70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ಗೋಪಾಲನಾಥ್‌ ಅವರ ಫೋಟೋ, ಸ್ಯಾಕ್ಸೋಫೋನ್‌ ಅಳವಡಿಸಲಾಗಿದೆ

Team Udayavani, May 2, 2024, 2:36 PM IST

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ಮಹಾನಗರ: ಸಾರ್ವಜನಿಕರ ಉಪಯೋಗಕ್ಕೆಂದು ಸುಮಾರು ನಾಲ್ಕು ತಿಂಗಳ ಹಿಂದೆ ಮಲ್ಲಿಕಟ್ಟೆಯಲ್ಲಿ ಉದ್ಘಾಟನೆಗೊಂಡ ಹೈಟೆಕ್‌ ಪಾರ್ಕ್‌ ಸದ್ಯ ನಿರ್ವಹಣೆಯಿಲ್ಲದೆ ಸೊರಗಿದೆ. ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಪಾರ್ಕ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿತ್ತು. ಪಾರ್ಕ್‌ನ ಒಳಭಾಗದಲ್ಲಿರುವ ಗಿಡ ಗಳು ಸದ್ಯ ಬಿಸಿಲಿನ ತಾಪಕ್ಕೆ ಬಾಡಿ ಹೋಗಿದೆ. ಪಾರ್ಕ್‌ ಸುಂದರ ಕಾಣಲು ಹೂದೋಟ ನಿರ್ಮಾಣಗೊಂಡಿದ್ದು, ನೀರು ಹಾಯಿಸಲು ಸ್ಪಿಂಕ್ಲರ್‌ ವ್ಯವಸ್ಥೆಯಿದೆ.

ನಿರ್ವಹಣೆಯಿಲ್ಲದೆ ಬಹುತೇಕ ಗಿಡಗಳು ಒಣಗಿ ಹೋಗಿದೆ. ಗಿಡಗಳಲ್ಲಿ ಹಸಿರು ಮಾಯವಾಗಿದ್ದು, ಕಸ, ಪ್ಲಾಸ್ಟಿಕ್‌ ಬಾಲ್‌, ಚೀಲಗಳು, ಮರಗಳ ಎಲೆಗಳು ಬಿದ್ದು, ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುವುದು ಕಷ್ಟವಾಗಿದೆ. ಪಾರ್ಕ್‌ಗೆ ಆಗಮಿಸಿದವರಿಗೆಂದು ಕುಳಿತು ಕೊಳ್ಳಲು ಆಸನ ಮತ್ತು ಕುಟೀರ ರೀತಿಯ ಜಾಗವನ್ನು ನಿರ್ಮಿಸಲಾಗಿದೆ. ಇವುಗಳು ಧೂಳಿನಿಂದ ಕೂಡಿದೆ. ಹಕ್ಕಿಗಳ ಹಿಕ್ಕೆ ಈ ಆಸನಗಳ ಮೇಲೆಯೇ ಬಿದ್ದಿದ್ದು ಸ್ವತ್ಛಗೊಳಿಸದಿರುವುದರಿಂದ, ಇಲ್ಲಿ ಕುಳಿತುಕೊಳ್ಳಲು ಅಸಾಧ್ಯವಾದ ಪರಿಸ್ಥಿತಿ ಇದೆ. ಕೆಲವು ಬಾರಿ ಕುಡುಕರು ಕೂಡ ಇಲ್ಲೇ ಮಲಗುತ್ತಾರೆ. ಈ ಹಿನ್ನೆಲೆಯಲ್ಲಿ ಇಷ್ಟೊಂದು ಖರ್ಚು ಮಾಡಿದ ಪಾರ್ಕ್‌ ನಿರ್ವಹಣೆಗೆ ಮಾಡಬೇಕು ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.

“ಕದ್ರಿ ಗೋಪಾಲನಾಥ್‌’ ಹೆಸರು ನಾಮಕರಣ
ಮಲ್ಲಿಕಟ್ಟೆ ಪಾರ್ಕ್‌ಗೆ ಕದ್ರಿ ಗೋಪಾಲನಾಥ್‌ ಅವರ ಹೆಸರು ಇಡಬೇಕೆಂದು ರಾಜ್ಯ ಸರಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅಂತಿಮ ಆದೇಶದ ಬಳಿಕ ಆ ಹೆಸರು ನಾಮಕರಣಗೊಳ್ಳಲಿದೆ. ಹುಲ್ಲುಹಾಸು, ಹೂವಿನ ಗಿಡ, ಕುಳಿತುಕೊಳ್ಳಲು ಆಸನ, ಕಮಾನುಗಳ ರಚನೆ, ನೀರಿನ ಹರಿಯುವಿಕೆಯ, ಮಕ್ಕಳ ಪ್ಲೇ ಏರಿಯಾ ಮೊದಲಾದವುಗಳನ್ನು ಪಾರ್ಕ್‌ ಹೊಂದಿದೆ. ವಿದ್ಯುತ್‌ ದೀಪದ ವ್ಯವಸ್ಥೆಯನ್ನು ಮಾಡುವ ಮೂಲಕ ರಾತ್ರಿ ವೇಳೆಯಲ್ಲಿ ಪಾರ್ಕ್‌ ಸುಂದರವಾಗಿ ಕಾಣುವಂತೆ ಮಾಡಲಾಗಿದೆ. ಕದ್ರಿ ಗೋಪಾಲನಾಥ್‌ ಅವರ ಫೋಟೋ, ಸ್ಯಾಕ್ಸೋಫೋನ್‌ ಅಳವಡಿಸಲಾಗಿದೆ.

ಬೆಳಗ್ಗೆ 7.30ರಿಂದ ರಾತ್ರಿ ವರೆಗೆ ಕದ್ರಿ ಗೋಪಾಲನಾಥ ಅವರ ಸ್ಯಾಕ್ಸೋಫೋನ್‌ ಕೇಳಲು ಅವಕಾಶ ಇದೆ. ಪಾರ್ಕ್‌ ಒಳಗೆ ಇರುವ ನಗರ ಕೇಂದ್ರ ಗ್ರಂಥಾಲಯದ ಶಾಖೆಗೆ ಪೈಂಟಿಂಗ್‌ ಮಾಡುವ ಕೆಲಸವೂ ನಡೆದಿದೆ. ನೂತನ ಪಾರ್ಕ್‌ನಲ್ಲಿ ಮುಂದಿನ ದಿನಗಳಲ್ಲಿ ಆಕ್ಯುಪಂಕ್ಚರ್‌ ಟ್ರಾಕ್‌ ನಿರ್ಮಾಣಗೊಳ್ಳಲಿದೆ. ಆದರೆ, ಈಗಿರುವ ಪಾರ್ಕ್‌ನ ನಿರ್ವಹಣೆ ಸರಿಯಾದರೆ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾದೀತು.

ನಿರ್ಲಕ್ಷಕ್ಕೆ ಒಳಗಾದ ಪಾರ್ಕ್‌ ಗೆ ಹೊಸ ರೂಪ !
ಮಲ್ಲಿಕಟ್ಟೆ ಪಾರ್ಕ್‌ ಈ ಹಿಂದೆ ನಿರ್ಲಕ್ಷಕ್ಕೆ ಒಳಗಾಗಿತ್ತು. ಈ ಪಾರ್ಕ್‌ ಒಳಗಡೆಯ ಗ್ರಂಥಾಲಯ ಆಕರ್ಷಣೆ ಪಡೆದಿತ್ತು. ಆದರೆ ಇಲ್ಲಿನ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು ಗ್ರಂಥಾಲಯ ಪ್ರವೇಶಕ್ಕೆ ಹಿಂಜರಿಯುತ್ತಿದ್ದರು. ಸುತ್ತಮುತ್ತಲೂ ಗಿಡ-ಗಂಟಿ ಬೆಳೆದಿತ್ತು. ಕಲ್ಲು ಬೆಂಚುಗಳು ಮುರಿದು ಅನಾಥ ಸ್ಥಿತಿಯಲ್ಲಿತ್ತು. ಪಾರ್ಕ್‌ ಸುತ್ತಮುತ್ತಲೂ ಮದ್ಯದ ಬಾಟಲ್‌ಗ‌ಳು ಬಿದ್ದಿತ್ತು. ಭಿಕ್ಷುಕರು ಕೂಡ ಇಲ್ಲೇ ಮಲಗುತ್ತಿದ್ದರು. ಬೀದಿ ನಾಯಿಗಳಿಗೆ ಕೂಡ ಇದೇ ಆವಾಸಸ್ಥಾನವಾಗಿತ್ತು. ಮಲ್ಲಿಕಟ್ಟೆ ಸುತ್ತಮುತ್ತ ಯಾವುದೇ ಪಾರ್ಕ್‌ ಇಲ್ಲದ ಕಾರಣ, ಮಲ್ಲಿಕಟ್ಟೆ ಪಾರ್ಕ್‌ ಸಾರ್ವಜನಿಕರ ವಾಯುವಿಹಾರಕ್ಕೆ ಅನುಕೂಲವಾಗಿತ್ತು. ಇದೀಗ ಮಲ್ಲಿಕಟ್ಟೆ ಪಾರ್ಕ್‌ ಕಾಯಕಲ್ಪದ ಹಾದಿಯಲ್ಲಿದ್ದು ಆಕರ್ಷಣೆ ಪಡೆಯಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.