ಮಂಗಳೂರು ಆರ್‌ಟಿಒದಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ!

ಮಂಜೂರಾದ 97 ಹುದ್ದೆಗಳ ಪೈಕಿ ಹಾಲಿ ಇರುವುದು ಕೇವಲ 27 ಮಂದಿ

Team Udayavani, Oct 13, 2020, 11:39 PM IST

ಮಂಗಳೂರು ಆರ್‌ಟಿಒದಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ!

ಮಹಾನಗರ: ಮಂಗಳೂರಿನ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ ಇದ್ದು, ಇದರಿಂದಾಗಿ ಹೊಸ ವಾಹನಗಳ ನೋಂದಣಿ, ಚಾಲನ ಪರವಾನಿಗೆ ಪಡೆಯುವುದು ಸಹಿತ ಸಾರ್ವಜನಿಕರಿಗೆ ಬಹಳ ಹತ್ತಿರವಾಗಿರುವ ಈ ಇಲಾಖೆಯಲ್ಲಿ ಆಗಬೇಕಾಗಿರುವ ಬಹಳಷ್ಟು ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ.

ರಾಜ್ಯ ಸರಕಾರದಿಂದ ಮಂಗಳೂರು ಸಾರಿಗೆ ಇಲಾಖೆಗೆ ಮಂಜೂರಾದ 97 ಹುದ್ದೆಗಳ ಪೈಕಿ ಕೇವಲ 27 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದಂತೆ ಬರೋಬ್ಬರಿ 58 ಹುದ್ದೆಗಳಲ್ಲಿ ಸಿಬಂದಿಯೇ ಇಲ್ಲದೆ ಖಾಲಿ ಇವೆ. ಹತ್ತಾರು ಕೆಲಸಗಳಿಗಾಗಿ ಪ್ರತಿದಿನವೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ಹೋಗುವ ಆರ್‌ಟಿಒ ದಂಥಹ ಮಹತ್ವದ ಇಲಾಖೆಯಲ್ಲಿಯೇ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿರಬೇಕಾದರೆ ಜನರು ಪಡುತ್ತಿರುವ ಸಂಕಷ್ಟ ಹೇಳತೀರದ್ದು. ಇನ್ನೊಂದೆಡೆ, 97 ಮಂದಿ ಇರಬೇಕಾದ ಕಚೇರಿಯಲ್ಲಿ ಬೆರಳೆಣಿಕೆಯಷ್ಟು ಸಿಬಂದಿ ಇರಬೇಕಾದರೆ, ಅವರ ಮೇಲೆಯೂ ಅಷ್ಟೇ ಕೆಲಸದ ಒತ್ತಡವಿರುತ್ತದೆ. ಈ ಬಗ್ಗೆ ಇಲ್ಲಿನ ಸಾರಿಗೆ ಇಲಾಖೆಯಿಂದಲೂ ರಾಜ್ಯ ಸರಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಲಿಲ್ಲ ಎನ್ನುವುದು ವಾಸ್ತವ.

ಯಾವೆಲ್ಲಾ ಹುದ್ದೆ ಖಾಲಿ ಇದೆ?
ಮಂಗಳೂರು ಸಾರಿಗೆ ಕಚೇರಿಯಲ್ಲಿ ಮಂಜೂ ರಾದ 97 ಹುದ್ದೆಗಳ ಪೈಕಿ 58 ಹುದ್ದೆಗಳು ಖಾಲಿ ಇದ್ದು, ಮುಖ್ಯವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ 2 ಹುದ್ದೆಗಳ ಪೈಕಿ ಒಂದು ಹುದ್ದೆ ಮಾತ್ರ ಭರ್ತಿಯಾಗಿದೆ. ಲೆಕ್ಕ ಪತ್ರಾಧಿಕಾರಿ ಒಂದು ಹುದ್ದೆ ಖಾಲಿ, ಅಧೀಕ್ಷಕರು 4 ಹುದ್ದೆಯಲ್ಲಿ 3 ಹುದ್ದೆ ಕಾರ್ಯನಿರ್ವಹಿಸುತ್ತಿದ್ದು, ಒಬ್ಬರನ್ನು ಬೇರೆ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಪ್ರಥಮ ದರ್ಜೆ ಸಹಾಯಕರು ಮಂಜೂರಾದ 13 ಹುದ್ದೆಯಲ್ಲಿ 7 ಹುದ್ದೆ ಖಾಲಿ ಇದ್ದು, ಒಬ್ಬರನ್ನು ಬೇರೆ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಲೆಕ್ಕ ಪರಿಶೋಧಕ 2 ಹುದ್ದೆಯಲ್ಲಿ ಒಂದು ಹುದ್ದೆ ಖಾಲಿ ಇದೆ. ಶೀಘ್ರ ಲಿಪಿಕಾರ ಮಂಜೂರಾದ ಒಂದು ಹುದ್ದೆಯಲ್ಲಿ ಯಾವುದೇ ಭರ್ತಿಯಾಗಿಲ್ಲ. ಬೆರಳಚ್ಚುಗಾರ 3 ಹುದ್ದೆಯಲ್ಲಿ 2 ಹುದ್ದೆ ಕಾರ್ಯನಿರ್ವಹಿಸುತ್ತಿದ್ದು, ಒಬ್ಬರು ಬೇರೆ ಕಚೇರಿಗೆ ನಿಯೋಜನೆಗೊಂಡಿದ್ದಾರೆ. ದ್ವಿತೀಯ ದರ್ಜೆ ಸಹಾಯಕರು 33 ಮಂಜೂರಾದ ಹುದ್ದೆಗಳ ಪೈಕಿ 4 ಹುದ್ದೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 25 ಹುದ್ದೆ ಖಾಲಿ ಇದೆ. 4 ಮಂದಿಯನ್ನು ಬೇರೆ ಕಚೇರಿಗೆ ನಿಯೋಜಿಸಲಾಗಿದೆ. 3 ಚಾಲಕ ಹುದ್ದೆಯಲ್ಲಿ 2 ಹುದ್ದೆ ಖಾಲಿ ಇದ್ದು, ಒಬ್ಬರನ್ನು ಬೇರೆ ಕಚೇರಿಗೆ ನಿಯೋಜಿಸಿದೆ. 4 ಅಟೆಂಡರ್‌ ಹುದ್ದೆಯಲ್ಲಿ 1 ಹುದ್ದೆ ಕಾರ್ಯನಿರ್ವಹಿಸುತ್ತಿದ್ದು, 3 ಹುದ್ದೆ ಖಾಲಿ, ಡಿ. ದರ್ಜೆ ನೌಕರರ 5 ಹುದ್ದೆಯಲ್ಲಿ 4 ಹುದ್ದೆ ಖಾಲಿ ಇದ್ದು, ಒಬ್ಬರನ್ನು ಬೇರೆ ಕಚೇರಿಗೆ ನಿಯೋಜಿಸಿದೆ. ಖಜಾನೆ ಕಾವಲುಗಾರ ಮಂಜೂರಾದ 2 ಹುದ್ದೆಯಲ್ಲಿ 2 ಹುದ್ದೆ ಖಾಲಿ ಇದೆ. ರಾತ್ರಿ ಕಾವಲುಗಾರ ಮಂಜೂರಾದ ಒಂದು ಹುದ್ದೆಯಲ್ಲಿ ಆ ಹುದ್ದೆ ಖಾಲಿ ಇದೆ. ಹಿರಿಯ ಮೋಟರು ವಾಹನ ನಿರೀಕ್ಷಕನ 8 ಹುದ್ದೆಯಲ್ಲಿ ಒಂದು ಹುದ್ದೆ ಖಾಲಿ ಇದ್ದು, 2 ಮಂದಿಯನ್ನು ಬೇರೆ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಮೋಟರು ವಾಹನ ನಿರೀಕ್ಷಕರ 12 ಹುದ್ದೆಯಲ್ಲಿ 9 ಹುದ್ದೆ ಖಾಲಿ ಇದ್ದು, ಒಬ್ಬರು ಬೇರೆ ಕಚೇರಿಗೆ ನಿಯೋಜನೆಗೊಂಡಿರುತ್ತಾರೆ.

12 ಮಂದಿ ಬೇರೆ ಕಚೇರಿಗೆ
ಪ್ರಸ್ತುತ ಮಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ 58 ಹುದ್ದೆಗಳು ಖಾಲಿ ಇದ್ದು, ಇಲ್ಲಿನ ಕೆಲಸಗಳಿಗೇ ಸಿಬಂದಿ ಕೊರತೆಯಿದೆ. ಪರಿಸ್ಥಿತಿ ಹೀಗಿರುವಾಗ, ಒಟ್ಟು 12 ಮಂದಿ ಇಲ್ಲಿನ ಸಿಬಂದಿಯು ಬೇರೆ ಕಚೇರಿಗಳಿಗೆ ನಿಯೋಜನೆಗೊಂಡಿರುವುದು ವಿಶೇಷ. ಮುಖ್ಯವಾಗಿ ಅಧೀಕ್ಷಕರು-1, ಪ್ರಥಮ ದರ್ಜೆ ಸಹಾಯಕರು-1, ಬೆರಳಚ್ಚುಗಾರರು-1, ದ್ವಿತೀಯ ದರ್ಜೆ ಸಹಾಯಕರು-4, ಚಾಲಕರು-1, ಡಿ. ದರ್ಜೆ ನೌಕರರು-1, ಹಿರಿಯ ಮೋಟರು ವಾಹನ ನಿರೀಕ್ಷಕರ-2 ಹಾಗೂ ಒಬ್ಬರು ಮೋಟರು ವಾಹನ ನಿರೀಕ್ಷಕರು ಬೇರೆಡೆಗೆ ನಿಯೋಜನೆಗೊಂಡಿದ್ದಾರೆ.

ಹುದ್ದೆಗಳ ವಿವರ
ಮಂಜೂರಾದ ಹುದ್ದೆ: 97
ಪ್ರಸ್ತುತ ಕಾರ್ಯ
ನಿರ್ವಹಿಸುತ್ತಿರುವ ಹುದ್ದೆ: 27
ಖಾಲಿ ಹುದ್ದೆ: 58
ನಿಯೋಜನೆ ಮೇರೆಗೆ ಬೇರೆ ಕಚೇರಿಗೆ: 12

ಸರಕಾರದ ಗಮನಕ್ಕೆ ತರಲಾಗಿದೆ
ಮಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಮಂಜೂರಾದ 97 ಹುದ್ದೆಗಳಲ್ಲಿ 58 ಹುದ್ದೆಗಳು ಖಾಲಿ ಇರುವುದು ನಿಜ. ಈ ಹುದ್ದೆಗಳ ಭರ್ತಿ ಕುರಿತು ರಾಜ್ಯ ಸರಕಾರದ ಗಮನಕ್ಕೆ ತರಲಾಗಿದೆ. ಈಗಿರುವ ಕಡಿಮೆ ಸಿಬಂದಿಯಿಂದಾಗಿ ಅವರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ.
-ವರ್ಣೇಕರ್‌,  ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.