಿಯ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು, ಪ್ರಕರಣ ಇತ್ಯರ್ಥವಾಗುವ ಮೊದಲೇ ಮಾವನವರು ತೋಟವನ್ನು ಗುತ್ತಿಗೆ ಆಧಾರದಲ್ಲಿ ಪ್ರಭಾವಿ ರಾಜಕಾರಣಿಗೆ ನೀಡಿರುವ ಬಗ್ಗೆ ಮಾಹಿತಿ ಇದೆ. ಇದೇ ಕಾರಣಕ್ಕೆ ರಾಜಕಾರಣಿ ಕಾನೂನು ಉಲ್ಲಂಘಿಸಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿರುವುದಲ್ಲದೆ, ಜಾತಿನಿಂದನೆಯ ಕುತಂತ್ರ ಹೂಡುವುದಕ್ಕಾಗಿ ಕುರುಬ ಜನಾಂಗದ ಕಾರ್ಮಿಕರನ್ನು ಬಳಸಿಕೊಂಡಿದ್ದಾರೆ. ತೋಟಕ್ಕೆ ಬಂದ ಕಾರ್ಮಿಕರ ವಿರುದ್ಧ ನಾವುಗಳು ಯಾವುದೇ ಪ್ರತಿರೋಧ ವ್ಯಕ್ತಪಡಿಸದೆ ಒಳ್ಳೆಯ ರೀತಿಯಲ್ಲೇ ವಾಹನವೊಂದರಲ್ಲಿ ವಾಪಾಸ್ ಕಳುಸಿದ್ದೇವೆ. ಆದರೆ ಉದ್ದೇಶಪೂರ್ವಕವಾಗಿ ಇಲ್ಲಸಲ್ಲದ ಆರೋಪ ಮಾಡಿ ಜಾತಿನಿಂದನೆ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪತಿಯ ಬಂಧನವಾಗಿರುವುದರಿಂದ ನಾನು ಹಾಗೂ ಇಬ್ಬರು ಮಕ್ಕಳು ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದು, ಪೊಲೀಸರು ಸೂಕ್ತ ರಕ್ಷಣೆ ನೀಡಬೇಕು ಮತ್ತು ಪ್ರಭಾವಿ ರಾಜಕಾರಣಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ಮಹಿಳೆ ಪೊಲೀಸ್ ವಶ

ತನಗೆ ನ್ಯಾಯ ಬೇಕೆಂದು ಇಬ್ಬರು ಮಕ್ಕಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ವಿಮಾ ಅವರನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.