ಏತಡ್ಕ ದೇವಸ್ಥಾನದಲ್ಲಿ ಹಲಸಿನ ಹಣ್ಣಿನ ಅಪ್ಪ  ಸೇವೆ


Team Udayavani, Jul 10, 2017, 3:20 AM IST

09ksde7.jpg

ಏತಡ್ಕ: ಏತಡ್ಕದ ಶ್ರೀ ಸದಾಶಿವ ದೇವಸ್ಥಾನದಲ್ಲಿ ರವಿವಾರ “ಹಲಸಿನ ಹಣ್ಣಿನ ಅಪ್ಪ ಸೇವೆ’ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಅರ್ಚಕ ಲಕ್ಷ್ಮೀನಾರಾಯಣ ಭಟ್‌ ಪಡಿಕ್ಕಲ್‌ ಅವರು ಕಾರ್ಯಕ್ರಮದ ವಿಧಿವಿಧಾನಗಳನ್ನು ನೆರವೇರಿಸಿದರು.

ಕಳೆದ ಐವತ್ತು ವರ್ಷಗಳಿಂದ ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆದು ಬರುತ್ತಿರುವ ಆಚರಣೆ “ಹಲಸಿನ ಹಣ್ಣಿನ ಅಪ್ಪ ಸೇವೆ’ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತಾದಿಗಳು ಭಾಗವಹಿಸಿದರು. ಭಕ್ತಾದಿಗಳು ತಮ್ಮಲ್ಲಿ ಬೆಳೆದ ಅತ್ಯುತ್ತಮ ಹಲಸಿನ ಹಣ್ಣನ್ನು ಅರ್ಪಿಸುವ ಮೂಲಕ ಹಲಸಿನ ಹಣ್ಣಿನ ಸೇವೆ ಸಂಪನ್ನಗೊಂಡಿತು.

ಹಿನ್ನೆಲೆ: 1940ರಲ್ಲಿ ಏತಡ್ಕ ಸಮೀಪದ ಪಡ್ರೆ ಗ್ರಾಮದಲ್ಲಿರುವ ಈ ದೇವಸ್ಥಾನದ ಮೂಡು ಭಾಗದಲ್ಲಿ ಪ್ರದಕ್ಷಿಣಾಕಾರದಲ್ಲಿ ಹರಿದು ಪಳ್ಳತ್ತಡ್ಕ ದಾರಿಯಾಗಿ ಕುಂಬಳೆ ಸೇರುವ ನದಿಯಲ್ಲಿ ಹಿಂದೆಂದೂ ಕೇಳರಿಯದ ನೆರೆ ಬಂದು ಸುತ್ತುಮುತ್ತಲಿನ ಅನೇಕ ಮನೆಗಳು ಕುಸಿದು ನೆರೆ ಪಾಲಾದವು. ಅಕ್ಕಪಕ್ಕದ ಕೃಷಿ ಭೂಮಿಗಳು ಹೂಳು ತುಂಬಿ ಕೃಷಿ ಅಯೋಗ್ಯವಾಗಿ ರೂಪುಗೊಂಡವು. 1941 ರಲ್ಲಿ ಏತಡ್ಕ ಸುಬ್ರಾಯ ಭಟ್‌ ಅವರು ಅಪರೂಪವಾಗಿದ್ದ ದೇವಸ್ಥಾನವಿದ್ದ ಜಾಗವನ್ನು ಖರೀದಿಸಿದರು. 1948 ರಲ್ಲಿ ಜೀರ್ಣೋದ್ಧಾರ, ಬ್ರಹ್ಮಕಲಶ ನೆರವೇರಿಸಿದರು. ಧನ-ಧಾನ್ಯ ಎರಡೂ ದುರ್ಲಭ ಎನ್ನುವ ಪರಿಸ್ಥಿತಿ. ಇಡೀ ಊರವರ ಹಸಿವಿನ ದಿನಗಳಲ್ಲಿ ಕೈ ಹಿಡಿದು ಅನ್ನ ಕೋಶವನ್ನು ತುಂಬಿದ್ದು “ಹಲಸಿನ ಕಾಯಿ ಮತ್ತು ಹಣ್ಣು’. ದಿನದ ಮೂರೂ ಹೊತ್ತು ಹಲಸಿನ ಹಲವು ಬಗೆ, ಅನ್ನ, ತರಕಾರಿ, ಹಣ್ಣು ಹಂಪಲು ಎಲ್ಲವೂ ಒಂದರಲ್ಲಿ ಎಂದರೆ ಹಲಸಿನ ಕಾಯಿಯೇ. ದಿ| ಏತಡ್ಕ ಸುಬ್ರಾಯ ಭಟ್‌ ಅವರು ಈ ಮರಕ್ಕೆ ಊರವರು ಚಿರಋಣಿಯಾಗಿರಬೇಕು ಎನ್ನುವ ಪರಿಕಲ್ಪನೆಯಿಂದ  “ಹಲಸಿನ ಹಣ್ಣಿನ ಅಪ್ಪ ಸೇವೆ’ಯನ್ನು  ಆಚರಣೆಗೆ ತಂದರು. ಆ ಬಳಿಕ ಪ್ರತೀ ವರ್ಷವೂ ತಪ್ಪದೆ ಹಲಸಿನ ಹಣ್ಣಿನ ಅಪ್ಪ ಸೇವೆ ನಡೆಯುತ್ತಿದೆ.

ಚಿತ್ರ: ಚಂದ್ರಶೇಖರ್‌ ಏತಡ್ಕ

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.