“ಕುಮಾರಸ್ವಾಮಿ ವಿರುದ್ಧ 1 ಕೋ.ರೂ. ಮಾನನಷ್ಟ ಮೊಕದ್ದಮೆ’
Team Udayavani, Jan 10, 2018, 11:34 AM IST
ಮಂಗಳೂರು: ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರ ಪಾತ್ರ ಇದೆ ಎಂದು ಬೇಜಾವಾಬ್ದಾರಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಮಂಗಳೂರಿನ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮಂಗಳವಾರ 1 ಕೋ.ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಡಾ| ಭರತ್ ಶೆಟ್ಟಿ ತಿಳಿಸಿದ್ದಾರೆ.
ದ.ಕ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಕ್ ಹತ್ಯೆಯ ತನಿಖೆಯನ್ನು ದಾರಿ ತಪ್ಪಿಸುವ ಹಾಗೂ ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡಿ ಜನರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರ ಹೇಳಿಕೆ ಪರಿಣಾಮ ಬೀರುತ್ತದೆ. ಪೊಲೀಸರಿಗೆ ಗೊತ್ತಿಲ್ಲದ ಹಾಗೂ ಘಟನೆಯ ಬಗ್ಗೆ ಒಂದಿನಿತೂ ಅರಿಯದೆ ಮೈಸೂರಿನಲ್ಲಿ ಕುಳಿತು ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರ ವಿರುದ್ದ ಮಂಗಳೂರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಬಿಜೆಪಿ ನಾಯಕರ ಕೈವಾಡ ಎಂಬಂತೆ ಕುಮಾರಸ್ವಾಮಿ ಅವರ ಹಿಟ್ ಆ್ಯಂಡ್ ರನ್ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ವತಿಯಿಂದ ಮೊಕದ್ದಮೆ ಹೂಡಲಾಗಿದೆ ಎಂದವರು ಹೇಳಿದರು.
ಝಾಕೀರ್ ನಾೖಕ್ ಹಾಗೂ ಓವೈಸಿ ಜತೆಗೆ ಪೊಟೋ ಕ್ಲಿಕ್ಕಿಸಿದ ಶಾಸಕ ಮೊದಿನ್ ಬಾವಾ ಅವರು ಪ್ರಸ್ತುತ ಹತಾಶರಾಗಿ ಸಹೋದರ ಜೆಡಿಎಸ್ನ ಬಿ.ಎಂ.ಫಾರೂಕ್ ಅವರ ಮೂಲಕ ಕುಮಾರಸ್ವಾಮಿ ಅವರಲ್ಲಿ ಹೇಳಿಕೆ ನೀಡುತ್ತಿರುವ ಬಗ್ಗೆ ಮಾಹಿತಿ ಇದೆ. ಫಾರೂಕ್ ಅವರಿಗೆ ಜೆಡಿಎಸ್ನಲ್ಲಿ ಸೀಟೂ ಇಲ್ಲ-ಸೂಟುಕೇಸೂ ಇಲ್ಲ ಎಂಬ ಪರಿಸ್ಥಿತಿಯಲ್ಲಿದ್ದಾರೆ ಎಂದವರು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಕಾಸ್ ಪುತ್ತೂರು, ಅಶೋಕ್ ಕೃಷ್ಣಾಪುರ, ಸುಧಾಕರ ಅಡ್ಯಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್