ನಿಯಂತ್ರಣ ಕೊಠಡಿ ನಿಯಂತ್ರಿಸಲು ಮಹಿಳೆಯರು


Team Udayavani, Mar 28, 2019, 6:30 AM IST

niyantrana-kotadi

ಕಾಸರಗೋಡು: ಲೋಕಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಆರಂಭಿಸಲಾದ ಜಿಲ್ಲೆಯ ನಿಯಂತ್ರಣ ಕೊಠಡಿಯನ್ನು ನಿಯಂತ್ರಿಸುತ್ತಿರುವುದು ಮಹಿಳೆಯರು.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಹಿತ ದೂರುಗಳನ್ನು, ಮತದಾರರ ಸಹಾಯ ವಾಣಿ ಇತ್ಯಾದಿಗಳನ್ನು ನಿಯಂತ್ರಿಸುವ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಈ ನಿಯಂತ್ರಣ ಕೊಠಡಿ ಕಿರಿಯ ವರಿಷ್ಠಾಧಿಕಾರಿಗಳಾದ ಇಬ್ಬರು ಮಹಿಳೆಯರ ನೇತೃತ್ವದಲ್ಲಿ ಚಟುವಟಿಕೆ ನಡೆಸುತ್ತಿದೆ. ರಾಜ್ಯದಲ್ಲಿ ಮಹಿಳೆಯರೇ ನೇತೃತ್ವ ನೀಡುತ್ತಿರುವ ಏಕೈಕ ನಿಯಂತ್ರಣ ಕೊಠಡಿ ಇದಾಗಿದೆ.

ಕಿರಿಯ ವರಿಷ್ಠಾಧಿಕಾರಿಗಳಾದ ಸಿ.ಜಿ. ಶ್ಯಾಮಲಾ, ಇಂದೂ ಎಂ. ದಾಸ್‌ ಅವರನ್ನು ನೋಡಲ್‌ ಅಧಿಕಾರಿಗಳಾಗಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ನೇಮಕಗೊಳಿಸಿದ್ದಾರೆ. ಗುಮಾಸ್ತರಾದ ಷೀಜಾ ಎ., ನಮಿತಾ ಎ., ಸಜೀತಾ ಪಿ.ಎ. ಈ ಕೊಠಡಿಯಲ್ಲಿ ಸಕ್ರಿಯ ರಾಗಿದ್ದಾರೆ.

ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿದ ಸಂಬಂಧ ದೂರು ಸ್ವೀಕರಿಸುವ ಸಿ-ವಿಜಿಲ್‌(ಸಿಟಿಝನ್‌ ವಿಜಿಲ್‌) ಆಪ್ಲಿಕೇಷನ್‌, 04994-255825, 04994-255676 ದೂರವಾಣಿಗಳಿಗೆ ಲಭಿಸುವ ದೂರುಗಳು, ಮತದಾರರ ಸಹಾಯ ವಾಣಿಯಾಗಿರುವ “1950′ ಎಂಬ ನಂಬ್ರಕ್ಕೆ ಬರುವ ಸಾರ್ವಜನಿಕ ಸಂಶಯಗಳು ಇತ್ಯಾದಿಗಳ ಪರಿಹಾರ ಉದ್ದೇಶದಿಂದ ಈ ನಿಯಂತ್ರಣ ಕೊಠಡಿ ಚಟುವಟಿಕೆ ನಡೆಸುತ್ತಿದೆ.

ಸಿ-ವಿಜಿಲ್‌ ಆ್ಯಪ್‌ನಲ್ಲಿ ಈ ವರೆಗೆ 32 ದೂರುಗಳು ಲಭಿಸಿವೆ. ಅವುಗಳಿಗೆ ಪರಿಹಾರ ಲಭಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಸ್ಥಾಪಿಸಲಾದ ಭಿತ್ತಪತ್ರ, ಬ್ಯಾನರ್‌, ಪತಾಕೆಗಳು ಇತ್ಯಾದಿ ಸಂಬಂಧ ದೂರುಗಳು ಸಿ-ವಿಜಿಲ್‌ನಲ್ಲಿ ಅಧಿಕವಾಗಿ ಲಭಿಸಿವೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಮೊಬೈಲ್‌ ಫೋನ್‌ ಕೆಮರಾ‌ದಲ್ಲಿ ಫೋಟೋ ಯಾ ವೀಡಿಯೋ ಚಿತ್ರೀಕರಿಸಿ ಸಿ-ವಿಜಿಲ್‌ಗೆ ಕಳುಹಿಸಿದರೆ, ಆ ಮೂಲಕ ಜಿಲ್ಲಾ ಚುನಾವಣೆ ಕೇಂದ್ರಕ್ಕೆ ರವಾನಿಸಲಾಗುತ್ತದೆ. ತತ್‌ಕ್ಷಣ ಸ್ಕಾÌಡ್‌ ಪ್ರದೇಶಕ್ಕೆ ತಲಪಿ ಕ್ರಮ ಕೈಗೊಳ್ಳುತ್ತದೆ.

ದೂರು ಆ್ಯಪ್‌ ಲೋಡ್‌ ನಡೆಸಿದ ತತ್‌ಕ್ಷಣ ಯೂನಿಕ್‌ ಐಡಿ ಯೊಂದು ಲಭಿಸುತ್ತದೆ. ಈ ಮೂಲಕ ದೂರಿನ ಫೋಲೋ ಅಪ್‌ ಮೊಬೈಲ್‌ನಲ್ಲೇ ಟ್ರಾಕ್‌ ನಡೆಸಬಹುದಾಗಿದೆ. ಒಬ್ಬರಿಗೆ ಒಂದಕ್ಕಿಂತ ಅಧಿಕ ದೂರುಗಳನ್ನು ದಾಖಲಿಸಬಹುದು ಎಂಬುದು ಈ ಸೌಲಭ್ಯದ ವಿಶೇಷತೆಯಾಗಿದೆ. ದೂರುದಾತನ ಮಾಹಿತಿಗಳನ್ನು ಗುಪ್ತವಾಗಿರಿಸಲಾಗುವುದು.

ಮೊಬೈಲ್‌ ಫೋನ್‌ನಲ್ಲಿ ಬಹಳ ಸುಲಭ ವಾಗಿ ಬಳಸಬಹುದಾದ ರೀತಿ ಆ್ಯಪ್‌ ರಚಿಸ ಲಾಗಿದೆ. ನೀತಿಸಂಹಿತೆ ಉಲ್ಲಂಘನೆ ನಡೆದಿ ರುವ ಪ್ರದೇಶಗಳಲ್ಲಿ ನೇರವಾಗಿ ತೆರಳಿ ಚಿತ್ರ ಪಡೆದರೆ ಮಾತ್ರ ಆ್ಯಪ್‌ ಮೂಲಕ ರವಾನಿಸ ಬಹುದಾಗಿದೆ. ಇತರರು ಪಡೆದ ಚಿತ್ರ ಪಡೆದು ಅಪ್‌ ಲೋಡ್‌ ಸಾಧ್ಯವಿಲ್ಲ. ಈ ಮೂಲಕ ಹುಸಿದೂರುಗಳನ್ನು ದಾಖಲಿಸಲು ಸಾಧ್ಯವಿಲ್ಲ. ನಿರಂತರ 5 ನಿಮಿಷಗಳ ಕಾಲ ಮಾತ್ರ ಈ ಆ್ಯಪ್‌ ಚಟುವಟಿಕೆ ನಡೆಸುತ್ತದೆ. ಮತ್ತೆ ಆ್ಯಪ್‌ ತೆರೆದು ದೂರು 5 ನಿಮಿಷಗಳ ಅವಧಿಯಲ್ಲಿ ಸೀಮಿತಗೊಳಿಸಿ ರವಾನಿಸಬೇಕಾಗುತ್ತದೆ. ಸಿ-ವಿಜಿಲ್‌ ಆ್ಯಪ್‌ ಪ್ಲೇಸೋrರ್‌ನಲ್ಲಿ ಲಭ್ಯವಿದೆ.

ದೂರುಗಳಿಗೆ ತತ್‌ಕ್ಷಣ ಪರಿಹಾರ
ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ 04994-255825, 04994- 255676 ನಂಬ್ರಗಳಿಗೆ ನೀಡಬಹುದು. ಈ ದೂರುಗಳಿಗೂ ತತ್‌ಕ್ಷಣ ಪರಿಹಾರ ಲಭಿಸಲಿದೆ. ಮತದಾರರ ಸಹಾಯವಾಣಿ 1950 ನಂಬ್ರಕ್ಕೆ ಈಗಾಗಲೇ 175 ದೂರುಗಳು ಲಭಿಸಿವೆ. ಅನಿವಾಸಿ ಭಾರತೀಯರ ಮತದಾನ, ಗುರುತು ಚೀಟಿ ಪಡೆಯುವಿಕೆ ಇತ್ಯಾದಿಗಳ ಮಾಹಿತಿ ನೀಡುವಲ್ಲಿ ಈ ನಿಯಂತ್ರಣ ಕೊಠಡಿಯ ಸದಸ್ಯೆಯರು ತಾಳ್ಮೆಯಿಂದ ವ್ಯವಹರಿಸುತ್ತಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.