ಬಿಸಿಲಲ್ಲೂ ನರ್ತಿಸುವ ಹಳದಿ ಚೆಲುವೆ

ಕೇರಳದ ರಾಜ್ಯ ಪುಷ್ಪ ಈ ಸ್ವರ್ಣ ಹೂ

Team Udayavani, Apr 17, 2019, 6:30 AM IST

vishu-flower

ಬದಿಯಡ್ಕ : ಬಿಸಿಲಿನ ಝಳ ಜನರನ್ನು ಕಂಗೆಡಿಸಿ ಗಿಡ ಮರ ಬಳ್ಳಿಗಳು ಮುದುಡುವಂತೆ ಮಾಡಿದರೂ ಇದು ಯಾವುದರ ಪರಿವೇ ಇಲ್ಲದೇ ಬೀಸುವ ಗಾಳಿಯಲಿ ತೇಲಾಡುವ ಹಳದಿ ಹೂಗಳ ಗೊಂಚಲು. ಕಣ್ಣಿಗೂ ಮನಸಿಗೂ ತಂಪು ನೀಡುತ್ತದೆ. ವಿಷು ಹಬ್ಬವನ್ನು ಸಂಭ್ರಮದಿಂದ ಸ್ವಾಗತಿಸಲು ಸಿದ್ಧರಾಗಿ ಮರದ ತುಂಬಾ ಗೊಂಚಲು ಗೊಂಚಲಾಗಿ ಅರಳಿರುವ ಕೊನ್ನೆ ಹೂಗಳ ಅಕರ್ಷಣೆಗೆ ಸಾಟಿಯಿಲ್ಲ.

ಹೀಗೊಂದು ಕತೆ
ಐಶ್ವರ್ಯ ದೇವತೆಯಾಗಿ ಭೂಮಿಗಾಗಮಿಸಿದ ಲಕ್ಷ್ಮೀ ದೇವಿಯು ಬಿಸಿಲಿನ ಬೇಗೆ ತಡೆಯಲಾಗದೆ ವಿಶ್ರಾಂತಿಗಾಗಿ ಪಕ್ಕದಲ್ಲಿರುವ ಮರವನ್ನು ಆಶ್ರಯಿಸಿ ದಳಂತೆ. ತನಗೆ ನೆರಳಿತ್ತ ವೃಕ್ಷವನ್ನು ಪ್ರೀತಿಯಿಂದ ದೇವಿ ಸ್ಪರ್ಶಿಸಲು ತತ್‌ಕ್ಷಣ ಮರದ ತುಂಬಾ ಚಿನ್ನದ ಬಣ್ಣದ ಹೂಗಳು ಅರಳಿದುವಂತೆ. ಆದುದ ರಿಂದಲೇ ಬಿಸಿಲಲ್ಲೂ ಈ ಹೂವು ಸುಂದರವಾಗಿ ಶೋಭಿಸುವುದು ಮಾತ್ರವಲ್ಲದೆ ಐಶ್ವರ್ಯದ ದ್ಯೋತಕವೂ ಆಗಿರುವುದು ಎಂದು ಬಲ್ಲವರು ಹೇಳುತ್ತಾರೆ.

ರಾಷ್ಟ್ರ-ರಾಜ್ಯ ಪುಷ್ಪ.
ಕಕ್ಕೆ ಹೂವು, ಸ್ವರ್ಣ ಪುಷ್ಪ ಎಂದೆಲ್ಲ ಕರೆಯಲ್ಪಡುವ ಕೊನ್ನೆ ಹೂವು ಥೆ„ಲಾಂಡ್‌ ದೇಶದ ರಾಷ್ಟ್ರೀಯ ಪುಷ್ಪ ಹಾಗೂ ಕೇರಳದ ರಾಜ್ಯ ಪುಷ್ಪವಾಗಿದೆ. ವರ್ಷದ ಒಂದೆರಡು ತಿಂಗಳು ಮಾತ್ರ ಅರಳಿ ನಗುವ ಕೊನ್ನೆ ಶಿವನಿಗೆ ಪ್ರಿಯ.
ಚಿಗುರಿನೊಂದಿಗೆ ಜೋತಾಡುವ ಉದ್ದನೆಯ ಹಳದಿ ಬಣ್ಣದ ಹೂ ಗೊಂಚಲುಗಳು, ಸುಮಾರು ಎರಡು ಮೀಟರ್‌ ಉದ್ದದ ಕಂದುಬಣ್ಣದ ಕಾಯಿಗಳು ಈ ಮರದ ತುಂಬಾ ಜೋತಾಡುತ್ತಿರುತ್ತವೆೆ.

ವಿಷು ಕಣಿಯಲ್ಲಿ ಪ್ರಧಾನ ಆಕರ್ಷಣೆಯಾಗಿರುವ ಕೊನ್ನೆ ಹೂಗಳನ್ನು ವಿಷು ಹತ್ತಿರವಾಂತೆ ಮಾರುಕಟ್ಟೆಗಳಲ್ಲಿ ಮಾರಾಟಕ್ಕಿಡುತ್ತಾರೆ. ಪೇಟೆಯಲ್ಲಿ ವಾಸಿಸುವ ಜನರಿಗೆ ಈ ಹೂವು ಸುಲಭವಾಗಿ ಲಭ್ಯವಾಗದೇ ಇರುವುದರಿ ಂದ ಮಾರುಕಟ್ಟೆಯಲ್ಲಿ ಒಂದು ಗೊಂಚಲಿಗೆ 50-100 ರೂಗೆ ಮಾರಾಟವಾಗುತ್ತದೆ.
ಮೀನ ಮಾಸ ಅರ್ಧದಲ್ಲಿ ಸುವರ್ಣ ನಕ್ಷತ್ರಗಳಂತೆ ಮರದ ರೆಂಬೆಗಳನ್ನು ಅಲಂಕರಿಸುವ ಈ ಹೂಗಳು ಪ್ರತಿವರ್ಷ ಬೆಸಗೆಯಲ್ಲಿ ಅರಳುತ್ತವೆ.

ಕಾಲ ಬದಲಾದರೂ ಆಚರಣೆಗಳು ಮಹತ್ವ ಕಳೆದುಕೊಂಡರೂ, ವಿಷುವಿನ ಸಮƒದ್ಧಿಯ ಹಿರಿಮೆ ಗತಕಾಲ ಸೇರುವ ದಿನ ದೂರವಿಲ್ಲ ಎನ್ನುವಾಗಲೂ ಪ್ರಕೃತಿ ಮಾತ್ರ ಎಲ್ಲವನ್ನೂ ಒಡಲಲ್ಲಿ ಮುಚ್ಚಿಟ್ಟು ಕಾಲ ಕಾಲಕ್ಕೆ ತೆರೆದಿಡುವ, ಹಬ್ಬ ಹರಿದಿನಗಳನ್ನು ನೆನಪಿಸುವ ಕಾರ್ಯ ಮಾಡುತ್ತಲೇ ಇದೆ.

ನಮ್ಮ ವಿಶಿಷ್ಟವಾದ ಸಂಪದ್ಭರಿತವಾದ ಆಚರಣೆಯಲ್ಲಿ ಕೊನ್ನೆ ಹೂವಿಗೆ ಪ್ರತ್ಯೇಕ ಸ್ಥಾನವಿದೆ.

ಹೊಸ ವರ್ಷದ ಆದಿಯಲಿ ಪ್ರಕೃತಿಯ ಮಡಿಲಲ್ಲಿ ಶೋಭಿಸುವ ಲಕ್ಷ್ಮಿಯ ಕರ ಸ್ಪರ್ಶದಿಂದ ಅರಳಿದ ಹೂಗಳಿಗೆ ಪವಿತ್ರ, ಪೂಜನೀಯ ಸ್ಥಾನವನ್ನೂ ನೀಡಲಾಗಿದೆ.

ಸಮೃದ್ಧಿಯ ಸಂಕೇತವಾದ ಸ್ವರ್ಣ ಪುಷ್ಪ ಅಥವಾ ಕೊನ್ನೆ ಹೂವನ್ನು ನೀಡಿ ವಿವಿಧ ಪಕ್ಷಗಳ ಅಭ್ಯರ್ಥಿಗಳನ್ನು ಸ್ವಾಗತಿಸುವ ಮೂಲಕ ಜನರ ಪ್ರೀತಿ, ಗೌರವ ಹಾಗೂ ಮುಂದಿನ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಇದೊಂದು ಮುನ್ನುಡಿಯಾಗಲಿ ಎಂದು ಶುಭ ಹಾರೈಸುತ್ತಿದ್ದಾರೆ.

ಔಷಧೀಯ ಸಸ್ಯ
ಕೊನ್ನೆ ಮರದ ಹೂ ಮತ್ತು ಕಾಯಿ ಎರಡೂ ಔಷಧೀಯ ಗುಣ ಹೊಂದಿದ್ದು ವಾತ ಸಂಬಂಧಿ ರೋಗಗಳಿಗೆ ಹೆಚ್ಚಾಗಿ ಬಳಕೆಯಾಗುತ್ತದೆ. ಮರದ ತೊಗಟೆಯನ್ನು ಚರ್ಮ ಹದಮಾಡಲು ಉಪಯೋಗಿಸಲಾಗುತ್ತದೆ.

  • ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.