“ಯೋಗದಿಂದ ಆರೋಗ್ಯ,ಮನಸ್ಸು ಸದೃಢ’

ಕಾಟುಕುಕ್ಕೆ: ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಯೋಗ ದಿನಾಚರಣೆ

Team Udayavani, Jun 25, 2019, 5:25 AM IST

24KSDE5

ಕಾಟುಕುಕ್ಕೆ: ಯೋಗವನ್ನು ಜೀವನದಲ್ಲಿ ಅಳವಡಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ಹೀಗಾಗಿ ವಿದ್ಯಾರ್ಥಿಗಳು ಯೋಗ ಮಾಡಿ ಆರೋಗ್ಯ ಪಡೆಯಿರಿ ಎಂದು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್‌ ಪದ್ಮನಾಭ ಶೆಟ್ಟಿ ಕರೆಕೊಟ್ಟರು.ಅವರು ಎನ್‌ಎಸ್‌ಎಸ್‌ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಮನುಷ್ಯನಿಗೆ ಸಮಯದ ಕೊರತೆ ಕಾಡುತ್ತಿದೆ. ಹೀಗಾಗಿ ಯೋಗ ಮಾಡಲು ಸಮಯವೇ ಸಿಗುವುದಿಲ್ಲ. ಕಡಿಮೆ ಸಮಯದಲ್ಲಿ ಯೋಗ ಮಾಡಿ ಅದರಿಂದ ಹೆಚ್ಚಿನ ಫಲಿತಾಂಶ ಬರಬೇಕು ಎನ್ನುತ್ತಾರೆ. ಆದರೆ ಅದು ಸಾಧ್ಯವಿಲ್ಲ. ಯೋಗವನ್ನು ನಾವು ಜೀವನದ ಒಂದು ಭಾಗವಾಗಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ಶಾಸ್ತ್ರ ಅಧ್ಯಾಪಿಕೆ ರಮಣಿ ಎಂ.ಎಸ್‌. ಮಾತನಾಡಿ, ಯೋಗವು ವಿಶ್ವಕ್ಕೆ ಭಾರತದ ಕೊಡುಗೆ. ಇಂದು 177 ರಾಜ್ಯಗಳು ಯೋಗ ದಿನವನ್ನು ಆಚರಿಸುತ್ತಿರುವುದು ಭಾರತಕ್ಕೆ ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮದಲ್ಲಿ ಸಮಾಜ ಶಾಸ್ತ್ರ ಅಧ್ಯಾಪಕ ರಾಜೇಶ್‌ ಸಿ.ಎಚ್‌., ಹಿಂದಿ ಅಧ್ಯಾಪಕರಾದ ಗೋವಿಂದನ್‌ ನಂಬೂದಿರಿ, ಸಂಸ್ಕೃತ ಅಧ್ಯಾಪಕರಾದ ಕೃಷ್ಣನ್‌ ನಂಬೂದಿರಿ ಉಪಸ್ಥಿತರಿದ್ದರು.

ಇಂಗ್ಲಿಷ್‌ ಅಧ್ಯಾಪಕರಾದ ಬಾಲಕೃಷ್ಣ ಎಂ ಸ್ವಾಗತಿಸಿದರು. ಕನ್ನಡ ಅಧ್ಯಾಪಿಕೆ ಸರಸ್ವತಿ ಪ್ರಸನ್ನ ವಂದಿಸಿದರು. ಎನ್‌ಎಸ್‌ಎಸ್‌ ಯೋಜನಾ ಧಿಕಾರಿ ಮಹೇಶ್‌ ಏತಡ್ಕ ಕಾರ್ಯಕ್ರಮ ನಿರೂಪಿಸಿದರು.

ಯೋಗ ತರಬೇತುದಾರ ಶಶಿಧರ್‌ ನೀರ್ಚಾಲ್‌ ಯೋಗವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯೊಂದಿಗೆ ಮಾರ್ಗದರ್ಶನವಿತ್ತರು. ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳಿಗಾಗಿ ಯೋಗದ ಬಗ್ಗೆ ಪೋಸ್ಟರ್‌ ತಯಾರಿಸುವ ಸ್ಪರ್ಧೆ ನಡೆಸಲಾಯಿತು. ವಿದ್ಯಾರ್ಥಿಗಳಾದ ಕವಿತಾ ಎಸ್‌. ಪೈ, ಅಹಮ್ಮದ್‌ ಮಶೂಕ್‌, ಆಯಿಷತ್‌ ಶಾಹಾಮ ನೇತೃತ್ವ ವಹಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.