ದ.ಕ.: 208 ಮಂದಿಗೆ ಕೋವಿಡ್ ದೃಢ ; ಸೋಂಕಿನಿಂದ ಏಳು ಮಂದಿ ಸಾವು; 118 ಮಂದಿ ಬಿಡುಗಡೆ
Team Udayavani, Jul 30, 2020, 9:22 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 208 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇ ವೇಳೆ ಸೋಮವಾರ ಮತ್ತು ಮಂಗಳವಾರ ಮೃತಪಟ್ಟ ಏಳು ಮಂದಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.
ಕೋವಿಡ್ ದೃಢಪಟ್ಟವರ ಪೈಕಿ 65 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 73 ಮಂದಿಗೆ ಇನ್ಫ್ಲೂಯೆನಾ ಲೈಕ್ ಇಲ್ನೆಸ್ನಿಂದ, 12 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಕೊರೊನಾ ದೃಢಪಟ್ಟಿದೆ. 58 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಕೊರೊನಾದಿಂದ ಗುಣಮುಖರಾದ 118 ಮಂದಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಇಲ್ಲಿಯವರೆಗೆ ಒಟ್ಟು 5,311 ಮಂದಿಗೆ ಕೊರೊನಾ ದೃಢ ಪಟ್ಟಿದ್ದು, ಈ ಪೈಕಿ ಒಟ್ಟು 2,456 ಮಂದಿ ಬಿಡುಗಡೆಗೊಂಡಿದ್ದಾರೆ. ಸದ್ಯ 2,715 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತಪಟ್ಟ ಏಳು ಮಂದಿಯ ಗಂಟಲ ದ್ರವ ಮಾದರಿಯ ಪರೀಕ್ಷಾ ವರದಿ ಬುಧವಾರ ಬಂದಿದ್ದು, ಎಲ್ಲರಿಗೂ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಈ ಪ್ರಕರಣಗಳಲ್ಲಿ ಮರಣದ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕರಿಸಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಮೂಲ್ಕಿ: 7 ಪ್ರಕರಣ
ಮೂಲ್ಕಿ: ತಾಲೂಕು ವ್ಯಾಪ್ತಿಯಲ್ಲಿ ಬುಧವಾರ 7 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಪಂಜಿನಡ್ಕದ 59 ವರ್ಷದ ಮಹಿಳೆ, ಕಿನ್ನಿಗೋಳಿಯ 46 ವರ್ಷದ ಪುರುಷ, ಕೆಮ್ರಾಲ್ನ 48 ವರ್ಷದ ಪುರುಷ, ಕಿಲೆಂಜೂರಿನ 50 ವರ್ಷದ ಪುರುಷ ಹಾಗೂ ಎಂಆರ್ಪಿಎಲ್ನ ಸಿಬಂದಿಗಳಾದ ಕಿನ್ನಿಗೋಳಿಯ 40, 50 ಮತ್ತು 44 ವರ್ಷದ ಪುರುಷರಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ