ಲಾಕ್‌ಡೌನ್‌ ಮಧ್ಯೆಯೂ 2.30 ಲಕ್ಷ ಮೆ. ಟನ್‌ ಸರಕು ಸಾಗಣೆ

ಕಾರವಾರ, ಮಂಗಳೂರು ಹಳೆ ಬಂದರಿನಿಂದ ಲಕ್ಷದ್ವೀಪಕ್ಕೆ ರವಾನೆ

Team Udayavani, Jul 29, 2020, 1:32 PM IST

ಲಾಕ್‌ಡೌನ್‌ ಮಧ್ಯೆಯೂ 2.30 ಲಕ್ಷ ಮೆ. ಟನ್‌ ಸರಕು ಸಾಗಣೆ

ಮಹಾನಗರ: ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ ಸುರಕ್ಷಿತ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕಾರವಾರ ಹಾಗೂ ಹಳೆ ಮಂಗಳೂರು ಬಂದರಿನಿಂದ 3 ತಿಂಗಳುಗಳಲ್ಲಿ 2.30 ಲಕ್ಷ ಮೆಟ್ರಿಕ್‌ ಟನ್‌ ಸರಕುಗಳನ್ನು ಲಕ್ಷದ್ವೀಪಕ್ಕೆ ಕಳುಹಿಸಲಾಗಿದ್ದು, ಇದರಿಂದ ಬಂದರು ಇಲಾಖೆ ಒಟ್ಟು 5.20 ಕೋಟಿ ರೂ. ಮೊತ್ತದ ಆದಾಯ ಗಳಿಸಲಾಗಿದೆ.

ಕೇಂದ್ರ ಸರಕಾರ, ಕೇಂದ್ರ ನೌಕಾಯಾನ ಮಂತ್ರಾಲಯ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಡೈರೆಕ್ಟರ್‌ ಜನರಲ್‌ ಆಫ್‌ ಶಿಪ್ಪಿಂಗ್‌ ಅವರು ಸೂಚಿಸಿದ ಸುರಕ್ಷೆ ಕ್ರಮಗಳನ್ನು ಅನುಸರಿಸಿ ಕನಿಷ್ಠ ಕಾರ್ಮಿಕರನ್ನು ಬಳಸಿಕೊಂಡು ಮಂಗಳೂರಿನಿಂದ ನೌಕೆಗಳಲ್ಲಿ ಲಕ್ಷದ್ವೀಪಕ್ಕೆ ಅಕ್ಕಿ, ತರಕಾರಿ ಮೊದ ಲಾದ ಆಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ. ಸಾಮಾನ್ಯವಾಗಿ ಲಕ್ಷದ್ವೀಪ ನಿವಾಸಿಗಳು ತಿಂಗಳಿಗೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ಹಡಗಿನಲ್ಲಿ ಬಂದು ಅಗತ್ಯ ವಸ್ತುಗಳನ್ನು ಮಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿಸಿ ವಾಪಸಾಗುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್‌ ಆರಂಭವಾದ ತತ್‌ ಕ್ಷಣ ಹಡಗು ಸಂಚಾರವನ್ನು ಕೂಡ ಸ್ಥಗಿತಗೊಳಿಸಲು ಜಿಲ್ಲಾಡಳಿತ ಸೂಚಿಸಿತ್ತು. ಅನಂತರ ನೌಕೆಗಳಲ್ಲಿ ಲಕ್ಷದ್ವೀಪಕ್ಕೆ ಆಹಾರ ಸಾಮಗ್ರಿ ಸಾಗಿಸಲಾಯಿತು.

ಮೂಲಗಳ ಪ್ರಕಾರ, ಲಾಕ್‌ಡೌನ್‌ ಅವಧಿಯಲ್ಲಿಯೂ ಮಂಗಳೂರಿನಿಂದ ಆಹಾರ ನಿಗಮದ ಗೋದಾಮಿನಿಂದ 10,000 ಟನ್‌ಗೂ ಅಧಿಕ ಅಕ್ಕಿ, ಹಲವು ಟನ್‌ಗೂ ಅಧಿಕ ಸಕ್ಕರೆಯನ್ನು ಲಕ್ಷದ್ವೀಪಕ್ಕೆ ಕಳುಹಿಸಿಕೊಡಲಾಗಿದೆ. ಸಾವಿರಾರು ಟನ್‌ಗಳಷ್ಟು ಇತರ ಆಹಾರ ಸಾಮಗ್ರಿಗಳು ರವಾನೆಯಾಗಿವೆ.

ಹೂಳು ತುಂಬಿ ಸಂಚಾರ ಸಂಕಷ್ಟ
ಇಲ್ಲಿ ಪ್ರಸ್ತುತ ಲಕ್ಷದ್ವೀಪದೊಂದಿಗೆ ಮಾತ್ರ ಸರಕು ಸಾಗಾಟ ವ್ಯವಹಾರ ನಡೆಯುತ್ತಿದೆ. ಸುಮಾರು 2,000ದಿಂದ 2,500 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಯಾಂತ್ರೀಕೃತ ನೌಕೆಗಳು ಮಾತ್ರ ಸಂಚರಿಸುತ್ತಿವೆ. ಹಲವು ವರ್ಷಗಳ ಹಿಂದೆ ಹಿಂದೆ 4,500ರಿಂದ 5,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಸರಕು ಹಡಗುಗಳು ಗುಜರಾತ್‌ನಿಂದ ಸೋಡಾ ಪುಡಿ ಸರಕು ಹೊತ್ತು ಬರುತ್ತಿದ್ದವು.

ದಾಖಲೆಯ ಆದಾಯ ಗಳಿಕೆ
ಲಾಕ್‌ಡೌನ್‌ ಸಮಯದಲ್ಲಿಯೂ ಕಾರವಾರ ಹಾಗೂ ಹಳೆ ಮಂಗಳೂರು ಬಂದರುಗಳಿಂದ 2.30 ಲಕ್ಷ ಮೆಟ್ರಿಕ್‌ ಟನ್‌ ಸರಕುಗಳನ್ನು ಸಾಗಾಟ ನಡೆಸಿ 3 ತಿಂಗಳುಗಳಲ್ಲಿ ಒಟ್ಟು 5.20 ಕೋಟಿ ರೂ. ಮೊತ್ತದ ಆದಾಯ ಗಳಿಸಲಾಗಿದೆ. ಇದು ಉಳಿದ ಸಮಯಕ್ಕೆ ಹೋಲಿಸಿದರೆ ದಾಖಲೆ.
 - ಕೋಟ ಶ್ರೀನಿವಾಸ ಪೂಜಾರಿ, ಸಚಿವರು, ಬಂದರು ಇಲಾಖೆ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.