13 ಶಾಲೆಗಳು ಇ-ಸ್ಮಾರ್ಟ್‌ ಆಗಿ ಮೇಲ್ದರ್ಜೆಗೆ

16 ಕೋಟಿ ರೂ. ವೆಚ್ಚ; ಎರಡು ಹಂತದ ಪ್ರಕ್ರಿಯೆ

Team Udayavani, Dec 18, 2019, 4:44 AM IST

cv-36

ಮಹಾನಗರ: ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾದ ಪಾಲಿಕೆಯ ಎಂಟು ವಾರ್ಡ್‌ಗಳ 13 ಶಾಲೆಗಳು ಮುಂದಿನ ದಿನಗಳಲ್ಲಿ ಇ-ಸ್ಮಾರ್ಟ್‌ ಶಾಲೆಗಳಾಗಿ ಮೇಲ್ದರ್ಜೆಗೇರಲಿವೆ. ಎಡಿಬಿ ಯೋಜನೆಯಡಿ 16 ಕೋಟಿ ರೂ. ವೆಚ್ಚದಲ್ಲಿ ಈ ಶಾಲೆಗಳು ಅಗತ್ಯ ಮೂಲಸೌಲಭ್ಯಗಳನ್ನು ಪಡೆದುಕೊಳ್ಳಲಿವೆ.

ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಶಾಲೆಗಳನ್ನು ಮೇಲ್ದರ್ಜೆಗೇರಿಸಿ, ಅವಶ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡುವ ಉದ್ದೇಶದಿಂದ 13 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾದ ಎಂಟು ವಾರ್ಡ್‌ ಗಳ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಹಂತಹಂತವಾಗಿ ಮೇಲ್ದರ್ಜೆಗೇರಲಿವೆ. ಮೊದಲ ಹಂತದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳಿಗೆ ಪೂರಕ ಸೌಲಭ್ಯ ಒದಗಿಸಿಕೊಡುವ ಕೆಲಸವಾಗಲಿದೆ.

ವಾರ್ಡ್‌ ನಂ. 45ರ ಸಹಿಪ್ರಾ ಶಾಲೆ ನಿರೇಶ್ಯಾಲ್ಯ (32.1 ಲಕ್ಷ ರೂ.) ಸಹಿಪ್ರಾ ಶಾಲೆ ಬಸ್ತಿಗಾರ್ಡನ್‌ (56.4 ಲಕ್ಷ ರೂ.), ವಾರ್ಡ್‌ ನಂ. 57ರ ಸಹಿಪ್ರಾ ಶಾಲೆ ಹೊಗೆ ಬಜಾರ್‌ (50 ಲಕ್ಷ ರೂ.), ಸರಕಾರಿ ಪ್ರೌಢಶಾಲೆ ಹೊಗೆಬಜಾರ್‌ (61.8 ಲಕ್ಷ ರೂ.), ವಾರ್ಡ್‌ ನಂ. 46ರ ಸಹಿಪ್ರಾ ಶಾಲೆ ಪಾಂಡೇಶ್ವರ (104 ಲಕ್ಷ ರೂ.), ವಾರ್ಡ್‌ ನಂ. 44ರ ಸಹಿಪ್ರಾ ಶಾಲೆ ಬಂದರು (ಉರ್ದು) ಮತ್ತು ಸರಕಾರಿ ಪ್ರೌಢಶಾಲೆ ಬಂದರು-ಉರ್ದು (ಎರಡು ಶಾಲೆಗಳಿಗೆ ಒಟ್ಟು 98.4 ಲಕ್ಷ ರೂ.), ವಾರ್ಡ್‌ ನಂ. 40ರ ಸಹಿಪ್ರಾ ಶಾಲೆ ಬಲ್ಮಠ, ಸರಕಾರಿ ಪ್ರೌಢಶಾಲೆ, ಸರಕಾರಿ ಪಪೂ ಕಾಲೇಜು ಬಲ್ಮಠ (ಎರಡು ಶಾಲೆಗಳಿಗೆ ಒಟ್ಟು 190 ಲಕ್ಷ ರೂ.), ವಾರ್ಡ್‌ 58ರ ಸ.ಹಿ.ಪ್ರಾ. ಶಾಲೆ ಕನ್ನಡ ಬೋಳಾರ, ಸಹಿಪ್ರಾ ಶಾಲೆ ಪಶ್ಚಿಮ ಉರ್ದು ಬೋಳಾರ (ಎರಡು ಶಾಲೆಗಳಿಗೆ ಒಟ್ಟು 166.27 ಲಕ್ಷ ರೂ.), ವಾರ್ಡ್‌ ನಂ. 46ರ ಸರಕಾರಿ ಅಭ್ಯಾಸಿ ಪ್ರೌಢಶಾಲೆ ಹಂಪನಕಟ್ಟೆ (113 ಲಕ್ಷ ರೂ.), ಸರಕಾರಿ ಪ್ರೌಢಶಾಲೆ ರಥಬೀದಿ (108.88 ಲಕ್ಷ ರೂ.) ಶಾಲೆಗಳು ಮೇಲ್ದರ್ಜೆಗೇರಲಿವೆ.

ಏನೇನು ಸವಲತ್ತು?
ಈ ಮೊತ್ತದಲ್ಲಿ ಮುಖ್ಯವಾಗಿ ಶಾಲೆಯ ಕಟ್ಟಡ ದುರಸ್ತಿ, ಛಾವಣಿ ಹಾಕುವುದು/ ನೆಲ ಹಾಸುವುದು, ಕಾಂಪೌಂಡ್‌ ನಿರ್ಮಾಣ, ಶೌಚಾಲಯ ದುರಸ್ತಿ, ನಿರ್ಮಾಣ, ಪ್ಲಂಬಿಂಗ್‌ ಕೆಲಸ, ವಿದ್ಯುತ್ಛಕ್ತಿ, ಕ್ರೀಡಾ ಸೌಲಭ್ಯ ಒದಗಿಸುವುದು ಸಹಿತ ಶಾಲೆಯಲ್ಲಿ ಇಲ್ಲದೆ ಇರುವ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ನಾದುರಸ್ತಿಯಲ್ಲಿರುವ ಸೌಲಭ್ಯಗಳನ್ನು ನವೀಕರಣಗೊಳಿಸುವ ಕೆಲಸವೂ ನಡೆಯಲಿದೆ.

5 ಕೋಟಿ ರೂ.ಗಳಲ್ಲಿ ವಿವಿಧ ಸೌಲಭ್ಯ
ಎಲ್ಲ ಶಾಲೆಗಳಲ್ಲಿಯೂ ಗುಣಮಟ್ಟದ ಸೌಲಭ್ಯ ಅಳವಡಿಕೆಗೆ ಒತ್ತು ನೀಡಲಾಗಿದ್ದು, ಇದಕ್ಕಾಗಿ 5 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ. 67.90 ಲಕ್ಷ ರೂ. ವೆಚ್ಚದಲ್ಲಿ ಕನ್ನಡ ಸಾಫ್ಟ್‌ವೇರ್‌ ಇರುವ 35 ಕಂಪ್ಯೂಟರ್‌ ಘಟಕ, 1.75 ಲಕ್ಷ ರೂ. ವೆಚ್ಚದಲ್ಲಿ 35 ಒಳ ಸಿರಾಮಿಕ್‌ ಬೋರ್ಡ್‌, 9.8 ಲಕ್ಷ ರೂ. ವೆಚ್ಚದಲ್ಲಿ 392 ಮ್ಯಾನೇಜ್‌ಮೆಂಟ್‌ ಕನ್ಸೋಲ್‌ ಸಾಫ್ಟ್‌ವೇರ್‌, 97.92 ಲಕ್ಷ ರೂ. ವೆಚ್ಚದಲ್ಲಿ 392 ನೆಟ್‌ ಬುಕ್‌ (ಲ್ಯಾಪ್‌ಟಾಪ್‌), 7 ಲಕ್ಷ ರೂ. ವೆಚ್ಚದಲ್ಲಿ ಲ್ಯಾಪ್‌ಟಾಪ್‌ಗಾಗಿ 35 ವೈರ್‌ಲೆಸ್‌ ಸಾರ್ಟ್‌ ಮುಂತಾದ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ. 18 ಲಕ್ಷ ರೂ. ವೆಚ್ಚದ ಚಾರ್ಜಿಂಗ್‌ ಕಾಸ್ಟ್‌, 83 ಲಕ್ಷ ರೂ. ಮೂಲ ಸೌಕರ್ಯ, ವಿದ್ಯುತ್‌ ಕೆಲಸ, ತರಬೇತದಾರರ ವೆಚ್ಚಕ್ಕಾಗಿ ಖರ್ಚಾಗಲಿದೆ. ಪ್ರಸ್ತುತ ಈ ಕಾಮಗಾರಿಯು ಟೆಂಡರ್‌ ಪ್ರಕ್ರಿಯೆಯಲ್ಲಿದೆ ಎಂದು ಶಾಸಕರು ತಿಳಿಸಿದ್ದಾರೆ.

13 ಶಾಲೆ ಮೇಲ್ದರ್ಜೆಗೆ
ಸ್ಮಾರ್ಟ್‌ಸಿಟಿ ಯೋಜನೆಯಡಿ ಆಯ್ಕೆಯಾದ ಎಂಟು ವಾರ್ಡ್‌ ಗಳ 13 ಶಾಲೆಗಳನ್ನು ಎಡಿಬಿ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುವುದು. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಉನ್ನತ ದರ್ಜೆಯ ಸೌಕರ್ಯಗಳನ್ನು ಕಲ್ಪಿಸಿ ಕೊಡುವ ಉದ್ದೇಶದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಒಟ್ಟು 16 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ಅಭಿವೃದ್ಧಿ ಕಾಮಗಾರಿ ಎರಡು ಹಂತದಲ್ಲಿ ನಡೆಯಲಿದೆ.
– ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.