7 ಪಾರ್ಕ್‌ ಅಭಿವೃದ್ಧಿ:1.56 ಕೋಟಿ ರೂ. ವೆಚ್ಚದ ಕಾಮಗಾರಿ

ಮಹಾನಗರ ಪಾಲಿಕೆ ವ್ಯಾಪ್ತಿ

Team Udayavani, Dec 6, 2021, 6:11 PM IST

7 ಪಾರ್ಕ್‌ ಅಭಿವೃದ್ಧಿ:1.56 ಕೋಟಿ ರೂ. ವೆಚ್ಚದ ಕಾಮಗಾರಿ

ಮಹಾನಗರ: ಪಾಲಿಕೆ ವ್ಯಾಪ್ತಿಯ ಆರು ವಾರ್ಡ್‌ಗಳ ಏಳು ಪಾರ್ಕ್‌ಗಳು ಸುಮಾರು 1.56 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಉಳಿದಂತೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ.

ನಗರದ ಕೆಲವೊಂದು ಕಡೆಗಳಲ್ಲಿ ಈಗಾಗಲೇ ಇರುವ ಪಾರ್ಕ್‌ಗಳಲ್ಲಿ ನಿರ್ವಹಣೆಯ ಕೊರತೆ ಇದ್ದು, ಅಂತಹ ಪಾರ್ಕ್‌ಗಳನ್ನೂ ಈ ಯೋಜನೆಯಡಿ ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಪಾಲಿಕೆಗೆ ರಾಜ್ಯ ಸರಕಾರದ 2020-21ನೇ ಸಾಲಿನ 15ನೇ ಹಣಕಾಸು ಯೋಜ ನೆಯಡಿ ಸಾಮಾನ್ಯ ಸಹಾಯ ಧನವಾಗಿ 23 ಕೋಟಿ ರೂ. ಬಿಡುಗಡೆ ಯಾಗಿದ್ದು, ಇದ ರಲ್ಲಿ 1.56 ಕೋಟಿ ರೂ.ಗಳನ್ನು ಪಾರ್ಕ್‌ ಅಭಿವೃದ್ಧಿಗೆ ಮೀಸ ಲಿಡಲು ನಿರ್ಧರಿಸಲಾಗಿದೆ. ಬಹು ತೇಕ ಕಡೆಗಳಲ್ಲಿ ಈಗಾಗಲೇ ಟೆಂಡರ್‌ ಕರೆದು ಕಾಮ ಗಾರಿ ಪ್ರಗತಿಯಲ್ಲಿದೆ. ಬಂಗ್ರಕೂಳೂರು ವಾರ್ಡ್‌ನ ಕಲ್ಲಕಂಡ ಪಾರ್ಕ್‌ ಅಭಿವೃದ್ಧಿಗೆ 63 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್‌ ಅಂತಿಮಗೊಂಡಿದೆ. ಅದರಂತೆ ಪಾರ್ಕ್‌ಗೆ ಇಂಟರ್‌ಲಾಕ್‌, ವಾಕಿಂಗ್‌ ಟ್ರ್ಯಾಕ್‌ ಪೂರ್ಣ, ವಾಕಿಂಗ್‌ ಟ್ರ್ಯಾಕ್‌ಗೆ ಎಲ್‌ಇಡಿ ಬಲ್ಬ್ ಅಳವಡಿಕೆ ಸಹಿತ ಪಾರ್ಕ್‌ ಅಭಿವೃದ್ಧಿಗೊಳ್ಳಲಿದೆ. ಈ ಪಾರ್ಕ್‌ ಒಳಗೆ ಕೆರೆಯೊಂದಿದ್ದು, ಅದನ್ನು ಮುಡಾ ಮುಖೇನ ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಕಂಬÛ ವಾರ್ಡ್‌ನ ಭಗವತಿ ದೇವಸ್ಥಾನ ಬಳಿಯ ಪಾರ್ಕ್‌ಗೆ ತಡೆಗೋಡೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ವಾರ್ಡ್‌ಗೊಂದು ಪಾರ್ಕ್‌ ಪರಿಕಲ್ಪನೆ
ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗೊಂದು ಪಾರ್ಕ್‌ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪಾಲಿಕೆ ತಯಾರಿ ಮಾಡುತ್ತಿದೆ. ಪಾಲಿಕೆ ನಿಧಿ, ಮುಡಾ, ಸ್ಮಾರ್ಟ್‌ಸಿಟಿ ಅಥವಾ ಪಿಪಿಪಿ ಮಾಡೆಲ್‌ನಲ್ಲಿ ಪಾರ್ಕ್‌ ಅಭಿವೃದ್ಧಿಗೆ ಚಿಂತಿಸಲಾಗುತ್ತಿದೆ. ಒಂದು ವೇಳೆ ದೊಡ್ಡಗಾತ್ರದ ಉದ್ಯಾನಗಳು ನಿರ್ಮಾಣವಾಗಬೇಕಾದರೆ ನಗರದಲ್ಲಿ ಜಾಗದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ವಾರ್ಡ್‌ ಮಟ್ಟದಲ್ಲಿ ಮಿನಿ ಉದ್ಯಾನ ಅಭಿವೃದ್ಧಿಗೆ ಪಾಲಿಕೆ ಚಿಂತಿಸಿದೆ. ಇದರಿಂದಾಗಿ ವಾರ್ಡ್‌ ಮಟ್ಟದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಮಳೆ ಕಡಿಮೆಯಾದ ಬಳಿಕ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ಉಳಿದಂತೆ ಮೂಡಾದಿಂದ ಅಭಿವೃದ್ಧಿ ಗೊಳಿಸಲು ಚಿಂತಿಸಲಾಗಿದೆ.

ಮಂಗಳಾದೇವಿ ವಾರ್ಡ್‌ನ ಮಂಗಳಾನಗರ ಮತ್ತು ಜೆಪ್ಪು ಪಾರ್ಕ್‌ ಒಳಗೆ ಜಾರುಬಂಡಿ ಸಹಿತ ಮಕ್ಕಳ ಆಟಿಕೆಗಳನ್ನು ಅಳವಡಿಸಲಾಗಿದೆ. ಪೈಂಟಿಂಗ್‌ ಕೆಲಸ ಇನ್ನಷ್ಟೇ ನಡೆಯಬೇಕಿದೆ.

ಉಳಿದಂತೆ ಕದ್ರಿ ಉತ್ತರ ವಾರ್ಡ್‌ ಪಾರ್ಕ್‌ನ ಈಡನ್‌ ಕ್ಲಬ್‌ ಬಳಿ, ಪದವು ಪಶ್ಚಿಮ ವಾರ್ಡ್‌ ಪಾರ್ಕ್‌, ಮಣ್ಣಗುಡ್ಡೆ ವಾರ್ಡ್‌ನ ಮೇಯರ್‌ ಬಂಗ್ಲೆ ಬಳಿ ಪಾರ್ಕ್‌ ಅಭಿವೃದ್ಧಿ ಕಾಮಗಾರಿ ಪ್ರಗತಿ ಹಂತದಲ್ಲಿದೆ.

ಪಾರ್ಕ್‌ ಅಭಿವೃದ್ಧಿಗೆ ಆದ್ಯತೆ
ಸಾರ್ವಜನಿಕರಿಗೆ ವಾಕಿಂಗ್‌ ಸೇರಿದಂತೆ ವಾಯು ವಿಹಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪಾರ್ಕ್‌ಗಳ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಮುಂದಾಗಿದೆ. ಪಾಲಿಕೆಗೆ ರಾಜ್ಯ ಸರಕಾರದ 15ನೇ ಹಣಕಾಸು ಯೋಜನೆಯಡಿ ಬಂದ ಸಾಮಾನ್ಯ ಸಹಾಯ ಧನದಲ್ಲಿ 1.56 ಕೋಟಿ ವೆಚ್ಚದಲ್ಲಿ ಪಾರ್ಕ್‌ ಅಭಿವೃದ್ಧಿಗೊಳಿಸಲಾಗುತ್ತಿದೆ. ಕೆಲವೆಡೆ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೂ ಕೆಲವೆಡೆ ಟೆಂಡರ್‌ ಅಂತಿಮವಾಗಿದೆ.
– ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.