1,140 ಮಂದಿಗೆ ರ‍್ಯಾಟ್‌, 204 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ

 ಗ್ರಾ.ಪಂ. ಮಟ್ಟದಲ್ಲಿ ಕೋವಿಡ್ ಪರೀಕ್ಷೆ

Team Udayavani, Sep 29, 2020, 10:20 PM IST

1,140 ಮಂದಿಗೆ ರ್ಯಾಟ್‌, 204 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ

ಸೂರಿಂಜೆ: ಕೋವಿಡ್‌ ತಪಾಸಣ ಶಿಬಿರ ಜರಗಿತು.

ಮಹಾನಗರ: ಕೋವಿಡ್ ಪ್ರಕರಣವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದ.ಕ. ಜಿ.ಪಂ. ಸೋಮವಾರದಿಂದ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕೋವಿಡ್ ಪರೀಕ್ಷೆ ಹಮ್ಮಿಕೊಂಡಿದ್ದು, 2ನೇ ದಿನವಾದ ಮಂಗಳವಾರ ಮಂಗಳೂರು ತಾಲೂಕಿನಲ್ಲಿ 56 ಮಂದಿಗೆ ಕೊರೊನಾ ದೃಢಪಟ್ಟಿದೆ ತಾಲೂಕಿನ ವಿವಿಧ ಗ್ರಾ.ಪಂ.ಗಳಲ್ಲಿ ಒಟ್ಟು 1,140 ರ್ಯಾಟ್‌ ಹಾಗೂ 204 ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ರ್ಯಾಟ್‌ (ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌) ಪರೀಕ್ಷೆ ಮಾಡಿಸಿಕೊಂಡವರಲ್ಲಿ 56 ಮಂದಿಗೆ ಕೋವಿಡ್ ದೃಢಪಟ್ಟಿದೆ. ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.

ಕಿನ್ನಿಗೋಳಿ: ಇಬ್ಬರಿಗೆ ಪಾಸಿಟಿವ್‌
ಕಿನ್ನಿಗೋಳಿ: ದ.ಕ. ಜಿಲ್ಲಾಡಳಿತ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್‌ ಹಾಗೂ ಕಿನ್ನಿಗೋಳಿ ಗ್ರಾ.ಪಂ. ಇದರ ಸಹಯೋಗದೊಂದಿಗೆ ಕೋವಿಡ್‌ -19 ಉಚಿತ ಪರೀಕ್ಷೆ ಶಿಬಿರವು ಕಿನ್ನಿಗೋಳಿಯ ಭಾರತ್‌ ನಿರ್ಮಾಣ್‌ ರಾಜೀವ್‌ ಗಾಂಧಿ ಸೇವಾ ಕೇಂದ್ರದಲ್ಲಿ ಜರಗಿತು. ಶಿಬಿರದಲ್ಲಿ ಒಟ್ಟು 19 ಮಂದಿ ಕೋವಿಡ್‌-19 ಟೆಸ್ಟ್‌ಗೆ ಒಳಗಾದರು. ಇದರಲ್ಲಿ ಇಬ್ಬರಿಗೆ ಪಾಸಿಟಿವ್‌ ಎಂದು ತಿಳಿದುಬಂದಿದೆ.
ಕೆಮ್ರಾಲ್‌ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪ್‌ ಕುಮಾರ್‌, ಹಿರಿಯ ಪ್ರಯೋಗ ಶಾಲಾ ತಂತ್ರಜ್ಞೆ ಶಂಕರಿ, ಪಿಡಿಒ ಶ್ರೀ ಪ್ರಶಾಂತ್‌ ಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ ಸಿಂಪಿಗೈರಾ, ಸಂತೋಷ್‌ ಕುಮಾರ್‌, ಪೂರ್ಣಿಮಾ, ಕಿರಿಯ ಪ್ರಭಾರ ಆರೋಗ್ಯ ಸಹಾಯಕಿ ಸುಮಾ, ಆಶಾ ಕಾರ್ಯಕರ್ತೆಯರು, ನಾಗರಿಕರು, ಸಿಬಂದಿ ಉಪಸ್ಥಿತರಿದ್ದರು.

ಅ. 1: ಕೋವಿಡ್‌ ತಪಾಸಣ ಶಿಬಿರ
ಕಿನ್ನಿಗೋಳಿ: ದ.ಕ. ಜಿಲ್ಲಾಡಳಿತ, ಕಟೀಲಿನ ಪ್ರಾ.ಆರೋಗ್ಯ ಕೇಂದ್ರ ಹಾಗೂ ಮೆನ್ನಬೆಟ್ಟು ಗ್ರಾ.ಪಂ. ವತಿಯಿಂದ ಅ. 1 ರ ಗುರುವಾರ ಬೆಳಿಗ್ಗೆ 10.30ರಿಂದ ಮೆನ್ನಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ ಕೋವಿಡ್‌ ತಪಾಸಣ ಶಿಬಿರ ಜರಗಲಿದೆ.

ಉಳ್ಳಾಲ: 11 ಮಂದಿಗೆ ಸೋಂಕು ದೃಢ
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೋಳಿಯಾರ್‌, ಮಂಜನಾಡಿ, ಉಳ್ಳಾಲ, ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಂಗಳವಾರ ಕೋವಿಡ್‌ -19 ಉಚಿತ ಪರೀಕ್ಷಾ ಶಿಬಿರ ನಡೆಯಿತು. ರ್‍ಯಾಂಡಮ್‌ ಆ್ಯಂಟಿಜನ್‌ ಟೆಸ್ಟ್‌ನಲ್ಲಿ ಒಟ್ಟು 261 ಜನರು ಭಾಗವಹಿಸಿದ್ದು, ಇವರಲ್ಲಿ 11 ಮಂದಿಗೆ ಸೋಂಕು ದೃಡವಾಗಿದೆ.

ನಾಟೆಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಣಾಜೆ ಗ್ರಾಮದ ಅಸೈಗೋಳಿ ಲಯನ್ಸ್‌ ಕ್ಲಬ್‌ನಲ್ಲಿ 36 ಜನರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೋಳಿಯಾರ್‌ ವ್ಯಾಪ್ತಿಯ ಪಾವೂರು ಗ್ರಾಮದ ಅಂಬೇಡ್ಕರ್‌ ಭವನದಲ್ಲಿ 35 ಮಂದಿ, ಉಳ್ಳಾಲ ಕಲ್ಲಾಪುವಿನಲ್ಲಿ 101 ಜನರು, ಅಂಬ್ಲಿಮೊಗರು ಆರೋಗ್ಯ ಕೇಂದ್ರದಲ್ಲಿ 89ಜನರು ತಪಾಸಣೆಗೆ ಒಳಗಾಗಿದ್ದು ಎಲ್ಲರದೂ ನೆಗೆಟಿವ್‌ ವರದಿಯಾಗಿದೆ. ಬುಧವಾರ ಬೆಳ್ಮ ಗ್ರಾ.ಪಂ. ವ್ಯಾಪ್ತಿಯ ದೇರಳಕಟ್ಟೆ ರಿಕ್ಷಾ ಸ್ಟಾಂಡ್‌, ಹರೇಕಳ ಗ್ರಾಮದ ಹರೇಕಳ ಪಂಚಾಯತ್‌ ಬಳಿ ತಪಾಸಣೆ ನಡೆಯಲಿದೆ.

ಮೂಡುಬಿದಿರೆ ತಾ.: 241 ಮಂದಿಗೆ ಕೋವಿಡ್‌ ಪರೀಕ್ಷೆ
ಮೂಡುಬಿದಿರೆ: ಮಂಗಳವಾರ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ವ್ಯಾಪ್ತಿಯ 5 ಪ್ರಾ. ಆ. ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಒಟ್ಟು 241 ಮಂದಿಯನ್ನು ಕೋವಿಡ್‌-19 ಟೆಸ್ಟ್ಗೆ ಒಳಪಡಿಸಿದ್ದು 18 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ತಾ. ಆರೋಗ್ಯಾಧಿಕಾರಿ ಡಾ| ಸುಜಯ ಭಂಡಾರಿ ತಿಳಿಸಿದ್ದಾರೆ.

ಇಂದು ಕೋವಿಡ್‌ ಪರೀಕ್ಷೆ
ಮೂಡುಬಿದಿರೆ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ ಗಂ. 2ರ ವರೆಗೆ ಕೋವಿಡ್‌-19 ಉಚಿತ ಪರೀಕ್ಷೆಯ ಶಿಬಿರವನ್ನು ಆಯೋಜಿಸಲಾಗಿದೆ.

ಸುರತ್ಕಲ್‌: 45 ಮಂದಿಗೆ ಪರೀಕ್ಷೆ
ಸುರತ್ಕಲ್‌: ಇಲ್ಲಿನ ಸೂರಿಂಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಂಗಳವಾರ ಕೋವಿಡ್‌ ತಪಾಸಣ ಶಿಬಿರ ಜರಗಿತು. 45 ಮಂದಿ ಕೋವಿಡ್‌-19ಪರೀಕ್ಷೆಗೊಳಾಗಿದ್ದಾರೆ. ಇದರಲ್ಲಿ 40 ಮಂದಿ ನೆಗೆಟಿವ್‌ ವರದಿ ಬಂದಿದ್ದು, 5 ಮಂದಿಯ ವರದಿಯನ್ನು ಹೆಚ್ಚಿನ ತಪಾಸಣೆಗೆ ವೆನ್ಲಾಕ್‌ಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.