ಅನುಮೋದನೆ ಹಂತದಲ್ಲಿ 22 ಕೋ.ರೂ. ವೆಚ್ಚದ ಯೋಜನೆ

ಮೀನುಗಾರಿಕೆ ಜೆಟ್ಟಿ ; ಅಭಿವೃದ್ಧಿಗೊಳ್ಳದ ಮೂಲಸೌಕರ್ಯ

Team Udayavani, Sep 15, 2020, 4:39 AM IST

ಅನುಮೋದನೆ ಹಂತದಲ್ಲಿ 22 ಕೋ.ರೂ. ವೆಚ್ಚದ ಯೋಜನೆ

ಮಹಾನಗರ: ಮಂಗಳೂರು ಮೀನುಗಾರಿಕೆ ದಕ್ಕೆಯ ತೃತೀಯ ಹಂತದ ವಿಸ್ತರಣ ಜೆಟ್ಟಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ 22 ಕೋ.ರೂ. ವೆಚ್ಚದ ಯೋಜನೆಯು ರಾಜ್ಯ ಸರಕಾರದ ಅನುಮೋದನೆಗಾಗಿ ಕಾಯುತ್ತಿದೆ. ಜೆಟ್ಟಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿ ದ್ದರೂ ಮೂಲಸೌಕರ್ಯಗಳು ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದ ಬಳಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ತೃತೀಯ ಹಂತದ ಮೀನುಗಾರಿಕೆ ಜೆಟ್ಟಿಯನ್ನು ವ್ಯವಸ್ಥಿತವಾಗಿ ಪೂರ್ಣ ಪ್ರಮಾಣದಲ್ಲಿ ಮೀನು ಗಾರಿಕೆ ಚಟುವಟಿಕೆಗಳಿಗೆ ಬಳಕೆ ಮಾಡಲು ಇಲ್ಲಿ ಕೆಲವು ಮೂಲಸೌಕರ್ಯ ಕಾಮಗಾರಿಗಳು ತುರ್ತಾಗಿ ನಡೆಯಬೇಕಾಗಿದೆ. ಇದರಲ್ಲಿ ಮುಖ್ಯ ವಾಗಿ ಜೆಟ್ಟಿಯ ಆವರಣ ಕಾಂಕ್ರೀಟ್‌ ಕಾಮಗಾರಿ, ಸುಸಜ್ಜಿತ ರಸ್ತೆ, ನೀರು, ವಿದ್ಯುತ್‌ ಸಂಪರ್ಕ, ಆವರಣಗೋಡೆ, ಡ್ರೆಜ್ಜಿಂಗ್‌, ಶೌಚಾಲಯ ಸೌಲಭ್ಯಗಳು ಒಳಗೊಂಡಿದೆ. ಇದರ ಜತೆಗೆ ಮೀನುಗಾರರಿಗೆ ವಿಶ್ರಾಂತಿ ಕೊಠಡಿ, ಬಲೆ ದುರಸ್ತಿ ಶೆಡ್‌ಗಳ ನಿರ್ಮಾಣವೂ ಮೂಲ ಯೋಜನೆಯಲ್ಲಿ ಒಳಗೊಂಡಿವೆ. ಇದಕ್ಕಾಗಿ 22 ಕೋ.ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಮೀನುಗಾರಿಕೆ ಇಲಾಖೆಯಿಂದ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅಲ್ಲಿಂದ ಹಣಕಾಸು ಇಲಾಖೆಗೆ ಹೋಗಿದ್ದು, ಕೆಲವು ಪೂರಕ ಮಾಹಿತಿಗಳನ್ನು ಮೀನುಗಾರಿಕೆ ಇಲಾಖೆ ಕೇಳಿತ್ತು. ಈ ಮಾಹಿತಿಗಳನ್ನು ಮೀನುಗಾರಿಕೆ ಇಲಾಖೆ ಈಗಾಗಲೇ ಹಣಕಾಸು ಇಲಾಖೆಗೆ ರವಾನಿಸಿದ್ದು, ಇಲ್ಲಿಂದ ಆರ್ಥಿಕ ಅನುಮೋದನೆಯ ಬಳಿಕ ಸಚಿವ ಸಂಪುಟ ಸಭೆಗೆ ಸಲ್ಲಿಕೆಯಾಗಬೇಕಾಗಿದೆ.

ಸುಸಜ್ಜಿತವಾದ ಸಂಪರ್ಕ ರಸ್ತೆ ಅಗತ್ಯ
ತೃತೀಯ ಹಂತದ ಜೆಟ್ಟಿಯಲ್ಲಿ ಪ್ರಸ್ತುತ ಮೀನುಗಾರಿಕೆ ದೋಣಿಗಳನ್ನು ನಿಲ್ಲಿಸಲಾಗುತ್ತಿದೆ. ಜತೆಗೆ ಮೀನಿನ ಎಣ್ಣೆ ಹಾಗೂ ಗೊಬ್ಬರಕ್ಕೆ ಹೋಗುವ ಮೀನುಗಳನ್ನು ಅಲ್ಲಿ ಇಳಿಸಲಾಗುತ್ತಿದೆ. ದ್ವಿತೀಯ ಹಂತದ ಜೆಟ್ಟಿಯಿಂದ ತೃತೀಯ ಹಂತ ಜೆಟ್ಟಿಗೆ ಹೋಗಲು ನಡುವೆ ಇರುವ ಕ್ರೀಕ್‌ಗೆ ಸುಸಜ್ಜಿತವಾದ ಸಂಪರ್ಕ ರಸ್ತೆ ಅಗತ್ಯವಿದ್ದು, ಪ್ರಸ್ತುತ ತಾತ್ಕಾಲಿಕವಾಗಿ ರಸ್ತೆ ನಿರ್ಮಾಣ ಮಾಡಿ ಅದರ ಮೂಲಕ ಸಂಪರ್ಕ ಕಲ್ಪಿಸಲಾಗಿದೆ. ಇದಲ್ಲದೆ ಹೊಗೆಬಜಾರ್‌ನಲ್ಲಿ ಇರುವ ಸಂಪರ್ಕ ರಸ್ತೆಯನ್ನು ತೃತೀಯ ಹಂತದ ಜೆಟ್ಟಿಗೆ ಸಾಗಲು ಬಳಸಲಾಗುತ್ತಿದೆ.

ಸ್ಥಳಾವಕಾಶದ ಸಮಸ್ಯೆ
ಮಂಗಳೂರು ಮೀನುಗಾರಿಕೆ ದಕ್ಕೆಯಲ್ಲಿ ಪರ್ಸಿನ್‌ ಹಾಗೂ ಟ್ರಾಲ್‌ ಸೇರಿ ಒಟ್ಟು 1,200 ಬೋಟುಗಳು ಮೀನುಗಾರಿಕೆ ಚಟುವಟಿಕೆಗಳನ್ನು ನಡೆಸುತ್ತಿವೆ. ಪ್ರಸ್ತುತ ಈ ದಕ್ಕೆಯಲ್ಲಿ ಕೇವಲ 300 ದೋಣಿಗಳಿಗೆ ಮಾತ್ರ ನಿಲ್ಲಲು ಅವಕಾಶವಿದ್ದು, ಸ್ಥಳಾವಕಾಶದ ಸಮಸ್ಯೆ ತೀವ್ರವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಇಲ್ಲಿ ಒಂದರ ಹಿಂದೆ ಮತ್ತೂಂದು ದೋಣಿಗಳು ಸರದಿ ಸಾಲಿನಲ್ಲಿ ನಿಲ್ಲಬೇಕಾಗುತ್ತವೆ. ಒಂದು ದೋಣಿ ಇನ್ನೊಂದಕ್ಕೆ ತಾಗಿ ಹಾನಿಗೊಳ್ಳುವ ಸಮಸ್ಯೆ ಇಲ್ಲಿ ಸರ್ವೆಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ದಕ್ಕೆಯ ದಕ್ಷಿಣ ಭಾಗದಲ್ಲಿ 750 ಮೀ. ಹಾಗೂ ಬೆಂಗ್ರೆಯಲ್ಲಿ 450 ಮೀ.ಉದ್ದದ ಜೆಟ್ಟಿಯ 3ನೇ ಹಂತದ ವಿಸ್ತರಣೆ ಕಾಮಗಾರಿಗೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಯೋಜನೆಯ ವೇಳಾಪಟ್ಟಿಯಂತೆ 2015ಕ್ಕೆ ಪೂರ್ಣಗೊಂಡು ಉಪಯೋಗಕ್ಕೆ ಬಿಟ್ಟುಕೊಡಬೇಕಾಗಿತ್ತು. ಆದರೆ ಕೆಲವು ತಾಂತ್ರಿಕ ಸಮಸ್ಯೆ ಹಾಗೂ ಕಾನೂನು ಸಮಸ್ಯೆಗಳಿಂದಾಗಿ ಕಾಮಗಾರಿ ಕುಂಟುತ್ತಾ ಸಾಗಿತ್ತು.

ಶೀಘ್ರ ಅನುಮೋದನೆಯ ನಿರೀಕ್ಷೆ
ತೃತೀಯ ಹಂತದ ಮೀನುಗಾರಿಕೆ ಜೆಟ್ಟಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತಂತೆ ಮೀನುಗಾರಿಕೆ ಇಲಾಖೆ ರೂಪಿಸಿರುವ 22 ಕೋ.ರೂ. ಯೋಜನೆ ಅನುಮೋದನೆಯ ಹಂತದಲ್ಲಿದೆ. ಪ್ರಸ್ತುತ ಯೋಜನೆ ಕಡತ ರಾಜ್ಯ ಸರಕಾರದ ಆರ್ಥಿಕ ಇಲಾಖೆಯಲ್ಲಿದ್ದು ,ಇಲ್ಲಿ ಆರ್ಥಿಕ ಮಂಜೂರಾತಿಗೆ ಸಂಬಂಧಪಟ್ಟ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ರವಾನೆಯಾಗಲಿದ್ದು ಶೀಘ್ರ ಅನುಷ್ಠಾನಕ್ಕೆ ಬರುವ ನಿರೀಕ್ಷೆ ಇದೆ.
-ಕೋಟ ಶ್ರೀನಿವಾಸ ಪೂಜಾರಿ,  ಮೀನುಗಾರಿಕೆ ಮತ್ತು ಬಂದರು ಸಚಿವರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.