ಯಕ್ಷಗಾನ ಬೊಂಬೆಯಾಟ: ಕೆ.ವಿ. ರಮೇಶ್‌ರಿಂದ ಸಾಕ್ಷಚಿತ್ರ ಪ್ರದರ್ಶನ


Team Udayavani, Jul 7, 2017, 3:50 AM IST

sakshachitra.jpg

ಬದಿಯಡ್ಕ: ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಎಡನೀರಿನಲ್ಲಿ ನಡೆದ ಯಕ್ಷಗಾನ ತರಬೇತಿ ಶಿಬಿರದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನಿರ್ದೇಶಕ ಕೆ.ವಿ. ರಮೇಶ್‌ ಅವರಿಂದ ಯಕ್ಷಗಾನ ಬೊಂಬೆಯಾಟ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಬೊಂಬೆ ಕುಣಿತ ಪ್ರಾತ್ಯಕ್ಷಿಕೆ ನಡೆಯಿತು.

ಕಾರ್ಯಕ್ರಮದಲ್ಲಿ ಕೆ.ವಿ.ರಮೇಶ್‌ ಅವರು ಮಾತನಾಡಿ ಇಷ್ಟೊಂದು ಚಂದವಾದ ಕಲೆ ಪ್ರಪಂಚದಲ್ಲಿ ಬೇರೆ ಇಲ್ಲ. ಆದುದರಿಂದ ಇದನ್ನು ಉಳಿಸುವ ಪ್ರಯತ್ನ ಆಗಲೇಬೇಕು. ಈ ಕಲೆಯ ಮೇಲಿನ ಪ್ರೀತಿಯನ್ನು  ಬೆಳೆಸಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಯಕ್ಷಗಾನ ಬೊಂಬೆಯಾಟದ ಬಗೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು  ಐದು ದೇಶಗಳಲ್ಲಿ  ಯಕ್ಷಗಾನ ಬೊಂಬೆಯಾಟ ಪ್ರದರ್ಶನ ನೀಡಿದ್ದೇನೆ. 1995ರಲ್ಲಿ  ಪಾಕಿಸ್ಥಾನದಲ್ಲಿ ಮೊದಲ ಪ್ರದರ್ಶನ ನೀಡಲಾಗಿತ್ತು. ಪಂಚವಟಿ  ಪ್ರಸಂಗವನ್ನು ಮೊದಲು ಪ್ರದರ್ಶಿಸಲಾಗಿತ್ತು. ದೇಶ-ವಿದೇಶಗಳಲ್ಲಿ  3000ದಷ್ಟು ಪ್ರದರ್ಶನಗಳನ್ನು ನಡೆಸಲಾಗಿದೆ. ಯಕ್ಷಗಾನ ಬೊಂಬೆಯಾಟಕ್ಕೆ ನಾಲ್ಕು ಸಾವಿರ ವರ್ಷಗಳ ಇತಿಹಾಸವಿದೆ ಎಂದರು.

ಬಣ್ಣಗಾರಿಕೆಗಳಿಗೆ ನಾಜೂಕು ಇರುವುದು ಕರಾವಳಿಯಲ್ಲಿ ಮಾತ್ರ. ಪರಂಪರೆಗೆ ಒತ್ತು ಕೊಟ್ಟು ಯಕ್ಷಗಾನದ ಬೊಂಬೆಗಳಿಗೆ ವೇಷಭೂಷಣಗಳನ್ನು ಮಾಡಲಾಗಿದೆ. ಇದೀಗ ಈ  ಬೊಂಬೆಗಳಿಗೆ 15 ವರ್ಷಗಳು ಸಂದಿವೆ ಎಂದರು.

ವಿವಿಧ ಭಂಗಿಯ ಬೊಂಬೆ ತಯಾರಿಗೆ ನಿರ್ಧಾರ
ವಿದೇಶದಲ್ಲಿ ಪ್ರದರ್ಶನ ನೀಡಿದಾಗ ಅಲ್ಲಿ ಕಥಾ ಸಾರಂಶವನ್ನು  ಇಂಗ್ಲೀಷಿನಲ್ಲಿಯೇ ಹೇಳಲಾಗುತ್ತದೆ. ಬಳಿಕ ಪ್ರಸಂಗವನ್ನು ಕನ್ನಡದಲ್ಲಿಯೇ ಹೇಳಲಾಗುತ್ತದೆ. ಬೊಂಬೆಯಾಟವನ್ನು ಒಂದು ಗಂಟೆ ಹೊತ್ತು ಪ್ರದರ್ಶಿಸಲಾಗುತ್ತದೆ. ಅರ್ಧ ಗಂಟೆ ದೃಶ್ಯ, ಕಾಲು ಗಂಟೆ  ಭಾಗವತಿಕೆ ಮತ್ತು ಕಾಲು ಗಂಟೆ  ಅರ್ಥಗಾರಿಕೆ ನಡೆಯುತ್ತದೆ ಎಂದು ಹೇಳಿದ ಕೆ.ವಿ.ರಮೇಶ್‌ ಅವರು, ಬೊಂಬೆಗಳನ್ನು  ಹಿಮ್ಮೇಳವಾಗಿ  ಬಳಸಲು ಸಾಧ್ಯವಿಲ್ಲ. ಒಂದು ವೇಷವನ್ನು ವಿವಿಧ ಭಂಗಿಯಲ್ಲಿ ತಯಾರಿಸಿ  ಬೊಂಬೆಗಳನ್ನು ಸಿದ್ಧಪಡಿಸಲು  ತೀರ್ಮಾನಿಸಲಾಗಿದೆ ಎಂದರು.

ಭಾರತದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ  ಯಕ್ಷಗಾನ ಬೊಂಬೆಯಾಟ ಪ್ರದರ್ಶನ  ನಡೆದಿದೆ. ಕೇವಲ ಕೇರಳ ಹಾಗೂ ಕರ್ನಾಟಕದಲ್ಲಿ ಮಾತ್ರವಲ್ಲ. ಉಳಿದ ರಾಜ್ಯಗಳಾದ್ಯಂತ  ಪ್ರದರ್ಶನವಾಗಿದೆ. ಯಕ್ಷಗಾನ ಅಭ್ಯಾಸ ಮಾಡಿದ್ದೇ ಬೊಂಬೆಯಾಟಕ್ಕೆ ಸ್ಫೂರ್ತಿಯಾಯಿತು ಎಂದು ಕೆ.ವಿ. ರಮೇಶ್‌ ಹೇಳಿದರು.

ನಾಟ್ಯಗುರು ದಿವಾಣ ಶಿವಶಂಕರ ಭಟ್‌ ಉಪಸ್ಥಿತರಿದ್ದರು. ಸುಜಾತಾ, ಅನುರಾಧಾ, ವೃಂದ, ತಿಲಕ ಚರ್ಚೆಯಲ್ಲಿ ಭಾಗವಹಿಸಿದ್ದರು. ಶಿಬಿರಾರ್ಥಿ ದಿತಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸಂಯೋಜನಾಧಿಕಾರಿ ಡಾ| ರತ್ನಾಕರ ಮಲ್ಲಮೂಲೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.  ಜಯಪ್ರಕಾಶ್‌ ವಂದಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.